ಲಾರಿಯಲ್ಲಿ ಯುಪಿಗೆ ಹೊರಟವರಿಗೆ‌ ತಡೆ


Team Udayavani, May 16, 2020, 12:08 PM IST

16-May-2

ದಾವಣಗೆರೆ: ಉತ್ತರಪ್ರದೇಶದ ಪ್ರಯಾಗ್‌ರಾಜ್‌ಗೆ (ಕಾಶಿ) ಹೊರಟಿದ್ದವರನ್ನು ಶಿವಪ್ಪಯ್ಯ ಸರ್ಕಲ್‌ ಬಳಿ ವಿಚಾರಣೆಗೊಳಪಡಿಸಿದ ಸಂದರ್ಭ.

ದಾವಣಗೆರೆ: ಉತ್ತರಪ್ರದೇಶದ ಪ್ರಯಾಗ್‌ರಾಜ್‌ (ಕಾಶಿ) ಮತ್ತು ಪ್ರತಾಪಘಡಕ್ಕೆ ತೆರಳುತ್ತಿದ್ದ 70ಕ್ಕೂ ಹೆಚ್ಚು ಜನರನ್ನು ಶುಕ್ರವಾರ ನಗರದಲ್ಲಿ ಪೊಲೀಸರು ತಡೆ ಹಿಡಿದ ಘಟನೆ ನಡೆದಿದೆ.

ದಾವಣಗೆರೆ ನಗರದ ರಸ್ತೆ ಬದಿಗಳಲ್ಲಿ ಪಾನಿಪುರಿ, ಟೀ ಮಾರಾಟ ಮಾಡುತ್ತಿದ್ದವರು ಲಾಕ್‌ಡೌನ್‌ ನಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದು, ಹೇಗಾದರೂ ಮಾಡಿ ತಮ್ಮ ಸ್ವಂತ ಊರುಗಳಿಗೆ ತೆರಳಬೇಕೆಂದು ಪ್ರಯತ್ನಿಸಿದ್ದಾರೆ. ಆ ನಿಟ್ಟಿನಲ್ಲಿ ಶಿವಪ್ಪಯ್ಯ ವೃತ್ತದ ಬಯಲು ಜಾಗದಲ್ಲಿ ಲಾರಿಯೊಂದರಲ್ಲಿ ತೆರಳುತ್ತಿರುವ ಬಗ್ಗೆ ಮಾಹಿತಿ ಪಡೆದ ಕೆಟಿಜೆ ನಗರ ಪೊಲೀಸರು ಸ್ಥಳಕ್ಕಾಗಮಿಸಿ ಎಲ್ಲರ ವಿಚಾರಣೆ ನಡೆಸಿದರು.

ದಾವಣಗೆರೆಯಲ್ಲಿ ಹಲವಾರು ದಿನಗಳಿಂದ ಪಾನಿಪುರಿ, ಟೀ ಮಾರಾಟ ಇತರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದೇವೆ. ಲಾಕ್‌ ಡೌನ್‌ ಆದ ಮೇಲೆ ವ್ಯಾಪಾರ ನಡೆಸಲು ಆಗುತ್ತಲೇ ಇಲ್ಲ. ಎಷ್ಟು ದಿನಗಳ ಕಾಲ ಕೆಲಸ ಇಲ್ಲದೆ ಮನೆಯಲ್ಲಿ ಇರಲಿಕ್ಕಾಗುತ್ತದೆ. ಬೇರೆ ರಾಜ್ಯದಲ್ಲಿ ದುಡಿಮೆ ಇಲ್ಲದೆ ಜೀವನ ನಡೆಸುವುದು ಆಗುವುದೇ ಇಲ್ಲ. ಹಾಗಾಗಿ ಏನಾದರೂ ಮಾಡಿ ನಮ್ಮ ಊರಿಗೆ ಹೋಗಬೇಕು ಅಂದುಕೊಂಡಿದ್ದೇವೆ. ಏನೇ ಆದರೂ ಊರಿಗೆ ಹೋಗಿಯೇ ಹೋಗುತ್ತೇವೆ ಎಂದು ತಮ್ಮ ಊರಿಗೆ ತೆರಳು ಅಣಿಯಾಗಿದ್ದ ಅನೇಕರು ತಿಳಿಸಿದರು.

ಎಂಸಿಸಿ ಎ, ಬಿ ಬ್ಲಾಕ್‌ನಲ್ಲಿ ತಿಂಗಳಿಗೆ 6,500 ರೂಪಾಯಿ ಬಾಡಿಗೆಯಂತೆ ಇದ್ದೇವೆ. ನಮ್ಮ ಮನೆಯ ಮಾಲಿಕರು ಮನೆ ಖಾಲಿ ಮಾಡುವಂತೆ ಹೇಳಿಲ್ಲ. ಮನೆ ಬಿಡುವಂತೆಯೂ ಒತ್ತಾಯ ಮಾಡುತ್ತಿಲ್ಲ. ಯಾವುದೇ ರೀತಿಯ ತೊಂದರೆ ಕೊಟ್ಟಿಲ್ಲ. ನಿಮ್ಮ ಕೈಯಲ್ಲಿ ದುಡ್ಡು ಇದ್ದರೆ ಬಾಡಿಗೆ ಕೊಡಿ, ಇಲ್ಲ ಅಂದರೆ ಮುಂದೆ ಕೊಡಿ ಎಂದು ಹೇಳುತ್ತಾರೆ. ದುಡಿಮೆಯೇ ಇಲ್ಲ ಎಂದ ಮೇಲೆ 2-3 ತಿಂಗಳ ಬಾಡಿಗೆ ನೀಡಲು ಆಗುವುದೇ ಇಲ್ಲ. ಹಾಗಾಗಿ ನಮ್ಮ ಊರಿಗೆ ಹೋಗುತ್ತಿದ್ದೇವೆ ಎಂದು ಅಳಲು ವ್ಯಕ್ತಪಡಿಸಿದರು.

ಕಾಶಿ (ಪ್ರಯಾಗ್‌ರಾಜ್‌), ಪ್ರತಾಪ್‌ಘಡ್‌ ಗೆ ಹೋಗಬೇಕು ಎಂದು ಸೇವಾ ಸಿಂಧು ಯೋಜನೆಯಡಿ ಅಪ್ಲಿಕೇಷನ್‌ ಹಾಕಿದ್ದೇವೆ. ಮೂರು ದಿನಗಳಿಂದ ಜಿಲ್ಲಾಧಿಕಾರಿ ಆμàಸ್‌ಗೆ ನಡೆದುಕೊಂಡು ಹೋಗುವುದು, ರಾತ್ರಿ ತನಕ ಕಾಯುವುದು, ಪುನಃ ಬರುವುದೇ ಆಗುತ್ತಿದೆ. ಜಿಲ್ಲಾಡಳಿತ ನಮಗೆ ಅನುಮತಿಯನ್ನೇ ನೀಡುತ್ತಿಲ್ಲ. ನಮಗೆ ಅನುಮತಿ ಕೊಟ್ಟರೆ ನಮ್ಮ ಊರುಗಳಿಗೆ ಹೋಗಿ ಹೇಗೋ ಜೀವನ ಮಾಡುತ್ತೇವೆ. ನಮಗೇನು ಬೇಡ. ಊರಿಗೆ ಹೋಗಲಿಕ್ಕೆ ಅವಕಾಶ ಕೊಟ್ಟರೆ ಸಾಕು ಎಂದು ಗೋಗರೆದರು.

ನಮ್ಮ ಊರುಗಳಿಗೆ ಹೋದರೂ ನಮ್ಮ ಮನೆಗೆ ಹೋಗಲಿಕ್ಕೆ ಆಗುವುದಿಲ್ಲ. 14 ದಿನ ಕ್ವಾರಂಟೈನ್‌ನಲ್ಲಿ ಇರಬೇಕು ಎಂಬುದು ಗೊತ್ತಿದೆ. ಅಲ್ಲಿ ಕಷ್ಟವಾದರೂ ಪರವಾಗಿಲ್ಲ. ನಾವು ಹೋಗಲಿಕ್ಕೆ ಅವಕಾಶ ಕೊಟ್ಟರೆ ಸಾಕು. ನನ್ನ ಮಗ ಬಹಳ ದಿನ ಅನಾರೋಗ್ಯದಿಂದ ಬಳಲುತ್ತಿದ್ದಾನೆ. ದುಡ್ಡೇ ಇಲ್ಲ. ಹಂಗಾಗಿ ಹಾಸ್ಪಿಟಲ್‌ ಗೆ ಅಡ್ಮಿಟ್‌ ಮಾಡಲಿಕ್ಕೂ ಆಗುತ್ತಿಲ್ಲ ಎಂದು ಅಜಯ್‌ ಕುಮಾರ್‌ ಎಂಬಾತ ಅಳಲು ತೋಡಿಕೊಂಡರು. ಹೆಂಗೋ ಊರಿಗೆ ಹೋಗುತ್ತೇವೆ ಅಂತ ಮನೆ ಖಾಲಿ ಮಾಡಿಕೊಂಡು ಸಾಮಾನು ಎಲ್ಲಾ ತೆಗೆದುಕೊಂಡು ಬಂದಿದ್ದೇವೆ. ಆ ಕಡೆ ಊರಿಗೆ ಹೋಗುವಂತೆ ಇಲ್ಲ. ಈ ಕಡೆ ನಾವು ಬಾಡಿಗೆ ಇದ್ದ ಮನೆಗೂ ಹೋಗುವಂತಿಲ್ಲ.
ಸಣ್ಣ ಮಕ್ಕಳನ್ನು ಕಟ್ಟಿಕೊಂಡು ಎಲ್ಲಿ ಅಂತಾ ಇರೋದು ಎಂದು ಪ್ರಶ್ನಿಸಿದರು.

70 ಜನ ಇದ್ದರು
ತಮ್ಮ ಊರುಗಳಿಗೆ ಹೋಗಬೇಕು ಎಂದು ನಿರ್ಧರಿಸಿದವರು ಪ್ರತಿ ದಿನ ಮಾರುಕಟ್ಟೆಗೆ ಹೋಗಿ ತಮ್ಮ ರಾಜ್ಯಕ್ಕೆ ಹೋಗುವ ಲಾರಿ ಇತರೆ ವಾಹನ ಹುಡುಕಾಟ ನಡೆಸುತ್ತಿದ್ದರು. ಕೊನೆಗೂ ಉತ್ತರ ಪ್ರದೇಶಕ್ಕೆ ವಾಪಾಸ್ಸಾಗುವ ಲಾರಿ ಸಿಕ್ಕಿದೆ. ಚಾಲಕನೊಂದಿಗೆ ಮಾತುಕತೆ ಮುಗಿಸಿಕೊಂಡು ಊರಿಗೆ ತೆರಳಲು ಸಜ್ಜಾಗಿ ಶಿವಪ್ಪಯ್ಯ ವೃತ್ತದ ಖಾಲಿ ಜಾಗದಲ್ಲಿ ನಿಲ್ಲಿಸಿದ್ದ ಲಾರಿ ಹತ್ತಲು ಬಂದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.  70ಕ್ಕೂ ಹೆಚ್ಚು ಜನರು ಹೊರಟ್ಟಿದ್ದರು

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.