ಅಡಕೆ ಬೆಳೆಗಾರರಿಗೆ ಸೂಚನೆ
Team Udayavani, May 21, 2020, 6:23 PM IST
ಸಾಂದರ್ಭಿಕ ಚಿತ್ರ
ಶೃಂಗೇರಿ: ಅಡಕೆ ಬೆಳೆಗಾರರು ಮುಂಗಾರು ಪೂರ್ವದಲ್ಲಿ ಕೊಳೆ ರೋಗ ನಿರ್ವಹಣೆಗಾಗಿ ರೈತರು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತೋಟಗಾರಿಕೆ ಇಲಾಖೆ ಸೂಚನೆ ನೀಡಿದೆ.
ಮುಂಗಾರು ಆರಂಭಕ್ಕೂ ಮೊದಲು ಅಡಕೆ ತೋಟದ ಬಸಿಗಾಲುವೆಯನ್ನು ಸ್ವಚ್ಛಗೊಳಿಸಿ, ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಬೇಕು. ತೋಟದಲ್ಲಿ ಬಿದ್ದಿರುವ ಸೋಗೆಯಲ್ಲಿರುವ ಹಾಳೆಯನ್ನು ಬೇರ್ಪಡಿಸಿ, ಸೋಗೆಯನ್ನು ಅಡಕೆ ಮರದ ಬುಡಕ್ಕೆ ಸೇರಿಸಬೇಕು. ಹಾಳೆಯನ್ನು ತೋಟದಿಂದ ಹೊರಗಡೆ ಹಾಕಬೇಕು. ಕೊಳೆ ಮತ್ತು ಸುಳಿ ರೋಗ ತಡೆಗಟ್ಟಲು ಶೇ.1ರ ಬೋರ್ಡೋ ದ್ರಾವಣ ಅಥವಾ 3 ಗ್ರಾಂ ತಾಮ್ರದ ಆಕ್ಸಿಕ್ಲೋರೈಡ್ ಅಥವಾ 2 ಗ್ರಾಂ. ಮೆಟಲ್ ಆಕ್ಸಿಲ್ ಜೊತೆಗೆ ಮ್ಯೋಂಕೊಜೆಬ್ ಡಬ್ಲೂಪಿ 2 ಗ್ರಾಂ. 1 ಲೀಟರ್ ನೀರಿನಲ್ಲಿ ಕರಗಿಸಿ ಮಳೆಗಾಲ ಆರಂಭವಾಗುವುದಕ್ಕೂ ಮೊದಲು ಮತ್ತು 30-45 ದಿನದ ನಂತರ ಮತ್ತೊಮ್ಮೆ ಸಿಂಪಡಿಸಬೇಕು. ರೋಗ ಪೀಡಿತ ಎಲೆಯನ್ನು ಕತ್ತರಿಸಿ ಶೇ.1ರ ಬೋರ್ಡೋ ದ್ರಾವಣ ಅಥವಾ 3 ಗ್ರಾಂ. ತಾಮ್ರದ ಆಕ್ಸಿಕ್ಲೋರೈಡ್ ಅಥವಾ 2 ಗ್ರಾಂ ಮೆಟಲ್ ಆಕ್ಸಿಲ್ ಜೊತೆಗೆ ಮ್ಯೋಂಕೊಜೆಬ್ ಡಬ್ಲೂಪಿ 2 ಗ್ರಾಂ. 1 ಲೀಟರ್ ನೀರಿನಲ್ಲಿ ಕರಗಿಸಿ ಸುಳಿ ಭಾಗಕ್ಕೆ ಸಿಂಪಡಿಸಬೇಕು ಎಂದು ತೋಟಗಾರಿಕೆ ಇಲಾಖೆ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್