ಬಿಎಸ್ಎಫ್ ಯೋಧರ ಹತ್ಯೆ ಹೊಣೆ ಹೊತ್ತ ದ ರೆಸಿಸ್ಟೆನ್ಸ್ ಫೋರ್ಸ್
ಶ್ರೀನಗರದ ಮಾರುಕಟ್ಟೆಯಲ್ಲಿ ಬ್ರೆಡ್ ಖರೀದಿಸುತ್ತಿದ್ದಾಗ ಫೈರಿಂಗ್ ; ಉಪವಾಸ ಕೊನೆಗೊಳಿಸುವ ಹಂತದಲ್ಲಿ ನಡೆದ ದುರಂತ
Team Udayavani, May 22, 2020, 6:55 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಶ್ರೀನಗರ: ಪಾಕಿಸ್ಥಾನದ ಉಗ್ರ ಸಂಘಟನೆ ಲಷ್ಕರ್-ಎ-ತಯ್ಯಬಾದ ಹೊಸ ರೂಪ ‘ದ ರೆಸಿಸ್ಟೆನ್ಸ್ ಫೋರ್ಸ್ (ಟಿಆರ್ಎಫ್) ಕರಾಳ ಹಸ್ತ ಚಾಚಲಾರಂಭಿಸಿದೆ.
ಶ್ರೀನಗರದ ಹೊರ ವಲಯದ ಸೌರಾ ಎಂಬ ಮಾರುಕಟ್ಟೆ ಪ್ರದೇಶದಲ್ಲಿ ರಮ್ಜಾನ್ ಉಪವಾಸ ಮುಕ್ತಾಯಗೊಳಿಸುವ ನಿಟ್ಟಿನಲ್ಲಿ ಬ್ರೆಡ್ ಖರೀದಿ ಮಾಡುತ್ತಿದ್ದ ಬಿಎಸ್ಎಫ್ ನ ಇಬ್ಬರು ಯೋಧರನ್ನು ಟಿಆರ್ಎಫ್ ಉಗ್ರರು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಬುಧವಾರ ಸಂಜೆಯ ವೇಳೆಗೆ ಈ ಘಟನೆ ನಡೆದಿದೆ.
ಹುತಾತ್ಮರಾದ ಯೋಧರನ್ನು ಪಶ್ಚಿಮ ಬಂಗಾಳದ ಮುರ್ಶಿರಾಬಾದ್ ಜಿಲ್ಲೆಯ ಜಿಯಾ-ಉಲ್-ಹಕ್ (34) ಮತ್ತು ರಾಣಾ ಮಂಡಲ್ (37) ಎಂದು ಗುರುತಿಸಲಾಗಿದೆ.
ಅವರಿಬ್ಬರೂ ಸ್ನೇಹಿತರಾಗಿದ್ದು, ಪಂಡಾಕ್ ಕ್ಯಾಂಪ್ನಲ್ಲಿರುವ ಬಿಎಸ್ಎಫ್ ನ 37ನೇ ಬೆಟಾಲಿಯನ್ನಲ್ಲಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು. 2019ರ ಆ.5ರಿಂದ ಅವರಿಬ್ಬರು ಕಾಶ್ಮೀರದಲ್ಲಿ ಕರ್ತವ್ಯದಲ್ಲಿದ್ದರು. ಅವರಿಬ್ಬರು ಪೋಷಕರು, ಪತ್ನಿ, ಮಕ್ಕಳನ್ನು ಅಗಲಿದ್ದಾರೆ.
ಪೊಲೀಸ್ ಹುತಾತ್ಮ: ಪುಲ್ವಾಮಾ ಜಿಲ್ಲೆಯ ಪೆರ್ಕೂ ಬ್ರಿಡ್ಜ್ ಸಮೀಪ ಸಿಆರ್ಪಿಎಫ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್ರ ಜಂಟಿ ಗಸ್ತು ಪಡೆಯ ಮೇಲೆ ಉಗ್ರರು ಗುಂಡು ಹಾರಿಸಿದ ಪರಿಣಾಮ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಮತ್ತೂಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂವರ ಸೆರೆ: ಭದ್ರತಾ ಪಡೆಗಳು ಹಾಗೂ ಜಮ್ಮು ಕಾಶ್ಮೀರ ಪೊಲೀಸರು ಕಾರ್ಯಾಚರಣೆ ನಡೆಸಿ, ಉಗ್ರ ಸಂಘಟನೆಗೆ ಸೇರಿದ್ದ ಮೂವರನ್ನು ಬಂಧಿಸಿದ್ದಾರೆ. ಇತ್ತೀಚೆಗೆ ಈ ಮೂವರು ಲಷ್ಕರ್ ಇ-ತಯ್ಯಬಾ ಭಯೋತ್ಪಾದಕ ಸಂಘಟನೆಗೆ ಸೇರ್ಪಡೆಯಾಗಿದ್ದರು. ಕುಪ್ವಾರಾ ಜಿಲ್ಲೆಯ ಸೋಂಗಮ್ನಲ್ಲಿ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಇವರು ಸೆರೆ ಸಿಕ್ಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ