ಕೋವಿಡ್ ಭಯಕ್ಕೆ ಹೆದರಿ ಬಸ್ ಹತ್ತದ ಜನತೆ
Team Udayavani, May 20, 2020, 4:05 PM IST
ಚಡಚಣ: ಬಸ್ ನಿಲ್ದಾಣದಲ್ಲಿ ಜನರಿಗಾಗಿ ಕಾಯುತ್ತಿರುವ ಬಸ್ ಹಾಗೂ ಬಿಕೋ ಎನ್ನುತ್ತಿರುವ ಬಸ್ ನಿಲ್ದಾಣ
ಚಡಚಣ: ದೇಶದಲ್ಲಿ ಕೋವಿಡ್ ನಿಯಂತ್ರಣಕ್ಕೆ ಲಾಕ್ಡೌನ್ ಆದೇಶಿಸಿದ ದಿನದಿಂದ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದ ಬಸ್ ಸಂಚಾರಕ್ಕೆ ಸರ್ಕಾರ ಮಂಗಳವಾರದಿಂದ ಸುರಕ್ಷತಾ ಕ್ರಮದೊಂದಿಗೆ ಮತ್ತೆ ಸಂಚರಿಸಲು ಅವಕಾಶ ನೀಡಿದ್ದರೂ ಪ್ರಯಾಣಿಕರು ಮಾತ್ರ ಬರಲೇ ಇಲ್ಲ.
ಚಡಚಣ ಬಸ್ ನಿಲ್ದಾಣಕ್ಕೆ ಬಂದು ನಿಂತ ಬಸ್ ಸಂಜೆವರೆಗೂ ಪ್ರಯಾಣಿಕರಿಗಾಗಿ ಕಾಯುತ್ತಿರುವ ದೃಶ್ಯ ಕಂಡು ಬಂದಿತು. ಬಿಕೋ ಎನ್ನುತ್ತಿದ್ದ ಚಡಚಣ ಬಸ್ ನಿಲ್ದಾಣಕ್ಕೆ ಮಂಗಳವಾರ ಬೆಳಗ್ಗೆ ಸುಮಾರು 15 ಜನರನ್ನು ಹೊತ್ತು ವಿಜಯಪುರದಿಂದ ಆಗಮಿಸಿತು. ಆದರೆ, ಮರಳಿ ವಿಜಯಪುರಕ್ಕೆ ಹೋಗಲು ಯಾವೊಬ್ಬ ಪ್ರಯಾಣಿಕರೂ ಬರಲಿಲ್ಲ. ನಂತರ ಮತ್ತೂಂದು ಬಸ್ 17 ಜನರು ಹೊತ್ತ ಆಗಮಿಸಿತು.
ಮರಳಿ ಹೋಗಲು ಪ್ರಯಾಣಿಕರಿಗಾಗಿ ಕಾಯ್ದು ನಂತರ ಕೇವಲ 7 ಜನರನ್ನು ಹೊತ್ತು ಮರಳಿ ವಿಜಯಪುರಕ್ಕೆ ಸಂಚರಿಸಿತು. ಇಂಡಿ ಪಟ್ಟಣದಿಂದ ನಿತ್ಯ ಹತ್ತಾರು ಬಸ್ ಗಳು ಹಾಗೂ ಖಾಸಗಿ ಮ್ಯಾಕ್ಸಿಕ್ಯಾಬ್ ಗಳು ಸಾವಿರಾರು ಜನರನ್ನು ಹೊತ್ತು ಸಾಗುತ್ತಿದ್ದವು. ಆದರೆ, ಕೋವಿಡ್ ಸೋಂಕಿನ ಭಯದಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಟಸಾಧ್ಯ ಎಂದು ಖಾಸಗಿ ಮ್ಯಾಕ್ಸಿಕ್ಯಾಬ್ಗಳು ಸಹ ರಸ್ತೆಗಿಳಿಯಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ