ಪಶ್ಚಿಮ ಆಫ್ರಿಕದ 4.3 ಕೋಟಿ ಮಂದಿಯನ್ನು ಕಾಡಲಿದೆ ಹಸಿವು


Team Udayavani, May 20, 2020, 4:45 PM IST

ಪಶ್ಚಿಮ ಆಫ್ರಿಕದ 4.3 ಕೋಟಿ ಮಂದಿಯನ್ನು ಕಾಡಲಿದೆ ಹಸಿವು

ಮಣಿಪಾಲ : ಕೋವಿಡ್‌ ವೈರಸ್‌ ನಿಯಂತ್ರಣಕ್ಕೆ ಜಾರಿ ಮಾಡಲಾಗಿರುವ ಲಾಕ್‌ಡೌನ್‌ ಜಾಗತಿಕವಾಗಿ ನಾನಾ ಸಮಸ್ಯೆಗಳನ್ನು ಹುಟ್ಟಿ ಹಾಕಿದೆ. ಬಡರಾಷ್ಟ್ರಗಳು ಕೋವಿಡ್‌ ಜತೆಗೆ ಹಸಿವಿನ ವಿರುದ್ಧವೂ ಹೋರಾಡುವ ಅನಿವಾರ್ಯತೆಗೆ ಸಿಲುಕಿವೆ.

ಆರ್ಥಿಕವಾಗಿ ಹಿಂದುಳಿದ ರಾಷ್ಟ್ರಗಳೇ ತುಂಬಿರುವ ಆಫ್ರಿಕಾದ ಖಂಡ ಕೋವಿಡ್‌ನಿಂದ ಅತಿ ಹೆಚ್ಚು ಹಾನಿ ಅನುಭವಿಸುತ್ತಿದೆ. ಕೋವಿಡ್‌ನಿಂದಾದ ಸಾವುನೋವು ಕಡಿಮೆಯಿದ್ದರೂ ಅದರ ಪಶ್ಚಾತ್‌ ಪರಿಣಾಮವಾಗಿ ಉಂಟಾದ ಆರ್ಥಿಕ ವಿಪ್ಲವ ಈ ದೇಶವನ್ನು ಕಂಗಾಲುಗೊಳಿಸಿದೆ. ಕೂಲಿನಾಲಿ, ಮನೆಗೆಲಸ ಅಂತ ನಿತ್ಯ ದುಡಿದು ತಿನ್ನುವ ಬಡ ಸಮುದಾಯಗಳ ದೊಡ್ಡ ಪೆಟ್ಟು ಬಿದಿದ್ದೆ. ಈಗಾಗಲೇ ಸಂಪೂರ್ಣವಾಗಿ ತತ್ತರಿಸಿ ಹೋಗಿರುವ ಆಫ್ರಿಕಾ ಖಂಡದಲ್ಲಿ ಮುಂಬರುವ ದಿನಗಳಲ್ಲಿ ಈ ಸಮಸ್ಯೆಯ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ ಎಂದು ವಿಶ್ವ ಆಹಾರ ಸಂಸ್ಥೆ ಎಚ್ಚರಿಸಿದೆ.

ಪಶ್ಚಿಮ ಆಫ್ರಿಕದಲ್ಲಿ ಸುಮಾರು 43 ದಶಲಕ್ಷಕ್ಕೂ ಹೆಚ್ಚು ಜನರಿಗೆ ತುರ್ತು ಆಹಾರ ಸರಬರಾಜು ಮಾಡಬೇಕಾಗುವ ಪರಿಸ್ಥಿತಿ ನಿರ್ಮಾಣವಾಗಲಿದೆ. ವೈರಸ್‌ ಹರಡುವಿಕೆಯೂ ಹೆಚ್ಚು ತೀವ್ರವಾಗುತ್ತಿರುವುದರಿಂದ ಆಹಾರದ ಜತೆಗೆ ಔಷಧೋಪಚಾರಗಳ ಪೂರೈಕೆಯೂ ಆಗಬೇಕಿದೆ. ಈ ವರ್ಷ ಆಹಾರ ಕೊರತೆ ದ್ವಿಗುಣಗೊಳ್ಳಲಿರುವುದರಿಂದ ಆಫ್ರಿಕ ಖಂಡದಾದ್ಯಂತ 26.5 ಕೋಟಿ ಜನರು ಹಸಿವಿನಿಂದ ಬಳಲಿದ್ದಾರೆ.

ಕೋವಿಡ್‌ ಹಾವಳಿ ಪ್ರಾರಂಭವಾಗುವ ಮುಂಚೆಯೇ ಆಫ್ರಿಕ ಖಂಡದಲ್ಲಿ ಆಹಾರ ಸಮಸ್ಯೆ ತಲೆದೋರಿತ್ತು.ಸೋಂಕು ನಿಯಂತ್ರಣಕ್ಕಾಗಿ ಜಾರಿ ಮಾಡಿರುವ ಲಾಕ್‌ಡೌನ್‌ ನಿಯಮಗಳು ಪರಿಸ್ಥಿತಿಯನ್ನು ಮತ್ತಷ್ಟು ಹದೆಗಡಿಸಿದೆ. ಸೋಂಕಿನಿಂದ ಎದುರಾಗಿರುವ ಬಿಕ್ಕಟ್ಟು ಈ ವರ್ಷ ಪಶ್ಚಿಮ ಆಫ್ರಿಕದಲ್ಲಿ 2.1ಕೋಟಿ ಜನರನ್ನು ಗಂಭೀರವಾದ ಆರೋಗ್ಯ ಸಮಸ್ಯೆಗಳಿಗೆ ಈಡು ಮಾಡಬಹುದು ಎಂದು ವಿಶ್ವ ಆಹಾರ ಪರಿಯೋಜನೆ ಅಂದಾಜಿಸಿತ್ತು. ಆದರೆ ಇದೀಗ ಈ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು, ಯಾವುದೇ ನಿರ್ದಿಷ್ಟ ಕ್ರಮಗಳನ್ನು ಕೈಗೊಳ್ಳದೇ ಇದ್ದಲ್ಲಿ ಆಗಸ್ಟ್‌ ವೇಳೆಗೆ 4.3 ಕೋಟಿ ಜನರು ಆಹಾರಕ್ಕಾಗಿ ಬಾಹ್ಯ ನೆರವಿನ ನಿರೀಕ್ಷೆಯಲ್ಲಿರುತ್ತಾರೆ ಎಂದು ಹೇಳಲಾಗಿದೆ.

ಶಾಲೆಗಳನ್ನು ಮುಚ್ಚಿರುವುದರಿಂದ ಶಾಲೆಯಲ್ಲಿ ನೀಡಲಾಗುತ್ತಿದ್ದ ಪೌಷಿಕ ಆಹಾರವಿಲ್ಲದೆ 6.5ಕೋಟಿ ಮಕ್ಕಳ ಬೆಳವಣಿಗೆ ಕುಂಠಿತವಾಗಲಿದೆ. ಇಲ್ಲಿಯವರಗೆ ಖಂಡದಾದ್ಯಂತ 75,000 ಕ್ಕೂ ಹೆಚ್ಚು ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 2,563 ಮಂದಿ ಸಾವನ್ನಪ್ಪಿದ್ದಾರೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.