ಆನಂದ ತೇಲ್ತುಂಬ್ಡೆ ಬಿಡುಗಡೆಗೆ ಆಗ್ರಹ

ಮಹಾರಾಷ್ಟ್ರ-ಕೇಂದ್ರ ಸರ್ಕಾರ ನೈಜ ಆರೋಪಿಗಳ ಬಿಡುಗಡೆ ಮಾಡಿರುವುದು ಜನವಿರೋಧಿ ನೀತಿ

Team Udayavani, May 18, 2020, 11:54 AM IST

18-May-22

ಸಿಂಧನೂರು:ಎಐಟಿಯುಸಿ ಕಚೇರಿ ಎದುರು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡರು ಪ್ರತಿಭಟನೆ ನಡೆಸಿದರು

ಸಿಂಧನೂರು: ಭೀಮಾ ಕೋರೆಗಾಂವ ಪ್ರಕರಣದಲ್ಲಿ ಬಂಧಿತರಾಗಿರುವ ಮಾನವ ಹಕ್ಕುಗಳ ಹೋರಾಟಗಾರ ಆನಂದ್‌ ತೇಲ್ತುಂಬ್ಡೆ
ಮತ್ತಿತರನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ನಗರದ ಎಪಿಎಂಸಿ ಪ್ರಾಂಗಣದಲ್ಲಿರುವ ಎಐಟಿಯುಸಿ ಕಚೇರಿ ಎದುರು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡರು ರವಿವಾರ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಒಕ್ಕೂಟದ ಸಂಚಾಲಕ ಚಂದ್ರಶೇಖರ ಗೊರಬಾಳ, ಮಹಾರಾಷ್ಟ್ರದ ಭೀಮಾ ಕೋರೆಗಾಂವ ಪ್ರಕರಣದಲ್ಲಿ ಮಾನವ ಹಕ್ಕುಗಳ ಹೋರಾಟಗಾರರನ್ನು ದುರುದ್ದೇಶಪೂರ್ವಕವಾಗಿ ತಳುಕುಹಾಕಿ ಆನಂದ ತೇಲ್ತುಂಬ್ಡೆ, ಗೌತಮ್‌ ನವಲಖ್‌ ಮತ್ತಿತರರನ್ನು ಬಂಧಿಸಿರುವುದು ಖಂಡನೀಯ. ಪ್ರಕರಣದಲ್ಲಿ ನೈಜ ಆರೋಪಿಗಳನ್ನು ಮಹಾರಾಷ್ಟ್ರ ಮತ್ತು ಕೇಂದ್ರದ ಬಿಜೆಪಿ ಸರ್ಕಾರ ಬಿಡುಗಡೆ ಮಾಡಿರುವುದು ಜನವಿರೋಧಿ ನೀತಿಗೆ ಜ್ವಲಂತ ಸಾಕ್ಷಿಯಾಗಿದೆ ಎಂದು ದೂರಿದರು.

ಆನಂದ ತೇಲ್ತುಂಬ್ಡೆ ಅವರು ದಲಿತ, ದಮನಿತ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯಗಳ ವಿರುದ್ಧ ನಿರಂತರ ಧ್ವನಿ ಎತ್ತುತ್ತ ಬಂದವರು. ಖೈರ್ಲಾಂಜಿ ಹತ್ಯಾಕಾಂಡವೂ ಸೇರಿ ದಲಿತ, ದಮನಿತರ ಮೇಲೆ ದೇಶಾದ್ಯಂತ ನಡೆಯುತ್ತಿರುವ ದೌರ್ಜನ್ಯ ಗುರುತಿಸಿ ಅವುಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತಲುಪಿಸಿ ಜನವಿರೋಧಿ, ಅಪ್ರಜಾತಾಂತ್ರಿಕ ಆಳುವ ವರ್ಗಗಳ ನಿಜಬಣ್ಣ ಬಯಲು ಮಾಡಿದ್ದಾರೆ. ಅಂಬೇಡ್ಕರ್‌ ಕುಟುಂಬದ ಸದಸ್ಯರು ಆಗಿರುವ ತೇಲ್ತುಂಬ್ಡೆ ಅವರನ್ನು ಅಂಬೇಡ್ಕರ್‌ ಜಯಂತಿ ದಿನವೇ ಬಂಧಿಸಿರುವುದು ಸರ್ಕಾರದ ದುರುದ್ದೇಶ ಏನು ಎನ್ನುವುದು ಸ್ಪಷ್ಟವಾಗಿದೆ ಎಂದು ಆಪಾದಿಸಿದರು.

ಸಿಐಟಿಯು ಜಿಲ್ಲಾ ಘಟಕದ ಕಾರ್ಯದರ್ಶಿ ಶೇಕ್ಷಾಖಾದ್ರಿ ಮಾತನಾಡಿ, ಮಹಾರಾಷ್ಟ್ರದಲ್ಲಿ ಎರಡು ವರ್ಷಗಳ ಹಿಂದೆ ಕೋರೆಗಾಂವ ವಿಜಯ ದಿನದಂದು, ದಲಿತರನ್ನು ಸಂಘಟಿಸಿ ಬೃಹತ್‌ ಸಮಾವೇಶವೊಂದನ್ನು ನಡೆಸಿ ಸಂಘ ಪರಿವಾರಕ್ಕೆ ಸವಾಲು ಹಾಕಿರುವುದೇ ಮಾನವ ಹಕ್ಕು ಹೋರಾಟಗಾರರ ಸರಣಿ ಬಂಧನಗಳಿಗೆ ಕಾರಣವಾಗಿದೆ. ವಿಜಯ ದಿವಸ್‌ ತಡೆಯಲು ಸಂಘ ಪರಿವಾರದ ಕಾರ್ಯಕರ್ತರು ಹಿಂಸಾತ್ಮಕ ಪ್ರಯತ್ನ ನಡೆಸಿದರಾದರೂ ಅದನ್ನು ಅಷ್ಟೇ ತೀವ್ರವಾಗಿ ದಲಿತ ಕಾರ್ಯಕರ್ತರು ಪ್ರತಿರೋಧಿಸಿದ್ದಾರೆ. ಈ ಘಟನೆಯನ್ನೇ ನೆಪವಾಗಿಟ್ಟುಕೊಂಡು ಅತ್ಯಂತ ಕಠಿಣ ಕಾನೂನಿನಡಿಯಲ್ಲಿ ಯಾವುದೇ ಸಾಕ್ಷ್ಯಾಧಾರಗಳಿಲ್ಲದೇ ಆನಂದ ತೇಲ್ತುಂಬ್ಡೆ, ಗೌತಮ ನವಲಕ್‌, ಸುಧೀರ ಧವಳೆ, ಸುರೇಂದ್ರ ಗಾಡ್ಲಿಂಗ, ಮಹೇಶ ರಾವುತ್‌, ಶೋಮಾ ಸೇನ್‌, ವೆರ್ನಾನ್‌ ಗೋನಸಾಲ್ವೇಸ್‌, ವರವರರಾವ್‌, ಸುಧಾ ಭಾರಧ್ವಾಜ್‌, ಅರುಣ ಫೆರೆರಾ, ರೋನಾ ವಿಲ್ಸನ್‌ ಅವರ ವಿರುದ್ಧ ಸುಳ್ಳು ಕೇಸ್‌ ದಾಖಲಿಸಿರುವುದು ಇದರ ಉದ್ದೇಶ ಎಲ್ಲ ಮಾನವ ಹಕ್ಕು ಹೋರಾಟಗಾರರು, ದಲಿತ ಚಿಂತಕರನ್ನು ಜೈಲಿಗಟ್ಟಿ ನ್ಯಾಯವನ್ನು ಶಾಶ್ವತವಾಗಿ ಸಮಾಧಿ ಮಾಡುವುದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಒಕ್ಕೂಟದ ಮುಖಂಡರಾದ ಶೇಕ್ಷಾಖಾದ್ರಿ, ಎಸ್‌. ದೇವೇಂದ್ರಗೌಡ, ಡಿ.ಎಚ್‌. ಕಂಬಳಿ, ನಾರಾಯಣ ಬೆಳಗುರ್ಕಿ, ನಾಗರಾಜ ಪೂಜಾರ, ಬಸವರಾಜ ಏಕ್ಕಿ ಮಾತನಾಡಿದರು. ಮುಖಂಡರಾದ ಬಸವರಾಜ ಬಾದರ್ಲಿ, ಬಿ.ಎನ್‌. ಯರದಿಹಾಳ, ಅಮೀನಸಾಬ ನದಾಫ್‌, ವಿರುಪಣ್ಣ, ಮಹಾದೇವ ಅಮರಾಪುರ ಇದ್ದರು

ಟಾಪ್ ನ್ಯೂಸ್

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Rahul Gandhi 3

Rahul Gandhiವಿರುದ್ಧ ಶಿಕ್ಷಣ ತಜ್ಞರು, ಕುಲಪತಿಗಳು ಗರಂ

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

1-jaaa

Jet Airways ನರೇಶ್‌ ಗೋಯಲ್‌ಗೆ ಮಧ್ಯಾಂತರ ಜಾಮೀನು

rain 21

ಭೀಕರ ಮಳೆಗೆ ತತ್ತರಿಸಿದ ಮಣಿಪುರ, ಮೇಘಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.