ಕರಾವಳಿ ಬಸ್‌ ಮಾಲಕರ ಅಸಮಾಧಾನ: ತೆರಿಗೆ ವಿನಾಯಿತಿಯಿಂದ ಪ್ರಯೋಜನವಿಲ್ಲ


Team Udayavani, May 20, 2020, 10:04 AM IST

ಕರಾವಳಿ ಬಸ್‌ ಮಾಲಕರ ಅಸಮಾಧಾನ: ತೆರಿಗೆ ವಿನಾಯಿತಿಯಿಂದ ಪ್ರಯೋಜನವಿಲ್ಲ

ಸಾಂದರ್ಭಿಕ ಚಿತ್ರ

ಮಂಗಳೂರು: ರಾಜ್ಯ ಸರಕಾರವು ಖಾಸಗಿ ಬಸ್‌ಗಳ ರಸ್ತೆ ತೆರಿಗೆಯಲ್ಲಿ ವಿನಾಯಿತಿ ಘೋಷಿಸಿದ್ದರೂ ಕರಾವಳಿ ಬಸ್‌ ಮಾಲಕರು ಮಾತ್ರ ಈ ವಿನಾಯಿತಿಯಿಂದ ಏನೂ ಲಾಭವಾಗುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಿಟಿ ಬಸ್‌ ಮಾಲಕರ ಸಂಘದ ಅಧ್ಯಕ್ಷ ದಿಲ್‌ರಾಜ್‌ ಆಳ್ವ ಅವರು ಈ ಬಗ್ಗೆ “ಉದಯವಾಣಿ’ಗೆ ಪ್ರತಿಕ್ರಿಯಿಸಿ, “ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಎರಡು ತಿಂಗಳಿನಿಂದ ಬಸ್‌ಗಳು ರಸ್ತೆಗಿಳಿದಿಲ್ಲ. ಶೇ. 95ರಷ್ಟು ಮಾಲಕರು ಬಸ್‌ಗಳನ್ನು ಆರ್‌ಟಿಒಗೆ ಸರಂಡರ್‌ ಮಾಡಿದ್ದಾರೆ. ಇದೇ ಕಾರಣಕ್ಕೆ ಸಹಜವಾಗಿಯೇ ಬಸ್‌ ಮಾಲಕರಿಗೆ ತೆರಿಗೆಯಲ್ಲಿ ವಿನಾಯಿತಿ ದೊರಕುತ್ತದೆ. ಹೀಗಿದ್ದಾಗ ಸರಕಾರ ತೆರಿಗೆ ವಿನಾಯಿತಿ ಘೋಷಿಸಿದರೂ ಅದರ ಲಾಭ ಬಸ್‌ ಮಾಲಕರಿಗಾಗದು’ ಎಂದಿದ್ದಾರೆ.

ರಾಜ್ಯ ಬಸ್‌ ಮಾಲಕರ ಒಕ್ಕೂಟದ ಅಧ್ಯಕ್ಷ ರಾಜವರ್ಮ ಬಲ್ಲಾಳ್‌ ಪ್ರತಿಕ್ರಿಯಿಸಿ, “ಸದ್ಯ ಬಸ್‌ ಮಾಲಕರಿಗೆ ಯಾವುದೇ ಆದಾಯದ ಮೂಲ ಇಲ್ಲದಿರುವು ದರಿಂದ ಮುಂದಿನ ಆರು ತಿಂಗಳ ಕಾಲ ರಸ್ತೆ ತೆರಿಗೆಯಲ್ಲಿ ವಿನಾಯಿತಿ ನೀಡಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಪ್ರಯಾಣಿಕರ ಸಂಖ್ಯೆಯನ್ನು ಶೇ. 50ಕ್ಕೆ ಕಡಿತಗೊಳಿಸುವಾಗ ಪ್ರಯಾಣ ದರವನ್ನು ಹೆಚ್ಚಿಸುವುದು ಅನಿವಾರ್ಯ’ ಎಂದಿದ್ದಾರೆ.

ಮಂಗಳೂರು ಸಾರಿಗೆ ಇಲಾಖೆ ಯಲ್ಲಿ ಮಂಗಳವಾರ ಆರ್‌ಟಿಒ ಜತೆ ಬಸ್‌ ಮಾಲಕರು ಸಭೆ ನಡೆಸಿ ಬೇಡಿಕೆ ಮುಂದಿಟ್ಟಿದ್ದಾರೆ. ಮೇ ಅಂತ್ಯದವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್‌ಗಳು ರಸ್ತೆಗಿಳಿಯುವುದು ಅನುಮಾನ ಎಂದು ಬಸ್‌ ಮಾಲಕರೊಬ್ಬರು ತಿಳಿಸಿದ್ದಾರೆ.

ಉಡುಪಿ: ಖಾಸಗಿ ಬಸ್‌ ಓಡಾಟ ಇಂದು ನಿರ್ಧಾರ
ಉಡುಪಿ: ರಾಜ್ಯ ಸರಕಾರವು ಖಾಸಗಿ ಬಸ್‌ ಮಾಲಕರ ಬೇಡಿಕೆಗಳಿಗೆ ಸ್ಪಂದಿಸಿದ್ದು, 2 ತಿಂಗಳ ತೆರಿಗೆ ವಿನಾಯಿತಿ ಕಲ್ಪಿಸಿದೆ. ಎಂದಿನಂತೆ ಬಸ್‌ ಓಡಿಸುವ ಬಗ್ಗೆ ಬುಧವಾರ ತೀರ್ಮಾನವಾಗಲಿದೆ ಎಂದು ಕೆನರಾ ಬಸ್‌ ಮಾಲಕರ ಸಂಘದ ಉಪಾಧ್ಯಕ್ಷ ಸದಾನಂದ ಛಾತ್ರ ತಿಳಿಸಿದ್ದಾರೆ. ಖಾಸಗಿ ಬಸ್‌ ಮಾಲಕರು ಹಲವಾರು ಬೇಡಿಕೆಗಳನ್ನು ಮುಂದಿರಿಸಿದ್ದರು. ಅದರಲ್ಲಿ ಎಪ್ರಿಲ್‌, ಮೇ ತಿಂಗಳ ತೆರಿಗೆ ವಿನಾಯಿತಿ ಮಾಡಲಾಗಿದೆ. ಬುಧವಾರದಿಂದ ಕೆಲವು ಖಾಸಗಿ ಬಸ್‌ಗಳು ಬೆಂಗಳೂರು, ಮೈಸೂರು ಭಾಗಗಳಿಗೆ ಸಂಚಾರ ಮಾಡಲಿವೆ. ಎಕ್ಸ್‌ ಪ್ರಸ್‌, ಸಿಟಿ, ಸರ್ವೀಸು ಬಸ್ಸುಗಳ ಬಗ್ಗೆಯೂ ತೀರ್ಮಾನವಾಗುವ ಸಾಧ್ಯತೆಗಳಿವೆ.

ಟಾಪ್ ನ್ಯೂಸ್

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.