ತುಂಬಿದ ಹೆಚ್ಚುವರಿ ಹಣ ಮೇ ತಿಂಗಳ ಬಿಲ್‌ನಲ್ಲಿ ಹೊಂದಾಣಿಕೆ


Team Udayavani, May 22, 2020, 8:33 AM IST

ತುಂಬಿದ ಹೆಚ್ಚುವರಿ ಹಣ ಮೇ ತಿಂಗಳ ಬಿಲ್‌ನಲ್ಲಿ ಹೊಂದಾಣಿಕೆ

ಹುಬ್ಬಳ್ಳಿ: ಕೋವಿಡ್ ಸೋಂಕು ಹರಡದಂತೆ ನಿಯಂತ್ರಿಸುವ ನಿಟ್ಟಿನಲ್ಲಿ ಏಪ್ರಿಲ್‌ ತಿಂಗಳಲ್ಲಿ ಹಿಂದಿನ ಮೂರು ತಿಂಗಳ ಬಳಕೆಯ ಸರಾಸರಿ ಆಧಾರದ ಮೇಲೆ ವಿದ್ಯುತ್‌ ಬಿಲ್‌ ನೀಡಿದ್ದು, ಹೆಚ್ಚುವರಿಯಾಗಿ ತುಂಬಿದ ಹಣವನ್ನು ಮೇ ತಿಂಗಳ ಬಿಲ್‌ನಲ್ಲಿ ಕಡಿಮೆಗೊಳಿಸಲಾಗಿದೆ ಎಂದು ಹೆಸ್ಕಾಂ ಸ್ಪಷ್ಟಪಡಿಸಿದೆ.

ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಏಪ್ರಿಲ್‌ ತಿಂಗಳಲ್ಲಿ ಹಿಂದಿನ ಮೂರು ತಿಂಗಳ ಸರಾಸರಿ ವಿದ್ಯುತ್‌ ಬಳಕೆಯ ಆಧಾರದ ಮೇಲೆ ಬಿಲ್‌ ನೀಡಲಾಗಿತ್ತು. ಆದರೆ ಮೇ ತಿಂಗಳ ಬಿಲ್‌ನ್ನು ಮೀಟರ್‌ ಓದಿ ನೀಡಿರುತ್ತಾರೆ. ಹೀಗಾಗಿ ಏಪ್ರಿಲ್‌ ತಿಂಗಳ ವಿದ್ಯುತ್‌ ಬಿಲ್‌ ಪಾವತಿಸಿದ್ದಲ್ಲಿ ಮೇ ತಿಂಗಳ ಬಿಲ್‌ನಲ್ಲಿ ಕಡಿಮೆಗೊಳಿಸಿ ನೀಡಲಾಗಿದೆ. ಒಂದು ವೇಳೆ ಪಾವತಿ ಮಾಡಿರದಿದ್ದರೆ ಬಾಕಿ ಎಂದು ತೋರಿಸಿ ಸರಾಸರಿ ಮೇರೆಗೆ ನೀಡಿದ ಬಿಲ್‌ನ ಮೊತ್ತ ಕಳೆದು ರೀಡಿಂಗ್‌ ಬಿಲ್‌ ನೀಡಲಾಗಿದೆ. ಹೀಗಾಗಿ ಬಿಲ್‌ನಲ್ಲಿ ಯಾವುದೇ ಲೋಪಗಳು ಇರಲ್ಲ. ಲಾಕ್‌ಡೌನ್‌ ಅವಧಿ ಬೇಸಿಗೆ ಕಾಲವಾಗಿರುವುದರಿಂದ ಗ್ರಾಹಕರು ಮನೆಯಲ್ಲಿ ಲೈಟ್‌, ಫ್ಯಾನ್‌, ಕಂಪ್ಯೂಟರ್‌, ಟಿವಿ ಮತ್ತು ಹವಾನಿಯಂತ್ರಣ ವ್ಯವಸ್ಥೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಉಪಯೋಗಿಸಿರುವ ಸಾಧ್ಯತೆಯಿದೆ. ಈ ಅವಧಿಯಲ್ಲಿ ಗೃಹ ವಿದ್ಯುತ್‌ ಬಳಕೆಯು ಸಾಮಾನ್ಯ ದಿನಗಳಿಗಿಂತ ಶೇ. 25-40 ಹೆಚ್ಚಾಗಿರುವುದು ಹಿಂದಿನ ವರ್ಷದ ಬಳಕೆಯ ದಾಖಲೆಗಳಿಂದ ತಿಳಿದು ಬಂದಿದೆ.

ಬಿಲ್‌ಗ‌ಳ ಬಗ್ಗೆ ಯಾವುದೇ ಸಂದೇಹಗಳಿದ್ದಲ್ಲಿ ತಮ್ಮ ವ್ಯಾಪ್ತಿಯ ಉಪವಿಭಾಗ ವ್ಯಾಪ್ತಿ ಅಧಿಕಾರಿಗಳನ್ನು ಸಂಪರ್ಕಿಸಿ ಇತ್ಯರ್ಥ ಪಡಿಸಿಕೊಳ್ಳಬೇಕು. ಪ್ರತಿ ಕಂದಾಯ ಉಪವಿಭಾಗದಲ್ಲಿ 2-3 ಸಿಬ್ಬಂದಿ ಇರುವ ಸೌಜನ್ಯ ಕೌಂಟರ್‌  ಗಳನ್ನು ತೆರೆಯಲಾಗಿದೆ. ಮೀಟರ್‌ ರೀಡಿಂಗ್‌ ತಪ್ಪುಗಳಿಂದ ಹಾಗೂ ಇನ್ನಿತರೆ ಕಾರಣಗಳಿಂದ ಬಿಲ್‌ ತಪ್ಪಾಗಿರುವುದು ಕಂಡು ಬಂದಲ್ಲಿ ಸರಿಪಡಿಸಿ ಪರಿಷ್ಕೃತ ಬಿಲ್‌ ನೀಡಲಾಗುವುದು. ಸಹಾಯವಾಣಿ ಸಂಖ್ಯೆ 1912ಕ್ಕೆ ಕರೆ ಮಾಡಿ ಮಾಹಿತಿ ನೀಡಿದಲ್ಲಿ ಬಿಲ್‌ ಸರಿಪಡಿಸಿ ಪುನರ್‌ ವಿತರಿಸಲಾಗುವುದು. ಒಂದು ವೇಳೆ ನೀಡಿದ ವಿವರಣೆ ಸಮಂಜಸವೆನಿಸದಿದ್ದಲ್ಲಿ ತಮ್ಮ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್‌ (ವಿ)ರವರಿಗೆ ಅಥವಾ ವೃತ್ತ ಕಚೇರಿ ಅ ಧೀಕ್ಷಕ ಇಂಜಿನಿಯರ್‌ (ವಿ)ರವರ ಕಚೇರಿಗೆ ಭೇಟಿ ನೀಡಿ ಇತ್ಯರ್ಥಪಡಿಸಿಕೊಳ್ಳಬಹುದು.

ಹುಬ್ಬಳ್ಳಿ ವಿದ್ಯುತ್‌ ಸರಬರಾಜು ಕಂಪನಿ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಸೇವೆ ನೀಡುವ ಉದ್ದೇಶ ಹೊಂದಿದ್ದು, ಗ್ರಾಹಕರು ಸಕಾಲಕ್ಕೆ ವಿದ್ಯುತ್‌ ಬಳಕೆ ಬಿಲ್‌ ಅನ್ನು ಪಾವತಿಸುವಂತೆ, ಗ್ರಾಹಕರಿಗೆ ಅನಗತ್ಯವಾಗಿ ಹೆಚ್ಚು ವಿದ್ಯುತ್‌ ಬಿಲ್‌ ನೀಡುತ್ತಿಲ್ಲ ಎಂದು ಹೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಕರ್ನಾಟಕವು ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್

Hubli; ಕರ್ನಾಟಕವು ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್

Anjali Ambigera Case; Girish and Anjali got married 15 days ago!

Anjali Ambigera Case; ಹಂತಕ ಗಿರೀಶ್ ಗೂ ಅಂಜಲಿಗೂ 15 ದಿನಗಳ ಮೊದಲೇ ಮದುವೆಯಾಗಿತ್ತು!

Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು

Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು

1-ewewqe

Anjali ಹತ್ಯೆ: ಹುಬ್ಬಳ್ಳಿಯಲ್ಲಿ ಭುಗಿಲೆದ್ದ ಪ್ರತಿಭಟನೆ; ಬಿಜೆಪಿ ಕಾರ್ಯಕರ್ತರು ವಶಕ್ಕೆ

Anjali Ambigera Case; Protest by BJP workers in Hubli

Anjali Ambigera Case; ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.