ಟವರ್‌ ನಿರ್ಮಾಣ ಕಾರ್ಯ ಪ್ರಗತಿಯಲ್ಲಿ: ಬಿ.ವೈ. ರಾಘವೇಂದ್ರ


Team Udayavani, May 19, 2020, 2:12 PM IST

ಟವರ್‌ ನಿರ್ಮಾಣ ಕಾರ್ಯ ಪ್ರಗತಿಯಲ್ಲಿ: ಬಿ.ವೈ. ರಾಘವೇಂದ್ರ

ಸಾಂದರ್ಭಿಕ ಚಿತ್ರ

ಶಿವಮೊಗ್ಗ: ಬೈಂದೂರು ಸೇರಿದಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿನ ಮೊಬೈಲ್‌ ಹಾಗೂ ಇಂಟರ್‌ನೆಟ್‌ ಬಳಕೆದಾರರ ಅಗತ್ಯಕ್ಕೆ ಪೂರಕವಾಗಿ ಜಿಯೋ ಮತ್ತು ಏರ್‌ಟೆಲ್‌ನಂತಹ ಪ್ರಸಿದ್ಧ ಖಾಸಗಿ ಟೆಲಿಕಾಂ ಕಂಪನಿಗಳ ಸಹಭಾಗಿತ್ವದಲ್ಲಿ ಟವರ್‌ಗಳನ್ನು ನಿರ್ಮಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಸೋಮವಾರ ಖಾಸಗಿ ಟೆಲಿಕಾಂ ಕಂಪನಿಗಳ ಮುಖ್ಯಸ್ಥರು, ಆಡಳಿತಾ ಧಿಕಾರಿಗಳು, ಬಿ.ಎಸ್‌. ಎನ್‌.ಎಲ್‌. ಅಧಿ ಕಾರಿಗಳು ಹಾಗೂ ಜಿಲ್ಲಾಕಾರಿಗಳು ಸೇರಿದಂತೆ ಸಂಬಂಧಿತ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಅವರು, ಮೊಬೈಲ್‌ ಬಳಕೆದಾರರ ಅಗತ್ಯಕ್ಕೆ ತಕ್ಕಂತೆ ಮೊಬೈಲ್‌ ಸೇವೆ ದೊರೆಯದಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಗಾಗ್ಗೆ ದೂರುಗಳು ಕೇಳಿ ಬರುತ್ತಿವೆ.

ನಗರದ ಮಿತಿಯಲ್ಲಿದ್ದರೂ ಮೊಬೈಲ್‌ ಕಿರಿಕಿರಿ, ಅಗತ್ಯಕ್ಕಿರುವಷ್ಟು ಇಂಟರ್‌ನೆಟ್‌ ವೇಗ ದೊರೆಯುತ್ತಿಲ್ಲ. ಆದ್ದರಿಂದ ತರಂಗಾತರಂಗಳನ್ನು ಹೆಚ್ಚಿಸಲು ಉದ್ದೇಶಿದ್ದು, ಈಗಾಗಲೇ ಖಾಸಗಿ ಕಂಪನಿಗಳೊಂದಿಗೆ ಮಾಡಿಕೊಂಡ ಒಪ್ಪಂದದಂತೆ ಈಗಾಗಲೇ ಟವರ್‌ಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿರುವುದಾಗಿ ತಿಳಿಸಿದರು.

ಈಗಾಗಲೇ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 120 ಟವರ್‌ಗಳ ಅಗತ್ಯವಿದ್ದು, ಕೂಡಲೇ ನಿರ್ಮಿಸಿಕೊಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಬಿ.ಎಸ್‌.ಎನ್‌.ಎಲ್‌. ಟವರ್‌ ನಿರ್ಮಾಣ ಮಾತ್ರವಲ್ಲದೇ ಜಿಯೋ ಮತ್ತು ಏರ್‌ಟೆಲ್‌ ನ ಪ್ರತಿ ಕಂಪನಿಗಳಿಗೆ 69 ಟವರ್‌ಗಳನ್ನು ನಿರ್ಮಿಸಲು ಗುರಿ ನೀಡಲಾಗಿತ್ತು. ಪ್ರಸ್ತುತ ಜಿಯೋ ಸಂಸ್ಥೆಯು 37 ಮತ್ತು ಏರ್‌ಟೆಲ್‌ ಸಂಸ್ಥೆಯು 25 ಟವರ್‌ಗಳನ್ನು ನಿರ್ಮಿಸಿದ್ದು, ಮಲೆನಾಡು ಭಾಗದ ತೀರ್ಥಹಳ್ಳಿ, ಸಾಗರ ಮತ್ತು ಹೊಸನಗರ ತಾಲೂಕುಗಳಲ್ಲಿ ವಿವಿಧ ಕಾರಣಗಳಿಂದಾಗಿ ಉಳಿದ ಟವರ್‌ಗಳ ನಿರ್ಮಾಣ ಕಾರ್ಯದಲ್ಲಿ ಎದುರಾಗಿರಬಹುದಾದ ಸಮಸ್ಯೆಗಳ ಕುರಿತು ಒಂದು ವಾರದೊಳಗಾಗಿ ಜಿಲ್ಲಾಧಿಕಾರಿಗಳು ಹಾಗೂ ಬಿ.ಎಸ್‌.ಎನ್‌.ಎಲ್‌. ಅ ಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲೆಯಲ್ಲಿ 241 ಬಿ.ಎಸ್‌.ಎನ್‌.ಎಲ್‌. ಟವರ್‌ಗಳಿದ್ದು, ಅವುಗಳಲ್ಲಿ 100 ಟವರ್‌ಗಳನ್ನು ವಿಶೇಷವಾಗಿ ಗಮನ ಹರಿಸಿ ನಿರ್ವಹಣೆ ಮಾಡಲಾಗುತ್ತಿದೆ. ಅಂತೆಯೇ ಉಳಿದ 141 ಟವರ್‌ಗಳನ್ನು ವಿದ್ಯುತ್‌, ಜನರೇಟರ್‌, ಸಿಬ್ಬಂದಿ  ಸೇರಿದಂತೆ ವಿವಿಧ ಕಾರಣಗಳಿಂದಾಗಿ ಸರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಪ್ರತಿ ಟವರ್‌ನ ವ್ಯವಸ್ಥಿತ ನಿರ್ವಹಣೆಗೆ ಕನಿಷ್ಟ 10ಕಿ.ವ್ಯಾ. ವಿದ್ಯುತ್‌ನ ಅಗತ್ಯವಿದ್ದು, ಇದರ ಪೂರೈಕೆಯಲ್ಲಿ ವ್ಯತ್ಯಯವಿರುವುದು ಕಂಡುಬರುತ್ತಿದೆ. ಇಂತಹ ಟವರ್‌ಗಳಿಗೆ ನಿರಂತರ ವಿದ್ಯುತ್‌ ಹರಿಸುವ ಅಗತ್ಯವಿದೆ ಎಂದರು. ಟವರ್‌ಗಳ ಅಗತ್ಯಕ್ಕೆ ವಿದ್ಯುತ್‌
ಗಳನ್ನು ಸರಬರಾಜು ಮಾಡಲು ಜಿಲ್ಲೆಯಲ್ಲಿ 110 ಕೆ.ವಿ.ಸಾಮರ್ಥ್ಯದ 112 ವಿದ್ಯುತ್‌ ಘಟಕಗಳನ್ನು ಸ್ಥಾಪಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದರಿಂದಾಗಿ ಮಲೆನಾಡು ಭಾಗದಲ್ಲಿನ ಬಿ.ಎಸ್‌. ಎನ್‌.ಎಲ್‌. ಟವರ್‌ಗಳಿಗೆ ವಿದ್ಯುತ್‌ ಸರಬರಾಜು ಮಾಡಲು ಅನುಕೂಲವಾಗಲಿದೆ ಎಂದ ಅವರು, ಈ ಘಟಕಗಳಿಗೆ ನಿರಂತರವಾಗಿ ವಿದ್ಯುತ್‌ ಹರಿಸುವ ಬಗ್ಗೆಯೂ ಚರ್ಚಿಸಲಾಗುವುದೆಂದರು.

ಪ್ರಸ್ತುತ ಬಿ.ಎಸ್‌.ಎನ್‌.ಎಲ್‌. ಸಂಸ್ಥೆಯು ವಿಯೋಮ್‌ ಸಂಸ್ಥೆಯ ಸ್ವಾಮ್ಯತೆಗೊಳಪಟ್ಟ 30 ಟವರ್‌ಗಳ ಸೇವೆಯನ್ನು ಬಳಸಿಕೊಳ್ಳುತ್ತಿದೆ. ಕೊರೊನಾ ಭೀತಿಯಿಂದ ನಗರದಿಂದ ಗ್ರಾಮೀಣ ಪ್ರದೇಶಕ್ಕೆ ಬಂದು ಮನೆಯಿಂದ ಕೆಲಸ ನಿರ್ವಹಿಸುತ್ತಿದ್ದ ಯುವ ಉದ್ಯೋಗಿಗಳಿಗೆ ಇಂಟರ್‌ನೆಟ್‌ ಸೌಲಭ್ಯ ಒದಗಿಸಲು ಗ್ರಾಪಂ ನೆಟ್‌ಸೇವೆಯನ್ನು ಬಳಸಿಕೊಳ್ಳಲು ಅವಕಾಶ
ಮಾಡಿಕೊಡಲಾಗಿತ್ತು ಎಂದರು.

ಕಳೆದ ಆರು ತಿಂಗಳಿಂದೀಚೆಗೆ ಸುಮಾರು 60 ಟವರ್‌ಗಳನ್ನು ಸ್ಥಾಪನೆಯಾಗಿದ್ದು, ಮುಂದಿನ ಆರು ತಿಂಗಳ ಅವ ಧಿಯಲ್ಲಿ ಇನ್ನೂ 60 ಟವರ್‌ಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಅದಕ್ಕಾಗಿ ಖಾಸಗಿ ಟೆಲಿಕಾಂ ಕಂಪನಿಗಳಿಗೆ ಜಿಲ್ಲಾಡಳಿತದ ವತಿಯಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದರು.

ಮುಖ್ಯಮಂತ್ರಿಗಳ ಉಪ ಕಾರ್ಯದರ್ಶಿ ರವಿ, ಬಿ.ಎಸ್‌. ಎನ್‌.ಎಲ್‌. ನಿಗಮದ ವಿಭಾಗೀಯ ವ್ಯವಸ್ಥಾಪಕ ಕೃಷ್ಣ ಮೊಗೇರ, ಜಿಯೋ ಸಂಸ್ಥೆಯ ಮಿಥುನ್‌, ಏರ್‌ಟೆಲ್‌ನ ಜನರಲ್‌ ಮ್ಯಾನೇಜರ್‌ ಪದ್ಮನಾಭ, ಶಾಂತಕುಮಾರ್‌, ಮ್ಯಾಥ್ಯೂ, ಮೆಸ್ಕಾಂನ ಇಂಜಿನಿಯರ್‌ ನಟರಾಜ್‌, ಜ್ಯೋತಿಪ್ರಕಾಶ್‌ ಸೇರಿದಂತೆ ಹಲವು ಅಧಿ ಕಾರಿಗಳು ಹಾಗೂ ಗಣ್ಯರು ಇದ್ದರು.

ಟಾಪ್ ನ್ಯೂಸ್

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

10

Thirthahalli: ಶಿಕ್ಷಕರ ಚುನಾವಣೆಯಲ್ಲಿ ಶಿಕ್ಷಕರೇ ಸ್ಪರ್ಧೆ ಮಾಡಬೇಕು: ಅರುಣ್ ಹೊಸಕೊಪ್ಪ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Shimoga; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Rahul Gandhi: 400 ಮಹಿಳೆಯರ ಮೇಲೆ  ಪ್ರಜ್ವಲ್‌ ಅತ್ಯಾಚಾರ – ರಾಹುಲ್‌ ಗಾಂಧಿ

Rahul Gandhi: 400 ಮಹಿಳೆಯರ ಮೇಲೆ  ಪ್ರಜ್ವಲ್‌ ಅತ್ಯಾಚಾರ – ರಾಹುಲ್‌ ಗಾಂಧಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

1——dsadsa

Madikeri; ಮೊಬೈಲ್ ನಿಂದ ಬಡಿದು ಅತ್ತೆ ಹತ್ಯೆಗೈದು ಕಥೆ ಕಟ್ಟಿದ ಸೊಸೆ!

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.