ಲಾಕ್ ತೆರೆದರೂ ಜನರು ಮನೆ ಬಿಡಲಿಲ್ಲ ; ರಾಜ್ಯಾದ್ಯಂತ ಜನ, ವಾಹನ ಸಂಚಾರ ವಿರಳ
Team Udayavani, May 20, 2020, 6:59 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಕೋವಿಡ್ ಲಾಕ್ಡೌನ್ ಸಡಿಲಿಕೆಯಾಗಿದ್ದರೂ ಜನರ ಮನಸ್ಸಿನ ಭೀತಿ ಇನ್ನೂ ದೂರವಾದಂತಿಲ್ಲ.
ರಾಜ್ಯಾದ್ಯಂತ ಮಂಗಳವಾರದಿಂದ ಸಾರಿಗೆ ಸಂಚಾರಕ್ಕೆ ಅವಕಾಶ ಮುಕ್ತವಾಗಿದ್ದರೂ ಓಡಾಟ ಮಾತ್ರ ಅಲ್ಪ ಪ್ರಮಾಣದಲ್ಲಿದ್ದುದೇ ಇದಕ್ಕೆ ಸಾಕ್ಷಿ.
ಅಷ್ಟೇ ಅಲ್ಲ, ಜನ ಸಂಚಾರ ಮತ್ತು ವಾಹನ ಸಂಚಾರ ವಿರಳವಾಗಿತ್ತು. ಸರಕಾರಿ ಕಚೇರಿಗಳಲ್ಲೂ ಈ ಪರಿಣಾಮ ಎದ್ದು ಕಾಣಿಸುತ್ತಿತ್ತು.
ರಾಜ್ಯ ಸರಕಾರ ರಾಜ್ಯಾದ್ಯಂತ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಿದೆ. ಆದರೆ ಮೊದಲ ದಿನ ನಿರೀಕ್ಷಿತ ಪ್ರಮಾಣದಲ್ಲಿ ಪ್ರಯಾಣಿಕರು ಕಂಡುಬರಲಿಲ್ಲ.
ಕೆಎಸ್ಸಾರ್ಟಿಸಿಯು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಿಂದ ಅಂತರ್ ಜಿಲ್ಲಾ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದರೂ ಸಾರ್ವಜನಿಕರು ಸಮೂಹ ಸಾರಿಗೆಯಲ್ಲಿ ಸಂಚರಿಸಲು ಹಿಂದೇಟು ಹಾಕಿದಂತಿತ್ತು.
ಅಂತರ್ ಜಿಲ್ಲಾ ಪ್ರಯಾಣ ಕೈಗೊಂಡರೂ ತವರು ಜಿಲ್ಲೆಗೆ ಹೋದರೆ ಕ್ವಾರಂಟೈನ್ ವ್ಯವಸ್ಥೆಯಲ್ಲಿ 14 ದಿನ ಉಳಿಯಬೇಕಾಗುತ್ತದೆ ಎಂಬ ಆತಂಕದಿಂದ ಅನೇಕರು ಪ್ರಯಾಣ ಮುಂದೂಡಿದ್ದಾರೆ ಎಂಬ ಮಾತು ಕೇಳಿಬಂದಿದೆ.
ಸರಕಾರಿ ಕಚೇರಿಗಳಲ್ಲೂ ಜನ ವಿರಳ
ಲಾಕ್ಡೌನ್ ಸಡಿಲಿಕೆ ಮಾಡಿದ್ದರಿಂದ ಎಲ್ಲ ಇಲಾಖೆಗಳ ನೌಕರರು ಕಡ್ಡಾಯವಾಗಿ ಹಾಜರಾಗಲು ಸೂಚನೆ ನೀಡಲಾಗಿತ್ತು. ಆದರೆ ಮೊದಲ ದಿನ ಬಹುತೇಕ ಇಲಾಖೆಗಳಲ್ಲಿ ಪೂರ್ಣಪ್ರಮಾಣದ ಸಿಬಂದಿ ಹಾಜರಾಗದಿರುವುದು ಕಂಡುಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
MUST WATCH
ಹೊಸ ಸೇರ್ಪಡೆ
Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್ಗೆ ಭಾರಿ ಡಿಮ್ಯಾಂಡ್
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ