“ಒಳ್ಳೆಯ ಸಿನಿಮಾವನ್ನು ಪ್ರೇಕ್ಷಕ ಕೈಬಿಡಲ್ಲ’


Team Udayavani, May 22, 2020, 4:28 AM IST

olleya-cinema

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಇಷ್ಟೊತ್ತಿಗೆ ಸಿನಿಪ್ರೇಮಿಗಳು ಸುದೀಪ್‌ ಅಭಿನಯದ ಕೋಟಿಗೊಬ್ಬ-3 ಚಿತ್ರವನ್ನು ಕಣ್ತುಂಬಿಕೊಳ್ಳುತ್ತಿ  ದ್ದರು. ಆದರೆ ಕೊರೊನಾ ಎಂಬ ಮಹಾಮಾರಿ ಎಲ್ಲದಕ್ಕೂ ಬ್ರೇಕ್‌ ಹಾಕಿದೆ. ಸಿನಿಮಾ  ಬಿಡುಗಡೆ ಬಿಡಿ, ಅದ್ಧೂರಿ ಕಾರ್ಯಕ್ರಮ ಮಾಡಿ, ಚಿತ್ರದ ಆಡಿಯೋ ರಿಲೀಸ್‌, ಮುಹೂರ್ತ ಮಾಡಬೇಕೆಂದುಕೊಂಡಿದ್ದ ಸಿನಿಮಂದಿಯ ಕನಸಿಗೆ ಕೊರೊನಾ ಅಡ್ಡಗಾಲು ಹಾಕಿದೆ. ಸದ್ಯಕ್ಕೆ ಸಿನಿಮಾ ಬಿಡುಗಡೆ ಯಾವಾಗಿನಿಂದ ಆರಂಭವಾಗುತ್ತದೆ ಎಂಬ ಸ್ಪಷ್ಟತೆ ಯಾರಿಗೂ  ಇಲ್ಲ.

ಕೋಟಿಗೊಬ್ಬ -3 ನಿರ್ಮಾಪಕ ಸೂರಪ್ಪ ಬಾಬು ಕೂಡಾ ಸದ್ಯ ರಿಲೀಸ್‌ ಬಗ್ಗೆ ಹೆಚ್ಚು ಯೋಚಿಸಿಲ್ಲ. ಅದಕ್ಕೆ ಕಾರಣ ಸಿನಿಮಾ ಮೇಲಿನ ನಂಬಿಕೆ. ಈ ಬಗ್ಗೆ ಮಾತನಾಡುವ ಸೂರಪ್ಪ ಬಾಬು, ಸಿನಿಮಾ ಬಿಡುಗಡೆಗೆ ಯಾವತ್ತಿನಿಂದ ಅನುಮತಿ ಸಿಗುತ್ತದೆ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ಹೀಗಿರುವಾಗ ನಾವು ರಿಲೀಸ್‌ ಬಗ್ಗೆ ಯೋಚಿಸುವುದರಲ್ಲಿ ಅರ್ಥವಿಲ್ಲ. ಮೊದಲು ಚಿತ್ರ ಬಿಡುಗಡೆ ಆರಂಭವಾಗಬೇಕು, ಜನ  ಸಿನಿಮಾ  ನೋಡಲು ಬರಬೇಕು. ಅವರು ಮೊದಲಿನಂತೆ ಮುಕ್ತವಾಗಿ ಸಿನಿಮಾವನ್ನು  ಎಂಜಾಯ್‌ ಮಾಡಬೇಕು.

ಆ ನಂತರ ನಾನು ಸಿನಿಮಾ ಬಿಡುಗಡೆ ಬಗ್ಗೆ ಯೋಚಿಸುತ್ತೇನೆ. ನಮಗೆ ಯಾವುದೇ ಅವಸರವಿಲ್ಲ. ಏಕೆಂದರೆ ನಾವು ಸಿನಿಮಾ  ಮಾಡಿರೋದು ಜನರಿಗೆ. ಜನರೇ ಬಂದು ನೋಡಬೇಕಾದ ಸಿನಿಮಾವನ್ನು ನಾವು ತರಾತುರಿಯಲ್ಲಿ ಬಿಡುಗಡೆ ಮಾಡಿದರೆ ಅದಕ್ಕೆ ಅರ್ಥವಿಲ್ಲ. ನಾವು ಒಳ್ಳೆಯ ಸಿನಿಮಾ ಮಾಡಿದ್ದೇವೆ. ಒಳ್ಳೆಯ ಸಿನಿಮಾವನ್ನು ಜನ ಯಾವತ್ತಿಗೂ ಕೈ  ಬಿಟ್ಟಿಲ್ಲ. ಅದು ಯಾವಾಗ ಬಿಡುಗಡೆಯಾದರೂ ಬಂದು ನೋಡಿದ್ದಾರೆ. ಈ ತರಹದ ಒಂದು ಸಂಕಷ್ಟ ಬರುತ್ತದೆ ಎಂದು ಯಾರೂ ಊಹಿಸಿರಲಿಲ್ಲ.

ತಿರುಪತಿ ದೇವಾಲಯ ಬಾಗಿಲು ಮುಚ್ಚುತ್ತದೆ ಎಂದು ನಾವು ಕನಸಲ್ಲೂ ಊಹಿಸಿರಲಿಲ್ಲ. ಹೀಗಿರುವಾಗ ನಾವು  ಸಿನಿಮಾ ಬಗ್ಗೆ ಈಗಲೇ ಹೆಚ್ಚು ತಲೆಕೆಡಿಸಿಕೊಂಡು ಕೂರೋದು ಸರಿಯಲ್ಲ. ಮುಂದೊಂದು ದಿನ ಎಲ್ಲಾ ಸರಿಯಾಗುತ್ತದೆ. ಚಿತ್ರರಂಗ ಮತ್ತೆ ಕಲರ್‌ಫುಲ್‌ ಆಗುತ್ತದೆ ಎಂಬ ಆಶಾಭಾವನೆ ಇದೆ. ಆ ನಂತರವೇ ಕೋಟಿಗೊಬ್ಬ 3 ರಿಲೀಸ್‌  ಮಾಡುತ್ತೇನೆ ಎನ್ನುವುದು ನಿರ್ಮಾಪಕ ಸೂರಪ್ಪ ಬಾಬು ಮಾತು. ಈಗಾಗಲೇ ಕೋಟಿಗೊಬ್ಬ 3 ಚಿತ್ರದ ಹಾಡೊಂದು ಬಿಡುಗಡೆಯಾಗಿ ದೊಡ್ಡ ಮಟ್ಟದಲ್ಲಿ ಹಿಟ್‌ ಆಗಿತ್ತು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.