21ರಿಂದ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಶುರು


Team Udayavani, May 19, 2020, 5:47 AM IST

21ರಿಂದ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಶುರು

ಬ್ಯಾಡಗಿ: ರೈತರು ಹಾಗೂ ವ್ಯಾಪಾರಸ್ಥರು ಹಣಕಾಸಿನ ಸೌಲಭ್ಯ ಪಡೆಯುವ ನಿಟ್ಟಿನಲ್ಲಿ ಇಬ್ಬರ ದೃಷ್ಟಿಕೋನ ವನ್ನಿಟ್ಟುಕೊಂಡು ಮೇ 21ರಿಂದ ಲಾಕ್‌ ಡೌನ್‌ ನಿಯಮಾವಳಿಗಳ ಷರತ್ತು ಗಳೊಂದಿಗೆ ಎಂದಿನಂತೆ ಮಾರುಕಟ್ಟೆ ವಹಿವಾಟು ಆರಂಭಿಸಲು ಸೋಮವಾರ ಕೃಷಿ ಉತ್ಪನ್ನ ಮಾರುಕಟ್ಟೆ ಮಂಡಳಿ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಯಿತು.

ಈ ಕುರಿತು ಮಾತನಾಡಿದ ಅಧ್ಯಕ್ಷ ಕೆ.ಎಸ್‌. ನಾಯ್ಕರ್‌, ಕೋವಿಡ್‌-19 ಹಿನ್ನೆಲೆಯಲ್ಲಿ ಕಳೆದೆರಡು ತಿಂಗಳಿಂದ ಮಾರುಕಟ್ಟೆ ಸ್ಥಗಿತಗೊಂಡಿತ್ತು. ಮೇ 21ರಿಂದ ಇ-ಟೆಂಡರ್‌ ಮೂಲಕ ಮೊದಲಿನಂತೆ ಮೆಣಸಿನಕಾಯಿ ವಹಿವಾಟು ನಡೆಸಲು ಅನುಮತಿ ನೀಡಲಾಗಿದೆ ಎಂದರು.

ಸದಸ್ಯ ಚನ್ನಬಸಪ್ಪ ಹುಲ್ಲತ್ತಿ ಮಾತನಾಡಿ, ಇಲ್ಲಿ ವಹಿವಾಟು ಆರಂಭಿಸಿದಲ್ಲಿ ಸಾವಿರಾರು ಸಂಖ್ಯೆಯಲ್ಲಿ ರೈತರು ಮತ್ತು ವ್ಯಾಪಾರಸ್ಥರು ಸೇರುತ್ತಾರೆ. ಕಡ್ಡಾಯವಾಗಿ ನಿಯಮಾವಳಿ ಪಾಲನೆ ಮಾಡಿ ಎಂದರು. ಕಾರ್ಯದರ್ಶಿ ಎಸ್‌.ಬಿ. ನ್ಯಾಮಗೌಡ್ರ ಮಾತನಾಡಿ, ನಿಯಮಿತ ಅಂತರದಲ್ಲಿಡುವುದು, ದಲಾಲಿ ಅಂಗಡಿಗಳ ಮಾಲೀಕರು ಸೋಪು, ಸ್ಯಾನಿಟೈಸರ್‌ ವ್ಯವಸ್ಥೆ ಮಾಡುವುದು, ವಾಹನಗಳಲ್ಲಿಬಂದ ರೈತರಿಗೆ, ಲಾರಿ ಚಾಲಕರು ಮತ್ತು ಕ್ಲೀನರ್‌ಗಳಿಗೆ ಪ್ಯಾಕ್‌ ಮಾಡಿದ ಊಟ, ಉಪಾಹಾರ ಸರಬರಾಜು ಹಾಗೂ ಮಾರುಕಟ್ಟೆ ಆವರಣದಲ್ಲಿ ಓಡಾಡದಂತೆ ಕಚೇರಿ ನಿಗದಿಪಡಿಸಿದ ಸ್ಥಳದಲ್ಲಿ ಅವರನ್ನು ಕುಳಿತುಕೊಳ್ಳುವಂತೆ ನೋಡಿಕೊಳ್ಳಬೇಕಾಗುತ್ತದೆ ಎಂದರು.

ಉಪಾಧ್ಯಕ್ಷ ಉಳಿವೆಪ್ಪ ಕುರವತ್ತಿ, ಸದಸ್ಯರಾದ ದಾನಪ್ಪ ತೋಟದ, ಸಿ.ಆರ್‌. ಪಾಟೀಲ, ಮಾಲತೇಶ ಹೊಸಳ್ಳಿ, ವನಿತಾ ಗುತ್ತಲ, ಸುಶೀಲಾ ರೊಡ್ಡನವರ, ಶಂಭನಗೌಡ ಪಾಟೀಲ, ವೀರಭದ್ರಪ್ಪ ಗೊಡಚಿ, ಎಂ.ಎನ್‌. ಕೆಂಪಗೌಡ್ರ, ವಿಜಯಕುಮಾರ ಮಾಳಗಿ, ಕುಮಾರ ಚೂರಿ, ನೀಲಮ್ಮ ಪಾಟೀಲ, ಹನುಮಂತ ನಾಯ್ಕರ್‌, ಶಿವಪ್ಪ ಕುಮ್ಮೂರ ಮತ್ತಿತತರು ಇದ್ದರು.

ಸೋಮವಾರ-ಗುರುವಾರ ಪ್ರವೇಶ ನಿಷೇಧ :  ಮಾರುಕಟ್ಟೆ ವಹಿವಾಟು ನಡೆಯುವ ಪ್ರತಿ ಸೋಮವಾರ ಮತ್ತು ಗುರುವಾರ ತೊಟ್ಟು (ತುಂಬು) ತೆಗೆಯುವ ಕೂಲಿ ಕಾರ್ಮಿಕರ ಪ್ರವೇಶವನ್ನು ನಿಷೇಧಿಸಲಾಗಿದ್ದು, ಪ್ರಾಂಗಣದಲ್ಲಿ ಪಾನ್‌, ಗುಟಕಾ, ಎಲೆ ಅಡಿಕೆ ತಿನ್ನುವುದು ಹಾಗೂ ಉಗುಳುವುದನ್ನು ನಿಷೇ ಧಿಸಲಾಗಿದೆ. ರೈತರು, ವರ್ತಕರು ಹಾಗೂ ಪರವಾನಗಿ ಪಡೆದ ಹಮಾಲರು ಮತ್ತು ಅಂಗಡಿಗಳ ಗುಮಾಸ್ತರಿಗೆ ಮಾತ್ರ ಮಾರುಕಟ್ಟೆಯಲ್ಲಿ ಪ್ರವೇಶಕ್ಕೆ ಅವಕಾಶವಿದೆ. ಇವರನ್ನು ಹೊರತುಪಡಿಸಿ ಮಾರುಕಟ್ಟೆ ಪ್ರವೇಶಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಭೆ ನಿರ್ಧರಿಸಿತು.

ಥರ್ಮಲ್‌ ಸ್ಕ್ರೀನಿಂಗ್‌ ಕಡ್ಡಾಯ :  ಹೊರಜಿಲ್ಲೆ ಅಥವಾ ರಾಜ್ಯದಿಂದ ಬರುವ ರೈತರು, ಲಾರಿ ಚಾಲಕರು ಮತ್ತು ಕ್ಲೀನರ್‌ಗಳು ಪಟ್ಟಣದಲ್ಲಿ ಪ್ರಾರಂಭಿಸಲಾದ ಚೆಕ್‌ಪೋಸ್ಟ್‌ ನಲ್ಲಿ ಥರ್ಮಲ್‌ ಸ್ಕ್ರೀನಿಂಗ್‌ ಕಡ್ಡಾಯ. ಸಂಬಂಧಿಸಿದ ವೈದ್ಯಾಧಿಕಾರಿ ಇವರಿಂದ ಪಡೆದ ಚೀಟಿ ತೋರಿಸಿದ ಬಳಿಕವೇ ಮಾರುಕಟ್ಟೆ ಪ್ರವೇಶಕ್ಕೆ ಅವಕಾಶವಿದ್ದು, ಇವರ ಸಂಪೂರ್ಣ ಮಾಹಿತಿಯನ್ನು ವರ್ತಕರು ಕೊಡುವುದು ಕಡ್ಡಾಯವಾಗಿದೆ.

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.