ಸೋಶಿಯಲ್ ಮೀಡಿಯಾ ಸಾಕೆಂದ ಪ್ರಿಯಾ ವಾರಿಯರ್
Team Udayavani, May 24, 2020, 8:28 PM IST
ಮಲೆಯಾಳಂನ ಓರು ಆಡಾರ್ ಲವ್ ಚಿತ್ರದಲ್ಲಿ ತನ್ನ ಕಣ್ಸನ್ನೆ ಮೂಲಕವೇ ಭಾರತೀಯ ಚಿತ್ರರಂಗದಲ್ಲಿ ಹಲವರ ಗಮನ ಸೆಳೆದಿದ್ದ, ಕಣ್ಸನ್ನೆ ಚೆಲುವೆ ಎಂದೇ ಖ್ಯಾತಿ ಪಡೆದಿದ್ದ ಪ್ರಿಯಾ ಪ್ರಕಾಶ್ ವಾರಿಯರ್ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ನಿಂದ ಇದ್ದಕ್ಕಿದ್ದಂತೆ ಹೊರನಡೆದಿದ್ದಾರೆ. ತನ್ನ ಕಣ್ಸನ್ನೆ ಮೂಲಕವೇ ಬಾಲಿವುಡ್ ಸೇರಿದಂತೆ ಹಲವು ಚಿತ್ರರಂಗಗಳಲ್ಲಿ ಆಫರ್ ಗಿಟ್ಟಿಸಿಕೊಳ್ಳುವ ಮೂಲಕ ಬಹುಬೇಡಿಕೆ ನಟಿಯಾಗಿರುವ ಪ್ರಿಯಾ ಇದ್ದಕ್ಕಿದ್ದಂತೆ ಸಾಮಾಜಿಕ ಜಾಲತಾಣಗಳಿಂದ ಅಂತರ ಕಾಯ್ದುಕೊಳ್ಳಲು ಮುಂದಾಗಿದ್ದು, ಇದರ ಭಾಗವಾಗಿ ತಮ್ಮ ಇನ್ ಸ್ಟಾಗ್ರಾಮ್ ಖಾತೆಯನ್ನು ಡಿಲೀಟ್ ಮಾಡಿದ್ದಾರೆ.
ಇನ್ನು ಇದ್ದಕ್ಕಿದ್ದಂತೆ ಪ್ರಿಯಾ ಈ ನಿರ್ಧಾರವನ್ನೇಕೆ ಮಾಡಿದರು ಎಂದು ಅವರ ಅಭಿಮಾನಿಗಳು ಯೋಚಿಸುತ್ತಿದ್ದಾರೆ. ಸದ್ಯ ಬಹುಬೇಡಿಕೆ ನಟಿಯಾಗಿದ್ದು, ಕನ್ನಡದ ಎರಡು ಸಿನಿಮಾ ಸೇರಿದಂತೆ ಹಲವು ಸಿನಿಮಾಗಳನ್ನು ಇನ್ನೂ ಕೈಯ್ಯಲ್ಲಿಟ್ಟು ಕೊಂಡಿದ್ದಾರೆ. ಹೀಗೆ ಜನಪ್ರಿಯತೆ ಗಳಿಸುತ್ತಿರುವಾಗಲೇ ಇದ್ದಕ್ಕಿದ್ದಂತೆ ಇನ್ ಸ್ಟಾಗ್ರಾಮ್ನಿಂದ ದೂರವಾಗಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಪ್ರಿಯಾ ವಾರಿಯರ್ 7.2 ಮಿಲಿಯನ್ ಫಾಲೋವರ್ಸ್ ಹೊಂದಿದ್ದು, ಮಾತ್ರವಲ್ಲದೆ ಒಂದೇ ದಿನ 6 ಲಕ್ಷಕ್ಕೂ ಅಧಿಕ ಹಿಂಬಾಲಕರನ್ನು ಹೊಂದುವ ಮೂಲಕ ದಾಖಲೆ ನಿರ್ಮಿಸಿದ್ದರು.
ತಮ್ಮ ಸಿನಿಮಾಗಳ ಕುರಿತು ಆಗಾಗ ಅಪ್ಡೇಟ್ ನೀಡುತ್ತಿದ್ದ ಪ್ರಿಯಾ ವಾರಿಯರ್ ಇದೀಗ ಇದ್ದಕ್ಕಿದ್ದಂತೆ ಮಾಯವಾಗಿರುವುದು ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ಇನ್ನು ಪ್ರಿಯಾ ವಾರಿಯರ್ ತನ್ನ ಇನ್ಸ್ಟಾಗ್ರಾಮ್ ಖಾತೆ ಡಿಲೀಟ್ ಮಾಡಲು ಅಸಲಿ ಕಾರಣವೇನು ಎನ್ನುವುದರ ಸುತ್ತ ಅನೇಕ ಗುಸುಗುಸು ಹರಿದಾಡುತ್ತಿದೆ. ಅಶ್ಲೀಲ ಕಾಮೆಂಟ್ಗಳು, ನಿಂದನೆ ಹಾಗೂ ವಿಪರೀತ ಟ್ರೊಲ್ ಗಳಿಗೆ ಒಳಗಾಗಿದ್ದರಿಂದ ಪ್ರಿಯಾ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಆದರೆ ಪ್ರಿಯಾ ನಿರ್ಧಾರದಿಂದ ಅಭಿಮಾನಿಗಳಿಗೆ ಬೇಸರವಾಗಿದ್ದು, ಮತ್ತೆ ಇನ್ಸ್ಟಾಗೆ ಮರಳುವಂತೆ ಒತ್ತಾಯಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ