61 ವರ್ಷದ ವೃದ್ಧ ಗುಣಮುಖ
Team Udayavani, May 17, 2020, 5:13 AM IST
ಗದಗ: ಕೋವಿಡ್-19 ಸೋಂಕಿನಿಂದ ಗುಣಮುಖರಾದ 61 ವರ್ಷದ (ಪಿ. 912) ವೃದ್ಧ ಶನಿವಾರ ಇಲ್ಲಿನ ನಿಗದಿತ ಕೋವಿಡ್-19 ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದರು. ಇದರಿಂದ ಜಿಮ್ಸ್ ವೈದ್ಯರ ಔಷಧೋಪಾಚಾರದಿಂದಾಗಿ ಐವರು ಕೋವಿಡ್ ವಿರುದ್ಧದ ಹೋರಾಟದಲ್ಲಿ ಜಯ ಸಾಧಿಸಿರುವುದು ಜಿಲ್ಲೆಯ ಸಾರ್ವಜನಿಕರಲ್ಲಿ ಸಮಾಧಾನ ತಂದಿದೆ.
ಇಲ್ಲಿನ ಗಂಜಿಬಸವೇಶ್ವರ ವೃತ್ತದ ನಿವಾಸಿಯಾಗಿರುವ (ಪಿ. 912) ವೃದ್ಧನಿಗೆ ಏ. 30ರಂದು ಸೋಂಕು ದೃಢಪಟ್ಟಿತ್ತು. ಅದೇ ಪ್ರದೇಶದ ಪಿ. 514 ಪ್ರಕರಣದೊಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ಹರಡಿದೆ ಎನ್ನಲಾಗಿತ್ತು. ಸೋಂಕು ದೃಢ ಪಡುತ್ತಿದ್ದಂತೆ ಮಲ್ಲಸಮುದ್ರದ ಕೋವಿಡ್ ಆಸ್ಪತ್ರೆಗೆ ದಾಖಲಿಸಿದ್ದು, ಕಳೆದ 15 ದಿನಗಳ ಕಾಲ ವೈದ್ಯರು ಹಗಲಿರುಳು ಶ್ರಮಿಸಿದ ಫಲವಾಗಿ ಕೋವಿಡ್ ಸೋಂಕಿನಿಂದ ಪಿ. 912 ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಸೋಂಕಿನಿಂದ ಸಂಪೂರ್ಣಗುಣಮುಖರಾಗಿ ಶನಿವಾರ ಆಸ್ಪತ್ರೆಯಿಂದ ಹೊರಬರುತ್ತಿದ್ದಂತೆ ಜಿಮ್ಸ್ ನಿರ್ದೇಶಕ ಡಾ| ಪಿ.ಎಸ್. ಭೂಸರೆಡ್ಡಿ ಫಲಪುಷ್ಪ ನೀಡಿ, ಶುಭ ಕೋರಿದರು. ಮಾಸ್ಕ್, ಸ್ಯಾನಿಸೈಸರ್ ಹಾಗೂ ದಿನನಿತ್ಯದ ಅವಶ್ಯಕ ವಸ್ತುಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ಬಿ.ಸಿ. ಕರಿಗೌಡರ, ವೈದ್ಯಕೀಯ ಸಿಬ್ಬಂದಿ ಚಪ್ಪಾಳೆ ತಟ್ಟುವ ಮೂಲಕ ಬೀಳ್ಕೊಟ್ಟರು.
ಜಿಲ್ಲೆಯ ಐವರು ಗುಣಮುಖ: ಇದರಿಂದಾಗಿ ಜಿಲ್ಲೆಯಲ್ಲಿ ಪತ್ತೆಯಾಗಿರುವ ಒಟ್ಟು 12 ಕೋವಿಡ್ ಪ್ರಕರಣಗಳಲ್ಲಿ ಐವರು ಗುಣಮುಖರಾಗಿದ್ದಾರೆ. ಮೇ 1ರಂದು ರಂಗನವಾಡದ ಸೋಂಕಿತ (ಪಿ. 304) ಮಹಿಳೆ ಜಿಲ್ಲೆಯಲ್ಲಿ ಮೊದಲ ಬಾರಿಗೆಗುಣಮುಖರಾಗಿದ್ದರು. ಬಳಿಕ ಮೇ 9ರಂದು ಮೂವರು (ಪಿ. 370, ಪಿ. 396, ಪಿ. 514) ಸೋಂಕಿತರು ಸಂಪೂರ್ಣ ಗುಣಮುಖರಾಗಿದ್ದಾರೆ.
ಇದೀಗ ಗಂಜೀಬಸವೇಶ್ವರ ಭಾಗದ 61 ವರ್ಷದ ಹಿರಿಯ ನಾಗರಿಕರೊಬ್ಬರು ಬಿಡಗಡೆಯಾಗಿದ್ದಾರೆ. ಇದರಿಂದ ಜಿಮ್ಸ್ ವೈದ್ಯರ ಔಷಧೋಪಾಚಾರದೊಂದಿಗೆ ಜಿಲ್ಲೆಯ ಐವರು ಕೋವಿಡ್ ವಿರುದ್ಧದ ಹೋರಾಟದಲ್ಲಿ ಜಯ ಸಾಧಿ ಸಿರುವುದು ಸಾರ್ವಜನಿಕರಲ್ಲಿ ಸಮಾಧಾನ ತಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ