ಸಾವಿರಾರು ಮಂದಿಗೆ “ಉದ್ಯೋಗ ಖಾತ್ರಿ’


Team Udayavani, May 17, 2020, 6:54 AM IST

ಸಾವಿರಾರು ಮಂದಿಗೆ “ಉದ್ಯೋಗ ಖಾತ್ರಿ’

ತೀರ್ಥಹಳ್ಳಿ: ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಯಲ್ಲಿ ಸಾವಿರಾರು ಮಂದಿಗೆ ಕೂಲಿ ಕೆಲಸ ನೀಡಲು ಸಾಧ್ಯವಾಗಿದ್ದು, ಕೂಲಿ ಕೆಲಸ ಮಾಡಲು ಮುಂದೆ ಬರುವ ಪ್ರತಿಯೊಬ್ಬರಿಗೂ ತಕ್ಷಣ ಜಾಬ್‌ ಕಾರ್ಡ್‌ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ತಿಳಿಸಿದರು.

ತೀರ್ಥಹಳ್ಳಿ ತಾಲೂಕಿನ ವಿವಿಧ ಗ್ರಾಮಗಳಿಗೆ ಶನಿವಾರ ಭೇಟಿ ನೀಡಿ ಉದ್ಯೋಗ ಖಾತ್ರಿ ಯೋಜನೆ  ಯಡಿ ಕೈಗೊಂಡಿರುವ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಪ್ರಸ್ತುತ ಸರಾಸರಿ ಪ್ರತಿದಿನ 49ಸಾವಿರ ಮಂದಿ ಕೂಲಿ ಕೆಲಸದಲ್ಲಿ ತೊಡಗಿದ್ದು, ಪ್ರತಿಯೊಂದು ಗ್ರಾಪಂ ವ್ಯಾಪ್ತಿಯಲ್ಲಿ ಕೆಲಸವನ್ನು ನಿಗದಿಪಡಿಸಲಾಗಿದೆ. ಅಂತರ್ಜಲ ಚೇತನ ಯೋಜನೆಯಡಿ 32836 ಕಾಮಗಾರಿಗಳನ್ನು ಗುರುತಿಸಲಾಗಿದ್ದು, ವ್ಯವಸ್ಥಿತವಾಗಿ ಅನುಷ್ಟಾನಗೊಳಿಸಲಾಗುತ್ತಿದೆ. ಕೆಲಸದ ಸ್ಥಳದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಮಾತ್ರವಲ್ಲದೆ ಕೂಲಿ ಕೆಲಸದವರಿಗೆ ಕುಡಿಯುವ ನೀರು ಇತ್ಯಾದಿ ಮೂಲಸೌಲಭ್ಯಗಳನ್ನು ಸಹ ಕಲ್ಪಿಸಬೇಕು ಎಂದು ಸಚಿವರು ಈ ಸಂದರ್ಭದಲ್ಲಿ ತಿಳಿಸಿದರು.

ಕಾಮಗಾರಿಗಳ ಪರಿಶೀಲನೆ: ಸಚಿವರು ಉದ್ಯೋಗ ಖಾತ್ರಿ ಯೋಜನೆಯಡಿ ಕೆರೆ ಹೂಳೆತ್ತುವ ಕಾಮಗಾರಿ ನಡೆಯುತ್ತಿರುವ ನೊಣಬೂರು ಗ್ರಾಪಂನ ಮಲ್ಲೇಸರ ಜೋಡು ಕೆರೆ ಹೂಳು ಮತ್ತು ದಂಡೆ ನಿರ್ಮಾಣ ಕಾಮಗಾರಿ ಪರಿಶೀಲನೆ ನಡೆಸಿದರು. ಇದೇ ರೀತಿ ಅರಗ ಗ್ರಾಪಂ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಚೆಕ್‌ಬಂಡ್‌ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕಾರ್ಮಿಕರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಅಧಿಕಾರಿಗಳೊಂದಿಗೆ ಸಭೆ: ಗ್ರಾಮೀಣ ಭಾಗದ ನಿರುದ್ಯೋಗಿ ಜನರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಕಲ್ಪಿಸಬೇಕು. ಇದರಿಂದ ಈ ಸಂಕಷ್ಟಮಯ ಸಂದರ್ಭದಲ್ಲಿ ಆರ್ಥಿಕ ಪುನಶ್ಚೇತನ ಹೊಂದಲು ಸಾಧ್ಯವಾಗಲಿದೆ. ನಗರ ಪ್ರದೇಶಗಳಿಂದ ಗ್ರಾಮೀಣ ಪ್ರದೇಶಗಳಿಗೆ ಲಾಕ್‌ಡೌನ್‌ ಸಂದರ್ಭದಲ್ಲಿ ವಲಸೆ ಬಂದಿರುವವರು, ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ಬಯಸಿ ಅರ್ಜಿ ಸಲ್ಲಿಸಿದರೆ ತಕ್ಷಣ ಜಾಬ್‌ ಕಾರ್ಡ್‌ ನೀಡಬೇಕು ಎಂದು ಸಚಿವರು ಬಳಿಕ ತೀರ್ಥಹಳ್ಳಿ ಸಭಾಂಗಣದಲ್ಲಿ ನಡೆಸಿದ ಅಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಿದರು. ಹೊರರಾಜ್ಯಗಳಿಂದ ಬಂದಿರುವ ವ್ಯಕ್ತಿಗಳಿಂದಾಗಿ ಹಸಿರು ವಲಯದಲ್ಲಿದ್ದ ಜನರ ನೆಮ್ಮದಿಗೆ ಭಂಗವುಂಟಾಗಿದೆ. ಈ ಬಗ್ಗೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಜನರು ಆತಂಕಪಡುವ ಅಗತ್ಯವಿಲ್ಲ ಎಂದರು.

ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿರುವ ಅಗ್ರಹಾರ ಹೋಬಳಿಯ ಹುಂಚದಕಟ್ಟೆವರೆಗೆ ಮತ್ತು ಆಗುಂಬೆ ಹೋಬಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿ ತುಂಗಾನದಿಯಿಂದ ನೀರನ್ನು ಒದಗಿಸುವ ಅಗತ್ಯವಿದೆ. ಇತಿಹಾಸದಲ್ಲಿ ಮೊದಲ ಬಾರಿಗೆ ನೊಣಬೂರು ಗ್ರಾಪಂ ವ್ಯಾಪ್ತಿಯ ಬಾವಿಗಳ ನೀರಿನಲ್ಲಿ ಫ್ಲೊರೈಡ್‌ ಅಂಶ ಕಂಡುಬಂದಿದೆ ಎಂದರು.

ಜಿಪಂ ಅಧ್ಯಕ್ಷೆ ಜ್ಯೋತಿ ಎಸ್‌. ಕುಮಾರ್‌, ಸದಸ್ಯರಾದ ಕೆ.ಶ್ರೀನಿವಾಸ್‌, ಅಪೂರ್ವ ಶರ , ತಾಪಂ ಸದಸ್ಯರಾದ ಚಂದವಳ್ಳಿ ಸೋಮಶೇಕರ್‌, ಲಕ್ಷ್ಮೀ  ಉಮೇಶ್‌, ಗೀತಾಶೆಟ್ಟಿ, ಗ್ರಾಪಂ ಅಧ್ಯಕ್ಷ ಧರಣೇಶ್‌, ಜಿಪಂ ಸಿಇಒ ವೈಶಾಲಿ, ತಹಶೀಲ್ದಾರ್‌ ಡಾ| ಎಸ್‌.ಬಿ. ಶ್ರೀಪಾದ, ತಾಪಂ ಇಒ ಆಶಾಲತಾ, ಅಂಬುತೀರ್ಥ ರಾಘವೇಂದ್ರ, ನಾರಾಯಣ ರಾವ್‌, ಶಿವಕುಮಾರ್‌ ಇದ್ದರು.

ಟಾಪ್ ನ್ಯೂಸ್

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi: 400 ಮಹಿಳೆಯರ ಮೇಲೆ  ಪ್ರಜ್ವಲ್‌ ಅತ್ಯಾಚಾರ – ರಾಹುಲ್‌ ಗಾಂಧಿ

Rahul Gandhi: 400 ಮಹಿಳೆಯರ ಮೇಲೆ  ಪ್ರಜ್ವಲ್‌ ಅತ್ಯಾಚಾರ – ರಾಹುಲ್‌ ಗಾಂಧಿ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Economy

ಉತ್ಪಾದನ ವಲಯದಲ್ಲಿ ಜಿಗಿತ: ಆರ್ಥಿಕತೆಗೆ ಮತ್ತಷ್ಟು ಬಲ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.