27 ಜೀವಘಾತಕ ಕೀಟನಾಶಕ ನಿಷೇಧಕ್ಕೆ ಕೇಂದ್ರ ಚಿಂತನೆ
Team Udayavani, May 21, 2020, 8:40 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಮಾನವ ಮತ್ತು ಪ್ರಾಣಿಗಳ ಜೀವಕ್ಕೆ ಅಪಾಯಕಾರಿ ಎಂದು ಪರಿಗಣಿಸಿ, 27 ಕೀಟನಾಶಕಗಳನ್ನು ನಿಷೇಧ ಮಾಡಲು ಕೇಂದ್ರ ಸರಕಾರ ಚಿಂತಿಸಿದೆ.
ಅದಕ್ಕೂ ಮುನ್ನ ಆಯಾ ಕೀಟನಾಶಕ ತಯಾರಕ ಸಂಸ್ಥೆಗಳ ಆಕ್ಷೇಪಣೆಗಳಿಗೆ ಕಿವಿಗೊಡಲಿದೆ.
ಅತಿವಿಷಕಾರಿ ಎಂದೇ ಪರಿಗಣಿಸಲಾಗಿದ್ದ 66 ಕೀಟನಾಶಕಗಳ ಪೈಕಿ, 27ರ ಅಂತಿಮಪಟ್ಟಿಯನ್ನು ಕೇಂದ್ರ ಸರಕಾರ ಸಿದ್ಧಪಡಿಸಿದೆ. 66ರ ಪೈಕಿ 18 ಕೀಟನಾಶಕಗಳನ್ನು 2018ರಲ್ಲಿಯೇ ನಿಷೇಧಿಸಲಾಗಿದೆ.
‘ಪ್ರಸ್ತುತ ಈ ನಿಷೇಧ ಕ್ರಮದ ಬಗ್ಗೆ ಕರಡು ಗೆಜೆಟ್ ಅಧಿಸೂಚನೆ ಬಿಡುಗಡೆ ಮಾಡಿದ್ದೇವೆ. ಕಂಪೆನಿಗಳ ಆಕ್ಷೇಪಣೆಗಳನ್ನು ಪರಿಶೀಲಿಸಿ, ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಮೇ 14ರಿಂದ 45 ದಿನಗಳೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ’ ಎಂದು ಕೃಷಿ ಸಚಿವಾಲಯ ಹೇಳಿದೆ.
ಮೊನೊಕ್ರೊಟೊಪೊಸ್, ಅಸೆಫೇಟ್, ಕಾರ್ಬೋಫ್ಯುರಾನ್, ಕಾರ್ಬೆಂಡಝಿಮ್ ಸೇರಿದಂತೆ ಈ 27 ಕೀಟನಾಶಕಗಳು ಜಲಮೂಲ ಹಾಗೂ ಭೂಮಿಯನ್ನು ಕಲುಷಿತಗೊಳಿಸುತ್ತವೆ. ಮಾನವ, ಪ್ರಾಣಿ, ಜೇನುಹುಳುಗಳ ಜೀವಕ್ಕೆ ಕುತ್ತು ತರುತ್ತವೆ ಎಂದು ಈ ಹಿಂದೆ ತಜ್ಞರ ಸಮಿತಿ ಸರಕಾರಕ್ಕೆ ವರದಿ ಸಲ್ಲಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು