ಸೀಲ್ಡೌನ್ ತೆರವಿಗೆ ಒತ್ತಾಯ
Team Udayavani, May 22, 2020, 11:45 AM IST
ಸಾಂದರ್ಭಿಕ ಚಿತ್ರ
ದಾವಣಗೆರೆ: ಕೆ.ಟಿ.ಜೆ ನಗರದಲ್ಲಿ ಕಂಟೈನ್ಮೆಂಟ್ ಝೋನ್, ಸೀಲ್ಡೌನ್ ತೆರವುಗೊಳಿಸಬೇಕು ಎಂದು ಕೆಪಿಸಿಸಿ ಎಸ್ಸಿ ವಿಭಾಗದ ಕಾರ್ಯದರ್ಶಿ ಸೋಮಲಾಪುರ ಹನುಮಂತಪ್ಪ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.
ಕೆ.ಟಿ.ಜೆ ನಗರದ 1ನೇ ಮುಖ್ಯರಸ್ತೆ, 15ನೇ ತಿರುವಿನಲ್ಲಿ ವಾಸವಾಗಿರುವ ಉರ್ದು ಶಾಲೆಯ ಶಿಕ್ಷಿಕಿ ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ. ಆ ಶಿಕ್ಷಕಿ ಶಾಲೆಯ ರಜಾ ದಿನದಿಂದಲೂ ತಮ್ಮ ಸಂಬಂಧಿಕರ ಮನೆಗೆ ಹೋಗಿದ್ದವರು ಮನೆಗೆ ವಾಪಸ್ ಬಂದಿಲ್ಲ. ಅವರ ಆಧಾರ್ ಕಾರ್ಡ್, ಐಡಿ ಕಾರ್ಡ್ ಕೆಟಿಜೆ ನಗರ ವಿಳಾಸದಲ್ಲಿ ಇರುವುದರಿಂದ ಜಿಲ್ಲಾಡಳಿತ ಸೀಲ್ಡೌನ್ ಮಾಡಿದೆ. ಕೆ.ಟಿ.ಜೆ ನಗರದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರು ಹಾಗೂ ಹಿಂದುಳಿದ ವರ್ಗದವರೇ ಹೆಚ್ಚಾಗಿ ವಾಸವಾಗಿದ್ದು ಅಂದು ದುಡಿದು ಅಂದೇ ತಿನ್ನುವವರು ಹೆಚ್ಚಾಗಿದ್ದಾರೆ.
ಕಳೆದ ಎರಡು ತಿಂಗಳನಿಂದ ಯಾವುದೇ ಕೆಲಸವಿಲ್ಲದೆ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. 10ನೇ ಕ್ರಾಸ್ ನಿಂದ 18ನೇ ಕ್ರಾಸ್, 1 ಹಾಗೂ 2ನೇ ಮುಖ್ಯರಸ್ತೆಗಳನ್ನು ಸಂಪೂರ್ಣವಾಗಿ ಸೀಲ್ಡೌನ್ ಮಾಡಿರುವುದರಿಂದ ಜನರಿಗೆ ಅನಾನುಕೂಲವಾಗಿದೆ. ಕೋವಿಡ್ ರೋಗಿಗಳು ಇಲ್ಲದೇ ಇರುವುದರಿಂದ ಜಿಲ್ಲಾಡಳಿತ ಮರುಪರಿಶೀಲಿಸಿ ಸೀಲ್ಡೌನ್ ತೆರೆವುಗೊಳಿಸಿ ಸಾಮಾನ್ಯ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಡಾ| ಎಂ.ಡಿ. ಬಾಷಾ, ಮುಖಂಡರಾದ ಕೇರಂ ಗಣೇಶ್, ಎಸ್. ಮಾನು, ಚೇತನ್ ಕುಮಾರ್, ಮಹಾದೇವಮ್ಮ, ಗೋಣೆಪ್ಪ, ನಾಸೀರ್, ಅಂಗಡಿ ರಾಜು ಇತರರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !