ಚಿಕ್ಕಬಳ್ಳಾಪುರಕ್ಕೂ ಎದುರಾಯಿತು ಮಹಾರಾಷ್ಟ್ರ ಕಂಟಕ: ಒಂದೇ ದಿನ 45 ಸೋಂಕು ಪ್ರಕರಣಗಳು
Team Udayavani, May 22, 2020, 1:20 PM IST
ಚಿಕ್ಕಬಳ್ಳಾಪುರ: ಲಾಕ್ಡೌನ್ ಸಡಿಲಿಕೆ ಬಳಿಕ ರಾಜ್ಯದಲ್ಲಿ ಆಘಾತ ನೀಡಿದ ಮಹಾರಾಷ್ಟ್ರ ನಂಜು ಈಗ ಬರಪೀಡಿತ ಚಿಕ್ಕಬಳ್ಳಾಪುರ ಜಿಲ್ಲೆಗೂ ತಟ್ಟಿದೆ. ಒಂದೇ ದಿನ ಜಿಲ್ಲೆಯಲ್ಲಿ 45 ಮಂದಿ ಕೋವಿಡ್-19 ಸೋಂಕಿತರು ಪತ್ತೆಯಾಗುವ ಮೂಲಕ ಜಿಲ್ಲೆಯಲ್ಲಿ ಸೋಂಕು ನಾಗಲೋಟದಲ್ಲಿ ಸಾಗಿದೆ. ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 71 ಕ್ಕೆ ಏರಿಕೆ ಕಂಡಿದೆ.
ಹಲವು ದಿನಗಳಿಂದ ಯಾವುದೇ ಕೋವಿಡ್-19 ಪಾಸಿಟೀವ್ ಪ್ರಕರಣಗಳು ಕಂಡು ಬರದೇ ನಿರಾಳವಾಗಿದ್ದ ಜಿಲ್ಲೆಯ ಜನರಲ್ಲಿ ಈಗ ಮಹಾರಾಷ್ಟ್ರದಿಂದ ಆಗಮಿಸಿರುವ 45 ನಾಗರಿಕರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿರುವುದು ಜಿಲ್ಲೆಯನ್ನು ಇನ್ನಷ್ಟು ಆತಂಕಕ್ಕೆ ಕಾರಣವಾಗಿದ್ದು ಮುಂಬೈ ನಂಜು ಎಲ್ಲಿಗೆ ಮುಟ್ಟುತ್ತದೆಯೆಂಬ ಆತಂಕ ಸಾರ್ವಜನಿಕ ವಲಯದಲ್ಲಿ ಮನೆ ಮಾಡಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಲಾಕ್ಡೌನ್ ಸಡಿಲಿಕೆ ಬಳಿಕ ನೆರೆಯ ಮಹಾರಾಷ್ಟ್ರದಿಂದ ಬರೋಬ್ಬರಿ 265 ಮಂದಿ ನಾಗರಿಕರು ಆಗಮಿಸಿದ್ದ ಇವರ ಪೈಕಿ 45 ಕೋವಿಡ್ ಸೋಂಕು ದೃಢಪಟ್ಟಿದೆ. ಇವರೆಲ್ಲಾ ಜಿಲ್ಲೆಯ ಗೌರಿಬಿದನೂರು ತಾಲೂಕಿನ ನಿವಾಸಿಗಳೆಂದು ತಿಳಿದು ಬಂದಿದೆ. ಈ ಮೊದಲು ಗೌರಿಬಿದನೂರು ತಾಲೂಕಿನಲ್ಲಿ ಒಟ್ಟು 12 ಮಂದಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು ಎಲ್ಲರೂ ಗುಣಮುಖರಾಗಿದ್ದರು. ಇದೀಗ ಮಹಾರಾಷ್ಟ್ರ ವಲಸಿಗರಿಂದ ಮತ್ತೆ ಗೌರಿಬಿದನೂರಲ್ಲಿ ಕೋವಿಡ್ ಕರಿಛಾಯೆ ತಲೆ ಎತ್ತಿದೆ.
ಜಿಲ್ಲೆಯಲ್ಲಿ ಮಹಾರಾಷ್ಟ್ರದಿಂದ ಆಗಮಿಸಿರುವ ಒಟ್ಟು 265 ಮಂದಿ ನಾಗರಿಕರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದು ಈ ಪೈಕಿ 45 ಮಂದಿಯಲ್ಲಿ ಸೋಂಕು ದೃಢಪಟ್ಟು 67 ಮಂದಿಯ ವರದಿ ನೆಗೇಟಿವ್ ಬಂದಿದೆ. ಇನ್ನೂ ಇನ್ನೂ 153 ಮಂದಿ ವೈದ್ಯಕೀಯ ವರದಿಗಾಗಿ ಕಾಯಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ