“ಟಿ20 ವಿಶ್ವಕಪ್ ಮುಂದೂಡಿಕೆಯನ್ನು ಐಪಿಎಲ್ ಲಾಭಕ್ಕೆ ಬಳಸುವುದಿಲ್ಲ’
Team Udayavani, May 23, 2020, 6:45 AM IST
ಹೊಸದಿಲ್ಲಿ: ಆಸ್ಟ್ರೇಲಿಯದಲ್ಲಿ ನಡೆಯುವ ಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ಮುಂದೂಡಲ್ಪಟ್ಟರೂ ತಾನು ಈ ಅವಕಾಶವನ್ನು ಐಪಿಎಲ್ ನಡೆಸಲು ಬಳಸಿಕೊಳ್ಳುವುದಿಲ್ಲ ಎಂದು ಬಿಸಿಸಿಐ ಆಸ್ಟ್ರೇಲಿಯ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದೆ. ಅಕ್ಟೋಬರ್-ನವಂಬರ್ ತಿಂಗಳಲ್ಲಿ ಅವಕಾಶ ಸಿಕ್ಕಿದರಷ್ಟೇ ಇದನ್ನು ಐಪಿಎಲ್ಗೆ ಪರಿಗಣಿಸಲಾಗುವುದು ಎಂದಿದೆ.
ಅ. 18ರಿಂದ ಆಸೀಸ್ನಲ್ಲಿ ಟಿ20 ವಿಶ್ವಕಪ್ ಆರಂಭವಾಗಬೇಕಿದೆ. ಆದರೆ ಬಿಸಿಸಿಐ ಆಸ್ಟ್ರೇಲಿಯ ಕ್ರಿಕೆಟ್ ಮಂಡಳಿ ಮೇಲೆ ಒತ್ತಡ ಹೇರಿ ಐಪಿಎಲ್ಗೋಸ್ಕರ ಇದನ್ನು
ಮುಂದೂಡಲು ಪ್ರಯತ್ನಿಸುತ್ತಿದೆ ಎಂದು ಆಸೀಸ್ ಮಾಧ್ಯಮಗಳು ವರದಿ ಮಾಡಿವೆ.
ಐಸಿಸಿ ನಿರ್ಧಾರವೇ ಅಂತಿಮ
“ನಾವೇಕೆ ಟಿ20 ವಿಶ್ವಕಪ್ ಪಂದ್ಯಾವಳಿಯನ್ನು ಮುಂದೂಡಲು ಹೇಳುತ್ತೇವೆ? ಬಿಸಿಸಿಐ ಏಕೆ ಇದರಲ್ಲಿ ಮಧ್ಯ ಪ್ರವೇಶಿಸುತ್ತದೆ? ಇದು ಐಸಿಸಿ ನಡೆಸುವ ಕೂಟವೇ ಹೊರತು ನಮ್ಮ ನಡುವಿನ ದ್ವಿಪಕ್ಷೀಯ ಸರಣಿ ಅಲ್ಲ. ಐಸಿಸಿ ಹಾಗೂ ಆಸ್ಟ್ರೇಲಿಯ ಕ್ರಿಕೆಟ್ ಮಂಡಳಿಯ ತೀರ್ಮಾನವೇ ಇಲ್ಲಿ ಅಂತಿಮ’ ಎಂದು ಬಿಸಿಸಿಐ ಖಜಾಂಚಿ ಅರುಣ್ ಸಿಂಗ್ ಧುಮಾಲ್ ಹೇಳಿದ್ದಾರೆ.
ಕ್ರಿಕೆಟ್ ಆಸ್ಟ್ರೇಲಿಯದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆವಿನ್ ರಾಬರ್ಟ್ಸ್ ಕೂಡ ಇದೇ ಧಾಟಿಯಲ್ಲಿ ಮಾತಾಡಿದ್ದಾರೆ. “ಈ ಬಗ್ಗೆ ನಮಗೆ ಸ್ಪಷ್ಟತೆ ಇಲ್ಲ. ಪರಿಸ್ಥಿತಿ ಸುಧಾರಿಸಿದರೆ ಪಂದ್ಯಾವಳಿ ವೇಳಾಪಟ್ಟಿಯಂತೆ ನಡೆಯಲೂಬಹುದು. ಆದರೆ ಅಂತಿಮ ನಿರ್ಧಾರವೇನಿದ್ದರೂ ಐಸಿಸಿಯದೇ ಆಗಿರುತ್ತದೆ’ ಎಂದು ಹೇಳಿದ್ದಾರೆ.
ಸುಮಾರು 530 ಮಿ. ಡಾಲರ್ ಲಾಭವನ್ನು ತಂದುಕೊಡುವ 2020ರ ಐಪಿಎಲ್ ಪಂದ್ಯಾವಳಿ ಕೊರೊನಾ ಕಾರಣದಿಂದ ಮುಂದೂಡಲ್ಪಟ್ಟರೂ ಇದು ಯಾವಾಗ ನಡೆದೀತು ಎಂಬ ಬಗ್ಗೆ ಯಾವುದೇ ಅಂತಿಮ ತೀರ್ಮಾನಕ್ಕೆ ಬರಲಾಗಿಲ್ಲ. ಸೂಕ್ತ ದಿನಾಂಕಕ್ಕಾಗಿ ಬಿಸಿಸಿಐ ಹೊಂಚು ಹಾಕುತ್ತಲೇ ಇದೆ. ಟಿ20 ವಿಶ್ವಕಪ್ ಪಂದ್ಯಾವಳಿ ಮುಂದೂಡಲ್ಪಟ್ಟರೆ ಐಪಿಎಲ್ ಹಾದಿ ಸುಗಮ ಎಂಬುದೊಂದು ಲೆಕ್ಕಾಚಾರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ
T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ
Paris Olympics: ಪ್ಯಾರಿಸ್ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ
IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ
IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್ಗಳ ಜಯ
MUST WATCH
ಹೊಸ ಸೇರ್ಪಡೆ
Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ…
Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್ ಅಂಡರ್ಪಾಸ್
Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ
Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?
Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ