ಭಾರತದಲ್ಲಿ ಸದ್ಯ ಯಾವುದೇ ಕ್ರೀಡಾಕೂಟಗಳಿಲ್ಲ; ರಿಜಿಜು


Team Udayavani, May 24, 2020, 5:45 AM IST

ಭಾರತದಲ್ಲಿ ಸದ್ಯ ಯಾವುದೇ ಕ್ರೀಡಾಕೂಟಗಳಿಲ್ಲ; ರಿಜಿಜು

ಹೊಸದಿಲ್ಲಿ: ಸದ್ಯ ಭಾರತ ಯಾವುದೇ ಅಂತಾರಾಷ್ಟ್ರೀಯ ಕ್ರೀಡಾಕೂಟಗಳನ್ನು ನಡೆಸುವುದಿಲ್ಲ ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್‌ ರಿಜಿಜು ಶನಿವಾರ ಸ್ಪಷ್ಟಪಡಿಸಿದ್ದಾರೆ. ಜತೆಗೆ ಕ್ರೀಡಾಭಿಮಾನಿಗಳು ಖಾಲಿ ಸ್ಟೇಡಿಯಂನಲ್ಲಿ ನಡೆಯುವ ಪಂದ್ಯಗಳಿಗೆ ಹೊಂದಿಕೊಳ್ಳಬೇಕಿದೆ ಎಂದೂ ಅವರು ಹೇಳಿದರು.

“ನಮ್ಮ ಮುಂದಿರುವ ಸದ್ಯದ ಗುರಿಯೆಂದರೆ ಕೋವಿಡ್‌-19 ವಿರುದ್ಧ ಹೋರಾಟ ನಡೆಸಿ ಇದನ್ನು ನಿರ್ಮೂಲನೆ ಮಾಡುವುದಾಗಿದೆ. ಕ್ರೀಡಾ ಜಗತ್ತು ಸಹಜ ಸ್ಥಿತಿಗೆ ಮರಳಬೇಕಿದೆ. ಈಗಿನ ಸ್ಥಿತಿಯಲ್ಲಿ ಭಾರತದ ಆತಿಥ್ಯದ ಕ್ರೀಡಾಕೂಟಗಳ ದಿನಾಂಕವನ್ನು ಸೂಚಿಸುವುದು ಅಸಾಧ್ಯ. ಸದ್ಯ ಭಾರತದಲ್ಲಿ ಯಾವುದೇ ಅಂತಾ ರಾಷ್ಟ್ರೀಯ ಕ್ರೀಡಾಕೂಟ ನಡೆಯುವ ಸಾಧ್ಯತೆ ಇಲ್ಲ’ ಎಂದು ಕಿರಣ್‌ ರಿಜಿಜು ಹೇಳಿದರು.

“ಭವಿಷ್ಯದಲ್ಲಿ ವೀಕ್ಷಕರ ಗೈರಲ್ಲಿ ಕ್ರೀಡಾ ಕೂಟಗಳು ನಡೆಯುವ ಸಾಧ್ಯತೆ ಹೆಚ್ಚಿದೆ. ಇದಕ್ಕೆ ಕ್ರೀಡಾಭಿಮಾನಿಗಳು ಹೊಂದಿ ಕೊಳ್ಳಲು ಮಾನಸಿಕವಾಗಿ ಸಿದ್ಧರಾಗ ಬೇಕಿದೆ’ ಎಂದೂ ರಿಜಿಜು ಹೇಳಿದರು.

ಐಪಿಎಲ್‌ ಭವಿಷ್ಯವೇನು?
ಈ ಸಂದರ್ಭದಲ್ಲಿ 13ನೇ ಐಪಿಎಲ್‌ ಪಂದ್ಯಾವಳಿಯ ಬಗ್ಗೆ ಪ್ರತಿಕ್ರಿಯಿಸಿದ ಕ್ರೀಡಾ ಸಚಿವರು, “ಅದು ಐಪಿಎಲ್‌ ಇರಬಹುದು ಅಥವಾ ಇನ್ಯಾವುದೇ ಕ್ರೀಡಾಕೂಟ ಇರಬಹುದು, ಇಲ್ಲಿ ಸರಕಾರದ ನಿರ್ಧಾರವೇ ಅಂತಿಮ. ಸರಕಾರ ಪರಿಸ್ಥಿತಿಯನ್ನು ಗಮನಿಸಿ ತನ್ನ ನಿರ್ಧಾರವನ್ನು ಪ್ರಕಟಿಸಲಿದೆ. ನಾವು ಕ್ರೀಡಾಕೂಟ ನಡೆಸಲೇಬೇಕೆಂಬ ಕಾರಣಕ್ಕಾಗಿ ಕ್ರೀಡಾಳುಗಳ ಆರೋಗ್ಯ ದೊಂದಿಗೆ ಚೆಲ್ಲಾಟವಾಡುವುದಿಲ್ಲ. ಆರೋಗ್ಯ ಮತ್ತು ಸುರಕ್ಷತೆಗೆ ನಮ್ಮ ಮೊದಲ ಆದ್ಯತೆ. ಇದರ ಜತೆಗೇ ಕೇಂದ್ರ ಗೃಹ ಸಚಿವಾಲಯ ಮತ್ತು ಸ್ಥಳೀಯ ಆಡಳಿತ ಮಂಡಳಿ ರೂಪಿಸಿದ ಮಾರ್ಗದರ್ಶಿ ಸೂತ್ರಗಳನ್ನೂ ಗಂಭೀರವಾಗಿ ಪರಿಗಣಿಸ ಬೇಕಿದೆ’ ಎಂದರು.ದೇಶದಲ್ಲಿ ಕ್ರೀಡಾ ಚಟುವಟಿಕೆಯನ್ನು ಮುಂದುವರಿಸಲು ಸಾಯ್‌ ಕೆಲವು ನಿಯಮಗಳನ್ನು ರೂಪಿಸಿದ ಬೆನ್ನಲ್ಲೇ ಸಚಿವ ಕಿರಣ್‌ ರಿಜಿಜು ಈ ಹೇಳಿಕೆ ನೀಡಿರುವುದು ಉಲ್ಲೇಖನೀಯ.

ಒಲಿಂಪಿಕ್ಸ್‌ ನಡೆಯುವ ವಿಶ್ವಾಸ
ಕೋವಿಡ್-19 ಕಾರಣದಿಂದ 2021ಕ್ಕೆ ಮುಂದೂಡಲ್ಪಟ್ಟ ಟೋಕಿಯೊ ಒಲಿಂ ಪಿಕ್ಸ್‌ ಕ್ರೀಡಾಕೂಟಕ್ಕೆ ಸಂಬಂಧಿಸಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕಿರಣ್‌ ರಿಜಿಜು, “ಇದು ಮುಂದಿನ ವರ್ಷ ನಡೆಯುವ ವಿಶ್ವಾಸವಿದೆ. ಇದಕ್ಕಾಗಿ ಭಾರತೀಯರ ತಯಾರಿ ಉತ್ತಮ ಮಟ್ಟದಲ್ಲಿದೆ. ಒಲಿಂಪಿಕ್ಸ್‌ ಇತಿಹಾಸದಲ್ಲೇ ನಮ್ಮವರು ಇಷ್ಟೊಂದು ದೊಡ್ಡ ಮಟ್ಟದ ಸಿದ್ಧತೆ ನಡೆಸಿದ್ದಿಲ್ಲ. ಆದರೆ ಟಾಪ್‌-10 ಅಥವಾ ಟಾಪ್‌-5 ಸ್ಥಾನದ ಗುರಿಯಲ್ಲಿ ನಾವಿಲ್ಲ. 2028ರಲ್ಲಿ ಭಾರತ ಪದಕಪಟ್ಟಿಯಲ್ಲಿ ಅಗ್ರ ಹತ್ತರಲ್ಲಿರಬೇಕು ಎಂಬುದು ನಮ್ಮ ಪ್ರಮುಖ ಗುರಿ…’ ಎಂದರು.

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.