ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದವರ ಮಾಹಿತಿ ಸಂಗ್ರಹಕ್ಕೆ ಸೂಚನೆ


Team Udayavani, May 18, 2020, 8:23 AM IST

mahiti soochane

ಹಾವೇರಿ: ಜಿಲ್ಲೆಯಲ್ಲಿರುವ ಖಾಸಗಿ ನರ್ಸಿಂಗ್‌ ಹೋಂ, ಕ್ಲಿನಿಕ್‌ ಹಾಗೂ ಆಯುರ್ವೇದಿಕ್‌ ವೈದ್ಯರ ಬಳಿ ತಪಾಸಣೆಗೆ ಬಂದವರ ಮಾಹಿತಿ ಸಂಗ್ರಹಿಸಬೇಕು ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಜಿ ಜಿಲ್ಲೆಯ ಎಲ್ಲ ತಹಶೀಲ್ದಾರರಿಗೆ  ಸೂಚಿಸಿದರು. ತಹಶೀಲ್ದಾರರೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಅವರು ಈ ಸೂಚನೆ ನೀಡಿದರು.

ಖಾಸಗಿ ಆಸ್ಪತ್ರೆಯಲ್ಲಿ ಜ್ವರ, ಕೆಮ್ಮು, ಶೀತ, ನೆಗಡಿ ಲಕ್ಷಣಗಳ ಕುರಿತಂತೆ ಚಿಕಿತ್ಸೆ ಪಡೆದಿದ್ದರೆ ಅದರ ಮಾಹಿತಿಯನ್ನು  ತಂತ್ರಾಂಶದಲ್ಲಿ ಅಪ್‌ ಲೋಡ್‌ ಮಾಡಬೇಕು. ಮೆಡಿಕಲ್‌ ಶಾಪ್‌ ಗಳಲ್ಲಿ ಈ ರೋಗ ಲಕ್ಷಣಗಳಿಗೆ ನಿರಂತರ ಮಾತ್ರೆಗಳನ್ನು ಖರೀದಿಸಿದವರ ಮಾಹಿತಿ ಪಡೆದು ನಿಗಾವಹಿಸಬೇಕು ಎಂದು ಸೂಚಿಸಿದರು. ಕಳೆದ ಏಪ್ರಿಲ್‌ನಿಂದ ಈವರೆಗೆ  ಜಿಲ್ಲೆಯಲ್ಲಿ ಮರಣ ಹೊಂದಿದವರ ಮಾಹಿತಿ ಹಾಗೂ ಯಾವ ಕಾರಣಕ್ಕೆ ಮರಣ ಹೊಂದಿದ್ದಾರೆ ಎಂಬ ಮಾಹಿತಿ ಕ್ರೋಡೀಕರಿಸಿ ನೀಡಬೇಕು.

ಹೊರ ಜಿಲ್ಲೆ ಹಾಗೂ ರಾಜ್ಯಗಳಿಂದ ಅನ್ಯ ಮಾರ್ಗದಿಂದ ಜಿಲ್ಲೆಗೆ ಬರುವವರ ಮೇಲೆ ತೀವ್ರ  ನಿಗಾವಹಿಸಿ ಇಂತಹವರ ಮಾಹಿತಿ ಪಡೆದು ಆರೋಗ್ಯ ತಪಾಸಣೆ ಹಾಗೂ ಕ್ವಾರಂಟೈನ್‌ಗೆ ಕ್ರಮವಹಿಸಬೇಕು ಎಂದು ಆದೇಶಿಸಿದ್ದಾರೆ. “ಸೇವಾ ಸಿಂಧು’ ನೋಂದಣಿ ಪಾಸ್‌ ನೊಂದಿಗೆ ಜಿಲ್ಲೆಗೆ ಬರುವ ಪ್ರಯಾಣಿಕರನ್ನು ಕಡ್ಡಾಯವಾಗಿ  ಎಸ್‌ಒಪಿ ಮಾರ್ಗಸೂಚಿಯಂತೆ ಕ್ರಮವಹಿಸಬೇಕು. ಬೇರೆ ಮಾರ್ಗದಿಂದ ಜಿಲ್ಲೆಗೆ ಪ್ರವೇಶ ಮಾಡಿದವರ ಮಾಹಿತಿಯನ್ನು ಪಿಡಿಒಗಳ ಮೂಲಕ ಪಡೆಯಬೇಕು.

ಇದರಲ್ಲಿ ನಿರ್ಲಕ್ಷ ವಹಿಸಿ ಇವರಿಂದ ಕೋವಿಡ್‌ ಪ್ರಕರಣಗಳು  ತ್ತೆಯಾದಲ್ಲಿ ನಿಮ್ಮನ್ನೇ ಜವಾಬ್ದಾರರನ್ನಾಗಿ ಮಾಡಲಾಗುವುದು. ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರುವವರಿಗೆ ಉತ್ತಮ ಊಟ, ಸ್ವತ್ಛತೆ ಕಾರ್ಯ, ಶುಚಿ ಸಂಭ್ರಮ ಕಿಟ್‌ ನೀಡಬೇಕು. ಮಾಸ್ಕ್, ಸ್ಯಾನಿಟೈಸರ್‌ ನೀಡಬೇಕು ಎಂದರು.  ಅಪರ ಜಿಲ್ಲಾಧಿಕಾರಿ  ಸ್‌. ಯೋಗೇಶ್ವರ ಮಾತನಾಡಿ, ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್‌ನಲ್ಲಿ ಉಳಿದು ಕೊಂಡಿದ್ದಾರೆಯೇ ಎಂಬುದನ್ನು ತೀವ್ರ ನಿಗಾವಹಿಸಬೇಕು ಎಂದರು.

ಜಿಪಂ ಸಿಇಒ ರಮೇಶ ದೇಸಾಯಿ ಮಾತನಾಡಿ, ಜಿಲ್ಲೆಯಲ್ಲಿ 4,508 ಜನರಲ್ಲಿ 4,140 ಜನರು ಹೋಂ ಕ್ವಾರಂಟೈನ್‌ ಹಾಗೂ 380 ಜನರು ಸಾಂಸ್ಥಿಕ ಕ್ವಾರಂಟೈನ್‌ನಲ್ಲಿದ್ದಾರೆ. ಗೃಹ ಪ್ರತ್ಯೇಕತೆಯಲ್ಲಿರುವ 4,140 ಜನರ ಮೇಲೆ ನಿತ್ಯವೂ ನಿಗಾವಹಿಸಬೇಕು. ಮನೆ ಮನೆಗೆ ಭೇಟಿ ನೀಡಿ ಇವರ  ಆರೋಗ್ಯದ ಬಗ್ಗೆ ಮಾಹಿತಿ ಪಡೆಯಬೇಕು. ಈ ಕಾರ್ಯಕ್ಕೆ ನಿಯೋಜಿತಗೊಂಡಿರುವ ಪಿಡಿಒಗಳು, ಗ್ರಾಮ ಲೆಕ್ಕಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳನ್ನು ಹಂಚಿಕೆ ಮಾಡಿಕೊಂಡು ನಿತ್ಯ ನಿಗಾವಹಿಸಬೇಕು.

ಇದೇ  ಮಾದರಿಯಲ್ಲಿ ನಗರ ಪ್ರದೇಶದಲ್ಲಿ ನಿಯೋಜಿತಗೊಂಡ ನಗರ ಸ್ಥಳೀಯ ಸಂಸ್ಥೆಗಳ ಬಿಲ್‌ ಕಲೆಕ್ಟರ್‌ಗಳು ಈ ಕಾರ್ಯದಲ್ಲಿ ಯಾವುದೇ ಲೋಪವಾಗದಂತೆ ನಿಗಾವಹಿಸಬೇಕು ಎಂದು ಸೂಚನೆ ನೀಡಿದರು. ಎಸಿ ಡಾ| ದಿಲೀಷ್‌ ಶಶಿ, ಡಿಡಿಪಿಐ  ಅಂದಾನೆಪ್ಪ ವಡಗೇರಿ, ಲಲಿತಾ ಸಾತೇನಹಳ್ಳಿ, ಡಿಎಚ್‌ಒ ಡಾ| ರಾಜೇಂದ್ರ ದೊಡ್ಮನಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ನಾಗರಾಜ ನಾಯಕ ಇನ್ನಿತರರು ಇದ್ದರು.

ಟಾಪ್ ನ್ಯೂಸ್

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.