ಇನ್ನು ಜಿಲ್ಲೆಯಲ್ಲೇ ಕೋವಿಡ್ ತಪಾಸಣೆ


Team Udayavani, May 17, 2020, 9:23 AM IST

ಇನ್ನು ಜಿಲ್ಲೆಯಲ್ಲೇ ಕೋವಿಡ್ ತಪಾಸಣೆ

ಬಾಗಲಕೋಟೆ: ಕೋವಿಡ್ ವೈರಸ್‌ ಸ್ಯಾಂಪಲ್‌ ತಪಾಸಣೆಗೆ ಜಿಲ್ಲಾ ಕೋವಿಡ್‌-19 ಆಸ್ಪತ್ರೆಯಲ್ಲಿ ಯಂತ್ರಗಳ ಅಳವಡಿಕೆ ಪೂರ್ಣಗೊಂಡಿದ್ದು, ಐಸಿಎಂಆರ್‌ನಿಂದಲೂ ಪರವಾನಗಿ ದೊರೆತಿದೆ. ಮೇ 17ರಿಂದ ಜಿಲ್ಲಾ ಆಸ್ಪತ್ರೆಯಲ್ಲೇ ಕೋವಿಡ್‌-19ಪರೀಕ್ಷೆ ಆರಂಭಿಸಲಾಗುವುದು ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.

ಶನಿವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ| ಅರುಣ ಮಿಸ್ಕಿನ್‌ ಅವರು ನೀಡಿದ ಒಂದು ಯಂತ್ರ ಹಾಗೂ ರಾಜ್ಯ ಸರ್ಕಾರ ಪೂರೈಸಿದ ಯಂತ್ರ ಸೇರಿ ಎರಡು ಯಂತ್ರಗಳು ಜಿಲ್ಲಾ ಆಸ್ಪತ್ರೆಯಲ್ಲಿವೆ. ಅದಕ್ಕೆ ಬೇಕಾದ ಎಲ್ಲ ರೀತಿಯ ಕಿಟ್‌ಗಳೂ ಬಂದಿದ್ದು, ಮೇ 17ರಿಂದ ಪರೀಕ್ಷೆ ನಡೆಯಲಿವೆ. ಒಂದು ಗಂಟೆಗೆ 5 ಸ್ಯಾಂಪಲ್‌ ಪರೀಕ್ಷೆಯ ಸಾಮರ್ಥ್ಯವಿದ್ದು, ನಿತ್ಯ 110 ಸ್ಯಾಂಪಲ್‌ ಪರೀಕ್ಷೆ ಮಾಡಲಾಗುವುದು. ನೆಗೆಟಿವ್‌ ವರದಿ ಬಂದರೆ ಇಲ್ಲಿಯೇ ಘೋಷಣೆ ಮಾಡಲಾಗುವುದು. ಒಂದು ವೇಳೆ ಪಾಸಿಟಿವ್‌ ಪ್ರಕರಣ ಬಂದರೆ, ಆ ಸ್ಯಾಂಪಲ್‌ ಮತ್ತೂಮ್ಮೆ ಪರೀಕ್ಷೆಗೆ ಬೆಂಗಳೂರಿಗೆ ಕಳುಹಿಸಲಾಗುವುದು ಎಂದು ವಿವರಿಸಿದರು.

ಮೆಕ್ಕೆಜೋಳ; ಜಿಲ್ಲೆಗೆ 30 ಕೋಟಿ: ಲಾಕ್‌ಡೌನ್‌ ಸಂದರ್ಭದಲ್ಲಿ ಮೆಕ್ಕೆಜೋಳ ಬೆಳೆದ ರೈತರು ಕೆಲವರು ಮಾರಾಟ ಮಾಡಿದರೆ, ಇನ್ನೂ ಕೆಲವರಿಗೆ ಮಾರಾಟ ಮಾಡಲು ಆಗಿಲ್ಲ. ಜಿಲ್ಲೆಯ ಸುಮಾರು 61 ಸಾವಿರ ರೈತರು ಮೆಕ್ಕೆಜೋಳ ಬೆಳೆದಿದ್ದು, ಅವರಿಗೆ ತಲಾ 5 ಸಾವಿರ ಪ್ರೋತ್ಸಾಹಧನ ನೀಡಲಾಗುವುದು. ಜಿಲ್ಲೆಗೆ ಸುಮಾರು 30 ಕೋಟಿ ಹಣ ಬರಲಿದೆ ಎಂದರು.

ಖಾತ್ರಿ ಯೋಜನೆಗೆ 208 ಕೋಟಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಗೆ 208 ಕೋಟಿ ರೂ. ಅನುದಾನ ದೊರೆತಿದೆ. ಈ ಹಣದಲ್ಲಿ ಸುಮಾರು 42 ಲಕ್ಷ ಮಾನವ ದಿನಗಳ ಸೃಜನೆಗೆ ಅವಕಾಶವಿದೆ. ಬೇರೆ ಜಿಲ್ಲೆಗೆ ದುಡಿಯಲು ವಲಸೆ ಹೋಗಿ ಮರಳಿ ಬಂದ ಕಾರ್ಮಿಕರಿಗೂ ಸ್ಥಳೀಯವಾಗಿ ಉದ್ಯೋಗ ನೀಡಲಾಗುವುದು. ಯಾರೂ ವಲಸೆ ಹೋಗುವುದು ಬೇಡ. ಅಲ್ಲದೇ ಯಾರಿಗೆ ಪಡಿತರ ಚೀಟಿ ಇಲ್ಲವೋ ಅವರು ಕೂಡಲೇ ಅರ್ಜಿ ಸಲ್ಲಿಸಿದರೆ, ತಕ್ಷಣ ಪಡಿತರ ಚೀಟಿ ನೀಡಲಾಗುವುದು ಎಂದು ಕಾರಜೋಳ ತಿಳಿಸಿದರು.

ಈ ವರೆಗೆ ಜಿಲ್ಲೆಯಿಂದ 4725 ಸ್ಯಾಂಪಲ್‌ ಪರೀಕ್ಷೆಗೆ ಕಳುಹಿಸಿದ್ದು, 4597 ನೆಗೆಟಿವ್‌ ಬಂದಿದ್ದು, 71 ಪಾಸಿಟಿವ್‌ ಬಂದಿವೆ. 42 ಸ್ಯಾಂಪಲ್‌ಗ‌ಳ ವರದಿ ಬರಬೇಕಿದೆ. ಮೇ 17ರಿಂದ ಜಿಲ್ಲೆಯಲ್ಲೇ ಕೊರೊನಾ ಪರೀಕ್ಷೆ ನಡೆಯಲಿದ್ದು, ಸ್ಥಳೀಯವಾಗಿ ವರದಿ ಬರಲಿದೆ. ಅಲ್ಲದೇ ಜಿಲ್ಲೆಯ 14 ಮೊಬೈಲ್‌ ಕ್ಲಿನಿಕ್‌ನಲ್ಲಿ 7497 ಜನರಿಗೆ ಸ್ಕ್ರಿನಿಂಗ್‌ ಮಾಡಲಾಗಿದೆ. ಜಿಲ್ಲೆಯ 13 ಕಂಟೇನ್ಮೆಂಟ್‌ ಪ್ರದೇಶಗಳಲ್ಲಿ 4 ಪ್ರದೇಶಗಳನ್ನು ಕೈಬಿಡಲಾಗಿದೆ ಎಂದು ಹೇಳಿದರು.

ಹೊರ ರಾಜ್ಯದಿಂದ ಇನ್ನೂ ಬರಲಿದ್ದಾರೆ 590 ಜನ: ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಈಗಾಗಲೇ 31 ಸಾವಿರದಷ್ಟು ಜನರು ಬಂದಿದ್ದಾರೆ. ಲಾಕ್‌ಡೌನ್‌ ಸಡಿಲಿಕೆ ಬಳಿಕ ಬೇರೆ ರಾಜ್ಯದಿಂದ 1144 ಹಾಗೂ ಬೇರೆ ಜಿಲ್ಲೆಯಿಂದ 3310 ಜನರು ಜಿಲ್ಲೆಗೆ ಬಂದಿದ್ದಾರೆ. ಅಲ್ಲದೇ ಇನ್ನೂ 590 ಜನ ಬೇರೆ ರಾಜ್ಯದಿಂದ ಹಾಗೂ 1656 ಜನ ಬೇರೆ ಜಿಲ್ಲೆಯಿಂದ ಬರಲು ಅನುಮತಿ ಕೇಳಿದ್ದಾರೆ. ಹೊರ ರಾಜ್ಯದಿಂದ ಬಂದವರಿಗೆ ಕಡ್ಡಾಯವಾಗಿ ಕ್ವಾರಂಟೈನ್‌ ಮಾಡಲಾಗುವುದು ಎಂದು ಹೇಳಿದರು.

ಸಂಸದ ಪಿ.ಸಿ. ಗದ್ದಿಗೌಡರ, ಶಾಸಕ ಡಾ|ವೀರಣ್ಣ ಚರಂತಿಮಠ, ಡಿಸಿ ಕ್ಯಾಪ್ಟನ್‌ ಡಾ| ರಾಜೇಂದ್ರ, ಎಸ್ಪಿ ಲೋಕೇಶ ಜಗಲಾಸರ, ಜಿ.ಪಂ. ಸಿಇಒ ಗಂಗೂಬಾಯಿ ಮಾನಕರ, ಡಿಎಚ್‌ಒ ಡಾ|ಅನಂತ ದೇಸಾಯಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ಪ್ರಕಾಶ ಬಿರಾದಾರ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.