ಅಭಿವೃದ್ಧಿ ಕಾರ್ಯಕ್ಕೆ ಅಡ್ಡಿ ಬೇಡ
Team Udayavani, May 20, 2020, 5:57 PM IST
ಜೋಯಿಡಾ: ತಾಲೂಕಿನ ಜನತೆ ದೇಶಕ್ಕೆ ಕೊಡುಗೆ ನೀಡಿದವರು. ಅವರಿಗೇ ಕುಡಿಯಲು ನೀರು ಕೊಡದ ನೀವು ಪಕ್ಕದ ಜಿಲ್ಲೆಗಳಿಗೆ ನೀರು ಕೊಡುವ ಮೂಲಕ ಮಾನವೀಯತೆ ಮರೆತಿರುವುದು ನಾಚಿಕೆಗೇಡಿನ ವಿಷಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಟಾರ ಹೇಳಿದರು.
ತಾಲೂಕು ಕೇಂದ್ರದ ಪಾಲಿಟೆಕ್ನಿಕ್ ಕಾಲೇಜಿನ ಸಭಾಭವನದಲ್ಲಿ ತಾಲೂಕಿನ ಅಭಿವೃದ್ಧಿ ಪರಿಶೀಲನಾ ಸಭೆಯಲ್ಲಿ ಕುಡಿಯುವ ನೀರಿನ ವಿಷಯ ಕುರಿತು ಅಧಿಕಾರಿಗಳೊಂದಿಗೆ ಮಾತನಾಡಿದರು. ಸೂಪಾ ಜಲಾಶಯಕ್ಕಾಗಿ ತಮ್ಮ ಬದುಕನ್ನೇ ತ್ಯಾಗ ಮಾಡಿದ್ದಾರೆ. ಆದರೆ ಅವರ ಬದಕು ಇಂದಿಗೂ ಅತಂತ್ರವಾಗಿಯೇ ಇದೆ. ಇಂತಹ ತ್ಯಾಗ ಬದುಕಿಗೆ ಸರಕಾರದ ಸೌಲಭ್ಯ ಸಹಕಾರ ಪಡೆಯುವಲ್ಲಿ ತೊಂದರೆ ಕೊಡದಿರಿ. ಅರಣ್ಯ ವಾಸಿಗರಿಗೆ ಯಾವುದೇ ಕಿರುಕುಳ ನೀಡದೆ ತಾಲೂಕಿನ ಮುಗ್ಧ ಜನತೆಯ ಬದುಕಿಗೆ ಬೆಂಬಲಿಸಿ ಎಂದರು.
ಅರಣ್ಯ ಇಲಾಖೆ ಇನ್ನು ಮುಂದೆ ಯಾವುದೇ ಅಭಿವೃದ್ಧಿ ಕೆಲಸಕ್ಕೆ ತೊಂದರೆ ಕೊಡದೆ ಸರಾಗವಾಗಿ ನಡೆಯಲು ಅವಕಾಶ ನೀಡಬೇಕೆಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ತಾಲೂಕಿನ ಜೋಯಿಡಾ ಕೇಂದ್ರ ಹಾಗೂ ರಾಮನಗರಗಳಿಗೆ ಕುಡಿಯುವ ನೀರಿನ ಸಮಸ್ಯೆಯಿದ್ದು, ಕೂಡಲೆ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಮಾಜಿ ಶಾಸಕ ಸುನೀಲ ಹೆಗಡೆ, ಜಿ.ಪಂ. ಸದಸ್ಯ ರಮೇಶ ನಾಯ್ಕ, ತಾಲೂಕು ಬಿಜೆಪಿ ಅಧ್ಯಕ್ಷ ಸಂತೋಷ ರೆಡ್ಕರ ಮಂಗೇಶ ದೇಶಪಾಂಡೆ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!