ಕೃಷಿ ಕ್ಷೇತ್ರದಲ್ಲಿ ಬದಲಾವಣೆ ಬರಲಿದೆ: ಉದ್ಧವ್‌

ಖಾರಿಫ್ ಕೃಷಿ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ಸಭೆ

Team Udayavani, May 23, 2020, 6:49 AM IST

ಕೃಷಿ ಕ್ಷೇತ್ರದಲ್ಲಿ ಬದಲಾವಣೆ ಬರಲಿದೆ: ಉದ್ಧವ್‌

ಸಾಂದರ್ಭಿಕ ಚಿತ್ರ

ಮುಂಬಯಿ, ಮೇ 22: ಮಳೆಗಾಲಕ್ಕೆ ಮುಂಚಿತವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರು ಗುರುವಾರ ಸಭೆ ನಡೆಸಿ ಖಾರಿಫ್ ಕೃಷಿಗೆ ರಾಜ್ಯದ ಸಿದ್ಧತೆಗಳ ಕುರಿತು ಮಾಹಿತಿ ಸಂಗ್ರಹಿಸಿದರು.

ಜೂನ್‌ 18ರಂದು ಮಾನ್ಸೂನ್‌ ಮಹಾರಾಷ್ಟ್ರಕ್ಕೆ ಆಗಮಿಸಲಿದೆ ಮತ್ತು ರಾಜ್ಯದ ಒಟ್ಟು ಖಾರಿಫ್ ಪ್ರದೇಶ 140.11 ಲಕ್ಷ ಹೆಕ್ಟೇರ್‌ ಆಗಿದೆ ಎಂದು ಸಭೆಯಲ್ಲಿ ಅಧಿಕಾರಿಗಳು ತಿಳಿಸಿದರು. ಈ ಬಾರಿ 140.11 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ 82 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಸೋಯಾಬೀನ್‌ ಮತ್ತು ಹತ್ತಿ ಕೃಷಿ ಉತ್ತೇಜನ ನೀಡಲಾಗುವುದು, ಇದು ಒಟ್ಟು ಖಾರಿಫ್ ಪ್ರದೇಶದ ಶೇ. 60ರಷ್ಟಿದೆ ಎಂದು ಮುಖ್ಯಮಂತ್ರಿಗಳ ಕಚೇರಿ (ಸಿಎಮ್ ಒ) ಪ್ರಕಟಣೆಯಲ್ಲಿ ತಿಳಿಸಿದೆ.

ಲಾಕ್‌ಡೌನ್‌ ಸಮಯದಲ್ಲಿ 9,68,550 ಕ್ವಿಂಟಾಲ್‌ ಹಣ್ಣುಗಳು ಮತ್ತು ತರಕಾರಿಗಳನ್ನು ನೇರವಾಗಿ ಆನ್‌ಲೈನ್‌ನಲ್ಲಿ ಮಾರಾಟ ಮಾಡಲಾಗಿದ್ದು, ಇದಕ್ಕಾಗಿ 3,212 ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು. ಖಾರಿಫ್ ಋತುವಿನ ಒಟ್ಟು ಬೀಜಗಳ ಪ್ರಮಾಣ 17.01 ಲಕ್ಷ ಕ್ವಿಂಟಾಲ್‌ ಆಗಿದ್ದು, ಈ ಪೈಕಿ 54,000 ಮೆಟ್ರಿಕ್‌ ಟನ್‌ ಬೀಜಗಳನ್ನು ಸಾಮಾಜಿಕ ಅಂತರದ ಮಾನದಂಡಗಳಿಗೆ ಅನುಸಾರವಾಗಿ ರೈತರಿಗೆ ನೀಡಲಾಗುತ್ತಿದೆ. ರಾಜ್ಯದಲ್ಲಿ 410 ಲಕ್ಷ ಕ್ವಿಂಟಾಲ್‌ ಹತ್ತಿ ಉತ್ಪಾದನೆಯಾಗಿದ್ದು, ಈವರೆಗೆ 344 ಲಕ್ಷ ಕ್ವಿಂಟಾಲ್‌ ಹತ್ತಿಯನ್ನು ಸಂಗ್ರಹಿಸಲಾಗಿದೆ. ಉಳಿದ ಭಾಗವನ್ನು ಜೂನ್‌ 20 ರೊಳಗೆ ಖರೀದಿಸ ಲಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

163 ಹತ್ತಿ ಖರೀದಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿದಿನ 2 ಲಕ್ಷ ಕ್ವಿಂಟಾಲ್‌ ಸಂಗ್ರಹಕ್ಕೆ ನಿರ್ದೇಶನ ನೀಡಲಾಗಿದೆ ಎಂದು ಅದು ತಿಳಿಸಿದೆ. ರಾಜ್ಯ ಸರಕಾರದ ಮಹಾತ್ಮಾ ಜ್ಯೋತಿರಾವ್‌ ಫ‌ುಲೆ ಕೃಷಿ ಸಾಲ ಮನ್ನಾ ಯೋಜನೆಯಡಿಯಲ್ಲಿನ 32 ಲಕ್ಷ ಖಾತೆದಾರರ ಪೈಕಿ 19 ಲಕ್ಷ ಖಾತೆಗಳಲ್ಲಿ 12,000 ಕೋಟಿ ರೂ.ಗಳ ಸಾಲ ಮನ್ನಾ ಮೊತ್ತವನ್ನು ಜಮೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.  ಹಣದ ಕೊರತೆಯಿಂದಾಗಿ ಇನ್ನೂ 11.12 ಲಕ್ಷ ಖಾತೆಗಳ 8,100 ಕೋಟಿ ರೂ. ಪಾವತಿ ಬಾಕಿ ಉಳಿದಿದೆ ಎಂದು ಅಧಿಕಾರಿಗಳು ಸಭೆಯಲ್ಲಿ ತಿಳಿಸಿದ್ದಾರೆ.

ಸಕಾಲದಲ್ಲಿ ರೈತರಿಗೆ ಸಹಾಯ :  ವೀಡಿಯೋ ಕಾನ್ಫರೆನ್ಸಿಂಗ್‌ ಮೂಲಕ ಸಭೆಯಲ್ಲಿ ಮಾತನಾಡಿದ ಠಾಕ್ರೆ, ರೈತರಿಗೆ ಬೆಳೆ ಸಾಲ ನೀಡುವ ವಿಷಯದಲ್ಲಿ ಸರಕಾರ ಆರ್‌ಬಿಐ ಸೂಚನೆಗಳನ್ನು ಅನುಸರಿಸುತ್ತಿದೆ ಎಂದರು. ಕೋವಿಡ್‌-19 ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದ ಸಮಯದಲ್ಲಿ ರೈತರನ್ನು ಚೆನ್ನಾಗಿ ನೋಡಿಕೊಳ್ಳಲಾಗುವುದು ಎಂದವರು ಭರವಸೆ ನೀಡಿದರು. ಹೆಚ್ಚಿನ ಸಂಖ್ಯೆಯಲ್ಲಿ ರಫ್ತು ಮಾಡಬಹುದಾದ ಉತ್ತಮ ಗುಣಮಟ್ಟದ ಉತ್ಪನ್ನವನ್ನು ಬೆಳೆಯುವತ್ತ ಗಮನ ಹರಿಸಬೇಕು. ಕೋವಿಡ್‌ -19 ಅನಂತರ ಬಹಳಷ್ಟು ಬದಲಾವಣೆಗಳು ಕಂಡುಬರಲಿವೆ. ಕೃಷಿ ಕ್ಷೇತ್ರವು ಇದರಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದವರು ಹೇಳಿದರು. ನಮ್ಮ ಸರಕಾರ ಶೀಘ್ರದಲ್ಲೇ ಆರು ತಿಂಗಳ ಅಧಿಕಾರವನ್ನು ಪೂರ್ಣಗೊಳಿಸಲಿದೆ. ನಾವು ಉತ್ತಮ ಬಜೆಟ್‌ ಮಂಡಿಸಿದ್ದೇವೆ. ಆದಾಗ್ಯೂ, ಇದಕ್ಕೆ ಕೆಲವೇ ಸಮಯದಲ್ಲಿ ನಾವು ಕೋವಿಡ್ ವೈರಸ್‌ ಸಾಂಕ್ರಾಮಿಕ ರೋಗದಲ್ಲಿ ಮುಳುಗಿದ್ದೇವೆ. ದೇಶದ ಆರ್ಥಿಕತೆಯು ಗಂಭೀರ ಅಪಾಯದಲ್ಲಿದೆ ಎಂದರು ಹೇಳಿದರು.

ಟಾಪ್ ನ್ಯೂಸ್

Coconut Water ಹೆಚ್ಚಿದ ಬಿಸಿಲ ಬೇಗೆ: ಎಳನೀರಿಗೆ 60 ರೂ.!

Coconut Water ಹೆಚ್ಚಿದ ಬಿಸಿಲ ಬೇಗೆ: ಎಳನೀರಿಗೆ 60 ರೂ.!

Hijab ಧಾರಿಣಿ ಮೊದಲ ಮುಸ್ಲಿಂ ಪ್ರಧಾನಿ: ಸಂಸದ ಅಸಾದುದ್ದೀನ್‌ ಒವೈಸಿ

Hijab ಧಾರಿಣಿ ಮೊದಲ ಮುಸ್ಲಿಂ ಪ್ರಧಾನಿ: ಸಂಸದ ಅಸಾದುದ್ದೀನ್‌ ಒವೈಸಿ

ಈ ದೇವಸ್ಥಾನದಲ್ಲಿ ನಡೆಯುತ್ತದೆ ನೂರಾರು ಪ್ರೇತ ಮದುವೆ!

ಈ ದೇವಸ್ಥಾನದಲ್ಲಿ ನಡೆಯುತ್ತದೆ ನೂರಾರು ಪ್ರೇತ ಮದುವೆ!

Horoscope: ಈ ರಾಶಿಯವರ ಬಂಧುವರ್ಗದಲ್ಲಿ ವಿವಾಹ ನಿಶ್ಚಯವಾಗಲಿದೆ

Horoscope: ಈ ರಾಶಿಯವರ ಬಂಧುವರ್ಗದಲ್ಲಿ ವಿವಾಹ ನಿಶ್ಚಯವಾಗಲಿದೆ

Legislative Council Elections: ಬಿಜೆಪಿ-ಜೆಡಿಎಸ್‌ ಮೈತ್ರಿ 5:1 ಅಲ್ಲ, 4:2

Legislative Council Elections: ಬಿಜೆಪಿ-ಜೆಡಿಎಸ್‌ ಮೈತ್ರಿ 5:1 ಅಲ್ಲ, 4:2

Prajwal Revanna ವಿಮಾನ ಟಿಕೆಟ್‌ ರದ್ದು; ಸಂಸದನ ನಡೆ ಕುತೂಹಲ, ಸಿಗದ ಸುಳಿವು

Prajwal Revanna ವಿಮಾನ ಟಿಕೆಟ್‌ ರದ್ದು; ಸಂಸದನ ನಡೆ ಕುತೂಹಲ, ಸಿಗದ ಸುಳಿವು

Byndoor : ಕಾರ್ಯಕರ್ತರಿಂದ ಕ್ಷೇತ್ರದೆಲ್ಲೆಡೆ ಸಮಾಜಮುಖಿ ಕಾರ್ಯ

Byndoor : ಕಾರ್ಯಕರ್ತರಿಂದ ಕ್ಷೇತ್ರದೆಲ್ಲೆಡೆ ಸಮಾಜಮುಖಿ ಕಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

World Mother’s Day 2024: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

MUST WATCH

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

ಹೊಸ ಸೇರ್ಪಡೆ

Coconut Water ಹೆಚ್ಚಿದ ಬಿಸಿಲ ಬೇಗೆ: ಎಳನೀರಿಗೆ 60 ರೂ.!

Coconut Water ಹೆಚ್ಚಿದ ಬಿಸಿಲ ಬೇಗೆ: ಎಳನೀರಿಗೆ 60 ರೂ.!

Hijab ಧಾರಿಣಿ ಮೊದಲ ಮುಸ್ಲಿಂ ಪ್ರಧಾನಿ: ಸಂಸದ ಅಸಾದುದ್ದೀನ್‌ ಒವೈಸಿ

Hijab ಧಾರಿಣಿ ಮೊದಲ ಮುಸ್ಲಿಂ ಪ್ರಧಾನಿ: ಸಂಸದ ಅಸಾದುದ್ದೀನ್‌ ಒವೈಸಿ

ಈ ದೇವಸ್ಥಾನದಲ್ಲಿ ನಡೆಯುತ್ತದೆ ನೂರಾರು ಪ್ರೇತ ಮದುವೆ!

ಈ ದೇವಸ್ಥಾನದಲ್ಲಿ ನಡೆಯುತ್ತದೆ ನೂರಾರು ಪ್ರೇತ ಮದುವೆ!

Horoscope: ಈ ರಾಶಿಯವರ ಬಂಧುವರ್ಗದಲ್ಲಿ ವಿವಾಹ ನಿಶ್ಚಯವಾಗಲಿದೆ

Horoscope: ಈ ರಾಶಿಯವರ ಬಂಧುವರ್ಗದಲ್ಲಿ ವಿವಾಹ ನಿಶ್ಚಯವಾಗಲಿದೆ

Legislative Council Elections: ಬಿಜೆಪಿ-ಜೆಡಿಎಸ್‌ ಮೈತ್ರಿ 5:1 ಅಲ್ಲ, 4:2

Legislative Council Elections: ಬಿಜೆಪಿ-ಜೆಡಿಎಸ್‌ ಮೈತ್ರಿ 5:1 ಅಲ್ಲ, 4:2

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.