ಯಾಗಾಪುರದಲ್ಲಿ ನರೇಗಾ ಕೆಲಸ ಚುರುಕು
Team Udayavani, May 20, 2020, 5:44 PM IST
ಸಾಂದರ್ಭಿಕ ಚಿತ್ರ
ವಾಡಿ: ಕೇವಲ 60 ಜನ ಕಾರ್ಮಿಕರಿಂದ ಆರಂಭಿಸಲಾಗಿದ್ದ ಉದ್ಯೋಗ ಖಾತ್ರಿ ಕೆಲಸಕ್ಕೆ ಈಗ 540 ಜನ ಶ್ರಮಿಕರು ಕೈ ಜೋಡಿಸಿದ್ದಾರೆ. ಸ್ವಂತ ಜಮೀನುಗಳಲ್ಲಿ ಬದು ನಿರ್ಮಾಣ ಹಾಗೂ ಕೆರೆ ಹೂಳೆತ್ತುವ ಕಾಯಕದಲ್ಲಿ ತೊಡಗುವ ಮೂಲಕ ಕೋವಿಡ್ ತಂದಿಟ್ಟ ಸಂಕಟದ ದಿನಗಳನ್ನು ಎದುರಿಸುತ್ತಿದ್ದಾರೆ.
ಕೆಲಸವಿಲ್ಲದೆ ಆರ್ಥಿಕ ಸಮಸ್ಯೆಯಲ್ಲಿ ಸಿಲುಕಿದ್ದ ಗ್ರಾಮದ ಕಾರ್ಮಿಕ ಮಹಿಳೆಯರಿಗೆ ಉದ್ಯೋಗ ಖಾತ್ರಿಪಡಿಸಿರುವ ಯಾಗಾಪುರ ಗ್ರಾಪಂ ಅಭಿವೃದ್ಧಿ ಅಧಿಕಾರಿ ಪಾರ್ವತಿ ಪೂಜಾರಿ, ಕೆಲಸ ಕೇಳಲು ಬರುತ್ತಿರುವವರೆಲ್ಲರಿಗೂ ಕೂಲಿ ಒದಗಿಸುತ್ತಿದ್ದಾರೆ. ಕೇಂದ್ರ ಸರಕಾರದ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕುರಿತು ಗ್ರಾಮಸ್ಥರಲ್ಲಿ ಅರಿವು ಮೂಡಿಸುವ ಮೂಲಕ ದುಡಿಯುವ ಕೈಗಳಿಗೆ ಕೆಲಸ ಒದಗಿಸಿ ಖಾತ್ರಿ ಯೋಜನೆಗೆ ಮತ್ತಷ್ಟು ಚುರುಕು ಮೂಡಿಸಿದ್ದಾರೆ.
ಕೋವಿಡ್ ವೈರಸ್ ಹರಡಲು ಘೋಷಣೆಯಾಗಿರುವ ಲಾಕ್ಡೌನ್ ನಿಯಮ ಪಾಲಿಸುವ ಜತೆಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಕಾರ್ಮಿಕರು ಕೆಲಸದಲ್ಲಿ ತೊಡಗುತ್ತಿದ್ದಾರೆ. ಉದ್ಯೋಗ ಅರಸಿ ವಿವಿಧೆಡೆ ವಲಸೆ ಹೋಗಿದ್ದ ಗ್ರಾಪಂ ವ್ಯಾಪ್ತಿಯ ವಿವಿಧ ತಾಂಡಾಗಳ ಜನರು ಮರಳಿ ಬಂದಿದ್ದಾರೆ. 14 ದಿನಗಳ ಕ್ವಾರಂಟೈನ್ ಎದುರಿಸಿ ಆರೋಗ್ಯ ಕಾಪಾಡಿಕೊಂಡ ಕಾರ್ಮಿಕರಿಗೂ ಗ್ರಾಮದಲ್ಲಿ ಉದ್ಯೋಗ ಖಾತ್ರಿಪಡಿಸಲಾಗುವುದು ಎಂದು ಪಿಡಿಒ ಪಾರ್ವತಿ ಪೂಜಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ