ನಾಳೆಯಿಂದ ರೈಲು ಸಂಚಾರ: ರಾಜ್ಯದ ಮನವಿಗೆ ರೈಲ್ವೇ ಇಲಾಖೆ ಒಪ್ಪಿಗೆ
Team Udayavani, May 21, 2020, 6:10 AM IST
ಬೆಳಗಾವಿ: ರಾಜ್ಯದಲ್ಲಿ ಬಸ್ ಸೇವೆ ಆರಂಭವಾದ ಬೆನ್ನಲ್ಲೇ ರೈಲು ಸಂಚಾರ ಪುನರಾರಂಭವಾಗಲಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮನವಿ ಮೇರೆಗೆ ಮೇ 22ರಿಂದ ರಾಜ್ಯದಲ್ಲಿ ಪ್ರಾಯೋ ಗಿಕವಾಗಿ ಎರಡು ವಿಶೇಷ ರೈಲುಗಳ ಸಂಚಾರ ಆರಂಭಿಸುವುದಾಗಿ ರೈಲ್ವೇ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದ್ದಾರೆ.
ಬುಧವಾರ ಪತ್ರಕರ್ತರ ಜತೆ ಮಾತ ನಾಡಿದ ಅವರು, ಪ್ರಯಾಣಿಕರು ಕಡ್ಡಾಯ ವಾಗಿ ಆನ್ಲೈನ್ನಲ್ಲೇ ಟಿಕೆಟ್ ಬುಕ್ಕಿಂಗ್ ಮಾಡಬೇಕು. ಟಿಕೆಟ್ ಖಚಿತವಾದ ಬಳಿಕ ವಷ್ಟೇ ನಿಲ್ದಾಣಕ್ಕೆ ಬರಬೇಕು ಎಂದು ಹೇಳಿದರು. ಮಾಸ್ಕ್ ಮತ್ತು ಸಾಮಾ ಜಿಕ ಅಂತರ ಕಡ್ಡಾಯ ಎಂದು ಅವರು ಹೇಳಿದರು.
ಮೇ 22ರಂದು ಬೆಳಗ್ಗೆ 8 ಗಂಟೆಗೆ ಬೆಂಗಳೂರಿನಿಂದ ಹೊರಡುವ ರೈಲು ಸಂಜೆ 6.30 ಗಂಟೆಗೆ ಬೆಳಗಾವಿ ತಲುಪಲಿದೆ. ಬೆಳಗಾವಿಯಿಂದ ಬೆಳಗ್ಗೆ 8ಕ್ಕೆ ಹೊರಡುವ ರೈಲು ಸಂಜೆ 6.30ಕ್ಕೆ ಬೆಂಗಳೂರು ತಲುಪಲಿದೆ. ಅದೇ ರೀತಿ ಬೆಂಗಳೂರು-ಮೈಸೂರು ರೈಲು ಬೆಳಗ್ಗೆ 9.20ಕ್ಕೆ ಬೆಂಗಳೂರಿನಿಂದ ಹೊರಟು ಮಧ್ಯಾಹ್ನ 12.45ಕ್ಕೆ ಮೈಸೂರು ತಲುಪಲಿದೆ ಎಂದರು.
ರಾಜ್ಯದ ಇತರ ಪ್ರದೇಶಗಳ ನಡುವೆ ರೈಲು ಓಡಾಟ ಕುರಿತು ಅನಂತರ ನಿರ್ಧರಿಸಲಾಗುತ್ತದೆ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!