ಕುಂದಾಪುರ : ಕಂಟ್ರೋಲ್ ರೂಂಗೆ ಸಂಸದೆ ಶೋಭಾ ಭೇಟಿ
Team Udayavani, May 23, 2020, 5:16 AM IST
ಕುಂದಾಪುರ: ಇಲ್ಲಿನ ಪುರಸಭೆ ಕಟ್ಟಡದ ಮೊದಲ ಮಹಡಿಯಲ್ಲಿ ಶಾಸಕ ಶ್ರೀನಿವಾಸ ಶೆಟ್ಟರ ಸೂಚನೆಯಂತೆ ಆರಂಭವಾಗಿರುವ ಕುಂದಾಪುರ ವಿಧಾನಸಭೆ ಕ್ಷೇತ್ರದ ಕಂಟ್ರೋಲ್ ರೂಂಗೆ ಶುಕ್ರವಾರ ಉಡುಪಿ – ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಭೇಟಿ ನೀಡಿದರು.
ಈ ವೇಳೆ ಸಂಸದರು ಈ ಕಂಟ್ರೋಲ್ ರೂಂಗೆ ಬರುತ್ತಿರುವ ಕರೆಗಳ ಬಗ್ಗೆ, ಯಾವ ತರಹದ ದೂರುಗಳು ಬರುತ್ತವೆ. ಎಲ್ಲಿಂದೆಲ್ಲ ಕರೆಗಳು ಬರುತ್ತಿವೆ ಎನ್ನುವುದರ ಬಗ್ಗೆ ಮಾಹಿತಿ ಪಡೆದರು.
ಕ್ವಾರಂಟೈನ್ ಕೇಂದ್ರಗಳಿಗೆ ಸಂಬಂಧಿಸಿದ ಮಾಹಿತಿ, ದೂರು ಇತ್ಯಾದಿಗಳನ್ನು ಈ ಕಂಟ್ರೋಲ್ ರೂಂಗೆ ಕರೆ ಮಾಡುವ ಮೂಲಕ ನೀಡಬಹುದು. ದೂರು ನೀಡಿದಾಗ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸಲಾಗುತ್ತಿದೆ. ಈವರೆಗೆ 300 ಕ್ಕೂ ಅಧಿಕ ಕರೆಗಳು ಬಂದಿವೆ.
ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ, ಬಿಜೆಪಿ ಕ್ಷೇತ್ರಾಧ್ಯಕ್ಷ ಶಂಕರ ಅಂಕದಕಟ್ಟೆ, ಜಿಲ್ಲಾ ಉಪಾಧ್ಯಕ್ಷೆ ಗುಣರತ್ನ, ಪುರಸಭೆ ಸದಸ್ಯರಾದ ಮೋಹನ್ ದಾಸ್ ಶೆಣೈ, ಸಂತೋಷ್ ಕುಮಾರ್ ಶೆಟ್ಟಿ, ಅಶ್ವಿನಿ ಪ್ರದೀಪ್, ಶ್ವೇತಾ ಸಂತೋಷ್, ಮುಖಂಡರಾದ ಕಿರಣ್ ಕೊಡ್ಗಿ, ಸುನೀಲ್ ಕುಮಾರ್ ಶೆಟ್ಟಿ ಹೇರಿಕುದ್ರು, ದಿವಾಕರ ಕಡ್ಗಿ, ಅರುಣ್ ಬಾಣಾ, ಸುಧೀರ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್ ಅಡಿಕೆ ತೋಟಕ್ಕೆ ಹಾನಿ
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ