ಕ್ವಾರಂಟೈನ್ ಕೇಂದ್ರಗಳಲ್ಲಿಲ್ಲ ಸೌಕರ್ಯ-ಬಿಗಿ ಭದ್ರತೆ
Team Udayavani, May 16, 2020, 10:51 AM IST
ಸೇಡಂ: ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಕಡೆ ಸ್ಥಾಪಿಸಲಾದ ಕೆಲವು ಕ್ವಾರಂಟೈನ್ ಕೇಂದ್ರಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಎದುರಾಗಿದೆ ಎಂದು ತಿಳಿದು ಬಂದಿದೆ.
ಪಟ್ಟಣದಲ್ಲಿ ಈಗಾಗಲೇ ಎರಡು ಕ್ವಾರಂಟೈನ್ ಕೇಂದ್ರಗಳಲ್ಲಿ 30 ಜನರನ್ನು ಇರಿಸಲಾಗಿದೆ. ಜತೆಗೆ ಆಯಾ ಗ್ರಾಮಗಳಲ್ಲಿನ ಶಾಲೆಗಳಲ್ಲೂ ಸಹ ನೂರಾರು ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಆದರೆ ಬಹುತೇಕ ಕಡೆಗಳಲ್ಲಿನ ಕ್ವಾರಂಟೈನ್ ಕೇಂದ್ರಗಳಲ್ಲಿ ಸರಿಯಾದ ಮೂಲಸೌಲಭ್ಯವಿಲ್ಲ. ಕೆಲವೆಡೆ ಶೌಚಾಲಯಗಳಿದ್ದರೂ ಸಾಮೂಹಿಕವಾಗಿ ಬಳಕೆ ಮಾಡಬೇಕು. ಇನ್ನೂ ಕೆಲವೆಡೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಪಟ್ಟಣದಲ್ಲಿರುವ ವಸತಿ ನಿಲಯಗಳ ಪೈಕಿ ಕೋಡ್ಲಾ ಕ್ರಾಸ್ ಬಳಿಯ ಅಲ್ಪಸಂಖ್ಯಾತರ ಬಾಲಕರ ವಸತಿ ನಿಲಯದಲ್ಲಿ ಮಾತ್ರ ಶೌಚಾಲಯವಿದೆ.
ಇನ್ನುಳಿದಲ್ಲಿ ಸಾಮೂಹಿಕವಾಗಿ ಶೌಚಾಲಯ ಬಳಕೆ ಅನಿವಾರ್ಯ. ಕ್ವಾರಂಟೈನ್ ಇದ್ದವರ ಪೈಕಿ ಒಬ್ಬರಲ್ಲಿ ಸೋಂಕು ಕಂಡುಬಂದರೂ ಎಲ್ಲರಿಗೂ ತಗುಲುವ ಆತಂಕ ವ್ಯಕ್ತವಾಗಿದೆ. ಅನೇಕ ವರ್ಷಗಳಿಂದ ಪೊಲೀಸ್ ಇಲಾಖೆಗೆ ಸಿಬ್ಬಂದಿ ಕೊರತೆ ಇದೆ. ಈಗ ಕ್ವಾರಂಟೈನ್ ಕೇಂದ್ರಗಳಿಗೆ ಭದ್ರತೆ ಕಲ್ಪಿಸುವುದು ದುಸ್ತರವಾಗಿದೆ. ಇದರಿಂದ ಗ್ರಾಪಂಗಳ ಮೂಲಕ ಭದ್ರತಾ ಸಿಬ್ಬಂದಿ ನೇಮಿಸಲಾಗುತ್ತಿದೆ.
ಈಗಾಗಲೇ 680 ಜನರನ್ನು ತಾಲೂಕಿನೆಲ್ಲೆಡೆ ಕ್ವಾರಂಟೈನ್ ಮಾಡಲಾಗಿದೆ. 83 ಕೇಂದ್ರಗಳನ್ನು ಗುರುತಿಸಲಾಗಿದೆ. ಪ್ರಸ್ತುತ 28 ಬಳಕೆ ಮಾಡಲಾಗುತ್ತಿದೆ. ಕ್ವಾರಂಟೈನ್ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು.
ಬಸವರಾಜ ಬೆಣ್ಣೆಶಿರೂರ,
ತಹಶೀಲ್ದಾರ್ ಸೇಡಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ