ಸಾಲ ವಸೂಲಿಗೆ ಬಲವಂತ ಮಾಡದಿರಿ: ನಳಿನ್‌

ದಕ್ಷಿಣ ಕನ್ನಡ ಲೀಡ್‌ ಬ್ಯಾಂಕ್‌ ಪರಿಶೀಲನ ಸಭೆ

Team Udayavani, May 19, 2020, 5:47 AM IST

ಸಾಲ ವಸೂಲಿಗೆ ಬಲವಂತ ಮಾಡದಿರಿ: ನಳಿನ್‌

ಮಂಗಳೂರು: ಲಾಕ್‌ಡೌನ್‌ನಿಂದ ಜನತೆ ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ ಬ್ಯಾಂಕ್‌ ಅಧಿಕಾರಿಗಳು ಯಾವುದೇ ಕಾರಣಕ್ಕೂ ಬಲವಂತದಿಂದ ಯಾರಿಂದಲೂ ಸಾಲ ವಸೂಲಿ ಮಾಡಬಾರದು ಹಾಗೂ ಕೇಂದ್ರ ಸರಕಾರ ಜಾರಿಗೊಳಿಸಿರುವ ಮಹತ್ವದ ಆರ್ಥಿಕ ಯೋಜನೆಗಳನ್ನು ಎಲ್ಲರಿಗೂ ತಲುಪಿಸಲು ವಿಶೇಷ ಒತ್ತು ನೀಡಬೇಕು ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಸೂಚಿಸಿದ್ದಾರೆ.

ದ.ಕ. ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಸೋಮವಾರ ನಡೆದ ಲೀಡ್‌ ಬ್ಯಾಂಕ್‌ ಪರಿಶೀಲನ ಸಭೆಯಲ್ಲಿ ಅವರು ಮಾತ ನಾಡಿದರು.

ಮಾರ್ಚ್‌, ಎಪ್ರಿಲ್‌ ಮತ್ತು ಮೇ ತಿಂಗಳ ಸಾಲದ ಕಂತಿಗೆ ಸಂಬಂಧಿಸಿ ಗ್ರಾಹಕರಿಗೆ ಕೆಲವು ಬ್ಯಾಂಕ್‌ನವರು ನೋಟಿಸ್‌ ನೀಡಿ ಕಿರುಕುಳ ನೀಡುತ್ತಿರುವ ಬಗ್ಗೆ ದೂರು ಬಂದಿವೆ. ಸಂಕಷ್ಟದ ಕಾಲದಲ್ಲಿ ಮತ್ತಷ್ಟು ಕಿರುಕುಳ ನೀಡಬಾರದು ಎಂದರು.

ಜನಧನ ಮಾಹಿತಿ ನೀಡಿ
ಜಿಲ್ಲೆಯಲ್ಲಿ 2,13,230 ಜನಧನ ಖಾತೆಗಳಿವೆ. ಅವರಿಗೆ 10 ಸಾವಿರ ರೂ. ಮುಂಗಡ ಪಡೆಯುವ ಸೌಲಭ್ಯ ಇದೆ. ಆದರೆ ಕೇವಲ 1,489 ಮಂದಿ ಮಾತ್ರ ಈ ಸೌಲಭ್ಯ ಪಡೆದಿದ್ದಾರೆ. ಕೇಂದ್ರದ ಸರಕಾರದ ಯೋಜನೆಗಳ ಬಗ್ಗೆ ಜನತೆಗೆ ಮಾಹಿತಿ ಕೊರತೆ ಇದ್ದು, ಸಮಗ್ರ ಮಾಹಿತಿ ಇರುವ ಕರಪತ್ರ ಮುದ್ರಿಸಿ ನೀಡುವಂತೆ ಸೂಚಿಸಿದರು.

ಗೃಹ ಸಾಲ-ಶಿಕ್ಷಣ ಸಾಲ ಸಾಧನೆ ಕಳಪೆ
ಗೃಹ ಸಾಲ ಹಾಗೂ ಶಿಕ್ಷಣ ಸಾಲಕ್ಕೆ ಸರಕಾರ ಗುರಿ ನಿಗದಿಪಡಿಸಿದ್ದರೂ ಕೆಲವು ಬ್ಯಾಂಕ್‌ಗಳ ಸಾಧನೆ ತೃಪ್ತಿಕರವಾಗಿಲ್ಲ; ಕೆಲವು ಬ್ಯಾಂಕ್‌ಗಳ ಸಾಧನೆ ಶೂನ್ಯ
ವಾಗಿದೆ. ಅಂತಹ ಬ್ಯಾಂಕ್‌ಗಳಲ್ಲಿ ಸರಕಾರದ ಯಾವುದೇ ಠೇವಣಿ ಇದ್ದರೆ ಹಿಂಪಡೆಯಲು ಸೂಚಿಸಲಾಗುವುದು ಎಂದು ಎಚ್ಚರಿಸಿದರು.

ಕನ್ನಡಿಗರನ್ನೇ ನಿಯೋಜಿಸಿ
ಗ್ರಾಮಾಂತರ ಬ್ಯಾಂಕ್‌ ಶಾಖೆಗಳಲ್ಲಿ ಕನ್ನಡ ತಿಳಿಯದ ಅಧಿಕಾರಿಗಳಿದ್ದು, ಗ್ರಾಹಕರಿಗೆ ಮಾಹಿತಿಯ ಕೊರತೆ ಉಂಟಾಗುತ್ತಿದೆ. ಕನ್ನಡ, ತುಳು ಬಲ್ಲ ಕನಿಷ್ಠ ಒಬ್ಬ ಸಿಬಂದಿಯನ್ನಾದರೂ ಗ್ರಾಮೀಣ ಶಾಖೆಗಳಲ್ಲಿ ನಿಯೋಜಿಸಬೇಕು ಎಂದು ನಳಿನ್‌ ಸೂಚಿಸಿದರು.

ವೆಂಟಿಲೇಟರ್‌ ಒದಗಿಸಲು ಮನವಿ
ಜಿಲ್ಲಾ ವೆನ್ಲಾಕ್‌ ಆಸ್ಪತ್ರೆಯನ್ನು ಕೋವಿಡ್‌ ಆಸ್ಪತ್ರೆಯಾಗಿ ಪರಿವರ್ತಿಸಲಾಗಿದ್ದು ಪ್ರಸ್ತುತ 23 ವೆಂಟಿಲೇಟರ್‌ ಸೌಲಭ್ಯವಿದೆ. ಇನ್ನೂ 30 ವೆಂಟಿಲೇಟರ್‌ಗಳ ಆವಶ್ಯಕತೆ ಇದೆ. ಬ್ಯಾಂಕ್‌ಗಳು ಹಾಗೂ ವಿವಿಧ ಕೈಗಾರಿಕೆಗಳು ತಮ್ಮ ಸಾಮಾಜಿಕ ಜವಾಬ್ದಾರಿ ನಿಧಿಯಡಿ ವೆಂಟಿಲೇಟರ್‌ ನೀಡುವ ಮೂಲಕ ಸಹಕರಿಸಬೇಕು ಎಂದು ಸಂಸದರು ಮನವಿ ಮಾಡಿದರು. ಇದಕ್ಕೆ ಕೆಲವು ಬ್ಯಾಂಕ್‌ ಹಾಗೂ ಕೈಗಾರಿಕೆಯವರು ಸ್ಪಂದಿಸಿದರು.

ಜಿ.ಪಂ. ಸಿಇಒ ಆರ್‌. ಸೆಲ್ವಮಣಿ, ಕೆನರಾ ಬ್ಯಾಂಕಿನ ಹಿರಿಯ ಅಧಿಕಾರಿಗಳಾದ ಯೋಗೀಶ್‌ ಆಚಾರ್ಯ, ಪುಷ್ಪರಾಜ ಹೆಗ್ಡೆ, ರಾಮ್‌ದಾಸ್‌ ಉಪಸ್ಥಿತರಿದ್ದರು.

468.83 ಕೋ.ರೂ. ಸಾಲ;
ಗುರಿ ಮೀರಿದ ಸಾಧನೆ
ಲೀಡ್‌ ಬ್ಯಾಂಕ್‌ ಮ್ಯಾನೇಜರ್‌ ಪ್ರವೀಣ್‌ ಕುಮಾರ್‌ ಮಾತನಾಡಿ, ಲಾಕ್‌ಡೌನ್‌ ಅವಧಿಯಲ್ಲಿ (ಮಾ. 25ರಿಂದ ಮೇ 16)13,373 ಜನರಿಗೆ 468.83 ಕೋಟಿ ರೂ. ಸಾಲ ವಿತರಿಸಲಾಗಿದೆ. ಈ ಪೈಕಿ ಕೃಷಿಗೆ 113.23 ಕೋಟಿ ರೂ., ಚಿಲ್ಲರೆ ವ್ಯಾಪಾರ ವಲಯಕ್ಕೆ 316.93 ಕೋಟಿ ರೂ., ಸಣ್ಣ ಹಾಗೂ ಮಧ್ಯಮ ಕೈಗಾರಿಕಾ ವಲಯಕ್ಕೆ 38.66 ಕೋಟಿ ರೂ. ಸಾಲ ನೀಡಲಾಗಿದೆ. ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಯೋಜನೆಯಡಿ ಜಿಲ್ಲೆಯ 2,16,030 ಫ‌ಲಾನುಭವಿಗಳ ಖಾತೆಗೆ 21.58 ಕೋಟಿ ರೂ. ಜಮೆಯಾಗಿದೆ. 1,34,143 ಕೃಷಿಕರ ಖಾತೆಗೆ 26.82 ಕೋಟಿ ರೂ. ಜಮೆಯಾಗಿದೆ. ವಾರ್ಷಿಕ 17,500 ಕೋಟಿ ರೂ. ಸಾಲ ವಿತರಣೆ ಗುರಿ ಇದ್ದು, ಪ್ರಸಕ್ತ ಸಾಲಿನಲ್ಲಿ ಒಟ್ಟು 20,206.05 ಕೋಟಿ ರೂ.ಸಾಲ ನೀಡುವ ಮೂಲಕ ಗುರಿ ಮೀರಿದ ಸಾಧನೆ ಮಾಡಲಾಗಿದೆ. 2019-20ನೇ ಸಾಲಿನಲ್ಲಿ 5,684 ಕೋಟಿ ರೂ., ಕೃಷಿ ಸಾಲ, 640.14 ಕೋಟಿ ರೂ., ಗೃಹ ಸಾಲ, 131.57 ಕೋಟಿ ರೂ. ಶಿಕ್ಷಣ ಸಾಲ ಹಾಗೂ ಆದ್ಯತಾ ವಲಯಕ್ಕೆ 12,106.23 ಕೋಟಿ ರೂ. ಸಾಲ ನೀಡಲಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.