ಕೋವಿಡ್ ಕಾರಣ: ಮನಸ್ಸಿನ ಕನ್ನಡಿಗೆ ಮಾಸ್ಕ್ ಮುಸುಕು

ಸಂವಹನಕ್ಕೆ ಅಡ್ಡಿ, ಆದರೂ ಅನಿವಾರ್ಯ; ಜೀವನ ಶೈಲಿ ಬದಲಾವಣೆಗೂ ಕಾರಣ

Team Udayavani, May 20, 2020, 5:44 AM IST

ಕೋವಿಡ್ ಕಾರಣ: ಮನಸ್ಸಿನ ಕನ್ನಡಿಗೆ ಮಾಸ್ಕ್ ಮುಸುಕು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಬಸ್‌ ಬಳಿ ಪ್ರಯಾಣಿಕರು ಸಾಲುಗಟ್ಟಿದ್ದರು. ಅದರಲ್ಲೊಬ್ಬರು ಗಡಿಬಿಡಿಯಲ್ಲಿ ನಿಗದಿತ ರೇಖೆ ಉಲ್ಲಂಘಿಸಿ ಸ್ವಲ್ಪ ಮುಂದೆ ಹೋದರು.

ತತ್‌ಕ್ಷಣ ಎದುರಿದ್ದ ಇನ್ನೊಬ್ಬರ ಮುಖಭಾವ ಬದಲಾಯಿತು. ಆದರೆ ಅದು ಕಾಣುವಂತಿಲ್ಲ, ಏಕೆಂದರೆ ಮಾಸ್ಕ್ ಇದೆ!

ಹಾಗಾಗಿ, ಕೂಗಿ ಕೈಸನ್ನೆ ಮಾಡಿ ಹಿಂದಕ್ಕೆ ಕಳುಹಿಸಬೇಕಾಯಿತು. ಪ್ರತಿಯಾಗಿ ಸಹ ಪ್ರಯಾಣಿಕ ಕಿರುನಗು ಬೀರಿದರು. ಅದು ಕೂಡ ಕಾಣಿಸಲಿಲ್ಲ!

ಮೇಲ್ನೋಟಕ್ಕೆ ಇದೊಂದು ಸಣ್ಣ ಸಮಸ್ಯೆ. ಆದರೆ ಈಗಾಗಲೇ ಸಾರ್ವಜನಿಕ ಸ್ಥಳಗಳಲ್ಲಿ ನಿತ್ಯ ಅನುಭವಕ್ಕೆ ಬರುತ್ತಿದೆ. ಮುಖ ಮನಸ್ಸಿನ ಕನ್ನಡಿ ಎಂಬ ಮಾತಿದೆ. ಆದರೆ ಕೋವಿಡ್ ಕಾಟ ಈಗ ಅದಕ್ಕೆ ಮಾಸ್ಕ್ ಮುಸುಕು ಹಾಕಿದೆ. ಭವಿಷ್ಯದಲ್ಲಿ ಇದು ನಮ್ಮ ಜೀವನ ಶೈಲಿಯ ಬದಲಾವಣೆಗೂ ಕಾರಣವಾಗಬಹುದು. ಅದಕ್ಕಾಗಿ ಮಾನಸಿಕವಾಗಿ ಸಿದ್ಧರಾಗಬೇಕಾಗಿದೆ.

ಸಾಮಾನ್ಯವಾಗಿ ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಪುಟ್ಟ ಸಂಭಾಷಣೆಗಳು ಆತ್ಮೀಯತೆ ಬೆಳೆಯಲು ಕಾರಣವಾಗುತ್ತವೆ. ಆದರೆ ಈಗಿನ ಮಾಸ್ಕ್ ಈ ಮಾತುಕತೆಯ ಸಂದರ್ಭ ಸಂವಹನಕ್ಕೆ ಪೂರಕವಾದ ಮುಖದ ಅಭಿವ್ಯಕ್ತಿಗೆ ಅಡ್ಡಿಯಾಗಿದೆ. ಮಾಸ್ಕ್ ಜತೆಗೆ ಸಾಮಾಜಿಕ ಅಂತರ, ಸ್ಯಾನಿಟೈಸರ್‌ನಂತಹ ನಿಯಮಗಳನ್ನು ವರ್ಷಗಟ್ಟಲೆ ಅನುಸರಿಸುವುದು ನಮಗಿನ್ನು ಅನಿವಾರ್ಯ ಆಗಲಿದೆ.

ಇದು ಸಂವಹನದ ಮೇಲೆ ಪರಿಣಾಮ ಬೀರಲಿದ್ದು, ವ್ಯಕ್ತಿಗಳ ನಡುವಿನ ಬಾಂಧವ್ಯ ಬೆಸುಗೆಗೆ ಅಡ್ಡಿಯಾಗಬಹುದೇನೋ. ಮುಂದಿನ ದಿನಗಳಲ್ಲಿ ನಮ್ಮ ಜೀವನ ಪದ್ಧತಿಗಳಲ್ಲಿ ಬದಲಾವಣೆ ಮಾಡಿಕೊಳ್ಳುವುದು ಅನಿವಾರ್ಯ ಆಗಬಹುದು ಎಂದು ಮನೋವೈದ್ಯರು ಮತ್ತು ತಜ್ಞರು ಅಭಿಪ್ರಾಯಪಡುತ್ತಾರೆ.
ಮಾನಸಿಕ ಅಂತರದ ಕಡೆಗೆ…

ಸೋಂಕಿನ ಹರಡುವಿಕೆಯ ಮೂಲದ ಬಗ್ಗೆ ಸದ್ಯ ಸ್ಪಷ್ಟತೆ ಇಲ್ಲ. ಚಿಕಿತ್ಸೆಯನ್ನೂ ಕಂಡುಹಿಡಿದಿಲ್ಲ. ಇದು ಎಲ್ಲಿಯವರೆಗೆ ಇರಲಿದೆ ಎಂಬುದೂ ಗೊತ್ತಿಲ್ಲ. ಈ ಎಲ್ಲ ಅನಿಶ್ಚಿತತೆಗಳ ನಡುವೆ ಬದುಕು ಸಾಗುತ್ತಿದೆ. ಪರಿಣಾಮವಾಗಿ ದೈಹಿಕ -ಸಾಮಾಜಿಕ ಅಂತರ ಈಗ ಮಾನಸಿಕ ಅಂತರವಾಗಿ ಪರಿವರ್ತನೆಯಾಗುತ್ತಿದೆ. ವಾಸ್ತವವಾಗಿ ಮಾಸ್ಕ್ ಮತ್ತು ಸಾಮಾಜಿಕ ಅಂತರ ಎರಡೂ ಮನುಷ್ಯನ ಸಂಘಜೀವಿ ಮೂಲಗುಣಕ್ಕೇ ತದ್ವಿರುದ್ಧ ಎನ್ನುತ್ತಾರೆ ಮನಶಾಸ್ತ್ರಜ್ಞರು.

ಮಾಸ್ಕ್ ಮುಸುಕಿನಿಂದ ಎಲ್ಲ ಹಂತಗಳಲ್ಲೂ ಸಂವಹನಕ್ಕೆ ‘ವಿಚಿತ್ರ’ ಅಡ್ಡಿ ಉಂಟಾಗುತ್ತಿದೆ. ಅದರಲ್ಲೂ ನರ್ಸರಿ ಮತ್ತು ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಆಗಬಲ್ಲ ಕಿರಿಕಿರಿ ಹೆಚ್ಚು. ಮಕ್ಕಳ ವರ್ತನೆ, ಅವರು ಎದುರಿಸುತ್ತಿರುವ ಸಮಸ್ಯೆ, ತರಗತಿಯಲ್ಲಿ ಆಸಕ್ತಿ ಮತ್ತಿತರ ಅಂಶಗಳ ಬಗ್ಗೆ ತಿಳಿಯಲು ಮಾಸ್ಕ್ ಅಡ್ಡಿ ಆಗಲಿದೆ.

ಟಾಪ್ ನ್ಯೂಸ್

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.