ಕಲಬುರಗಿಯಲ್ಲಿ ಒಂದೇ ದಿನ 10 ಜನರಿಗೆ ಕೋವಿಡ್: ಶತಕದ ಗಡಿದಾಟಿದ ಸೋಂಕಿತರ ಸಂಖ್ಯೆ!
Team Udayavani, May 17, 2020, 1:49 PM IST
ಕಲಬುರಗಿ: ದೇಶದಲ್ಲೇ ಕೋವಿಡ್-19 ಸೋಂಕಿಗೆ ಮೊದಲು ಬಲಿಯಾದ ಕಲಬುರಗಿಯಲ್ಲಿ ಮಹಾಮಾರಿ ಸೋಂಕಿತರ ಸಂಖ್ಯೆ ಶತಕದ ಗಡಿದಾಟಿದೆ. ರವಿವಾರ ಒಂದೇ ದಿನ ಹತ್ತು ಜನರಿಗೆ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 104ಕ್ಕೆ ಏರಿಕೆಯಾಗಿದೆ.
ಈಗಾಗಲೇ ಕೋವಿಡ್ ಹೆಮ್ಮಾರಿಯಿಂದ ತತ್ತರಿಸಿರುವ ಕಲಬುರಗಿಯಲ್ಲಿ ಮಹಾರಾಷ್ಟ್ರದ ಮುಂಬೈನಿಂದ ಬಂದ ವಲಸಿಗರಿಂದಲೂ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ರವಿವಾರ ಸೋಂಕು ಪತ್ತೆಯಾದ 10 ಜನರಲ್ಲಿ ಆರು ಜನರು ಮುಂಬೈಯಿಂದ ಬಂದವರಾಗಿದ್ದಾರೆ.
ಇದರೊಂದಿಗೆ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನದಲ್ಲಿ ಅತ್ಯಧಿಕ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೊದಲು ಒಂದು ದಿನಕ್ಕೆ ಅತಿ ಹೆಚ್ಚು ಎಂದರೆ ಎಂಟು ಜನರಿಗೆ ಸೋಂಕು ಪತ್ತೆಯಾಗಿತ್ತು.
ಮಕ್ಕಳಿಗೂ ಸೋಂಕು: ಮುಂಬೈಯಿಂದ ಮರಳಿದ ಆರು ಜನ ಸೋಂಕಿತರ ಪೈಕಿ ಮೂವರು ಮಕ್ಕಳೂ ಸೇರಿದ್ದು, ಆತಂಕ ಹೆಚ್ಚಿಸುವಂತೆ ಮಾಡಿದೆ.
ಜಿಲ್ಲೆಯ ವಿವಿಧ ಕ್ವಾರಂಟೈನ್ ಕೇಂದ್ರಗಳಲ್ಲಿದ್ದ 10 ವರ್ಷದ ಬಾಲಕ (ಪಿ-1131), 36 ವರ್ಷದ ಪುರುಷ (ಪಿ-1133), 13 ವರ್ಷದ ಬಾಲಕ (ಪಿ-1135), 7 ವರ್ಷದ ಬಾಲಕ (ಪಿ-1136), 40 ವರ್ಷದ ಪುರುಷ (ಪಿ-1137) ಮತ್ತು 55 ವರ್ಷದ ಪುರುಷ (ಪಿ-1138)ನಿಗೆ ಸೋಂಕು ದೃಢಪಟ್ಟಿದೆ.
ವೃದ್ಧನಿಂದ ಮತ್ತಿಬ್ಬರಿಗೆ: ಕಂಟೈನ್ಮೆಂಟ್ ಝೋನ್ ಸಂಪರ್ಕದಿಂದ ಮೇ 11ರಂದು ಮೃತಪಟ್ಟ 60 ವರ್ಷದ ವೃದ್ಧ (ಪಿ-927) ಸಂಪರ್ಕದಿಂದಲೂ ಮತ್ತೆ ಇಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ. 55 ವರ್ಣದ ಪುರುಷ (ಪಿ-1132) ಹಾಗೂ 50 ವರ್ಷದ ಮಹಿಳೆ (ಪಿ-1134)ಗೆ ಹರಡಿದೆ.
ಇನ್ನೊಂದು ಪ್ರಕರಣದಲ್ಲಿ ಕಂಟೈನ್ಮೆಂಟ್ ಝೋನ್ ಸಂಪರ್ಕಕ್ಕೆ ಬಂದ 55 ವರ್ಷದ ಪುರುಷ (ಪಿ-1130)ನಿಗೆ ಕೋವಿಡ್ ಕಾಣಿಸಿಕೊಂಡಿದೆ. ಮತ್ತೊಂದು ಪ್ರಕರಣದಲ್ಲಿ 35 ವರ್ಷದ ಪುರುಷ (ಪಿ-1129)ನಿಗೆ ಸೋಂಕು ಪತ್ತೆಯಾಗಿದ್ದು, ಈತನಿಗೆ ಹೇಗೆ ಸೋಂಕು ಹರಡಿತ್ತು ಎಂಬುದನ್ನು ಅಧಿಕಾರಿಗಳು ಪತ್ತೆ ಹಚ್ಚುತ್ತಿದ್ದಾರೆ
ಒಟ್ಟು 104 ಕೋವಿಡ್ ಸೋಂಕಿತರಲ್ಲಿ 47 ಜನರು ಗುಣಮುಖರಾಗಿದ್ದಾರೆ. 7 ಸೋಂಕಿತರು ಮಹಾಮಾರಿಗೆ ತುತ್ತಾಗಿದ್ದಾರೆ. ಉಳಿದಂತೆ 50 ಕೋವಿಡ್ ಪೀಡಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Bengaluru: ಇನ್ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್; ಅಪರಿಚಿತನ ಮೇಲೆ ಕೇಸು
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ