ಸಂಪೂರ್ಣ ಲಾಕ್‌ಡೌನ್ ಉಡುಪಿ ನಾಗರಿಕರಿಂದ ಉತ್ತಮ ಸ್ಪಂದನೆ


Team Udayavani, May 25, 2020, 7:14 AM IST

ಸಂಪೂರ್ಣ ಲಾಕ್‌ಡೌನ್ ಉಡುಪಿ ನಾಗರಿಕರಿಂದ ಉತ್ತಮ ಸ್ಪಂದನೆ

ಉಡುಪಿ: ರವಿವಾರದ ಕಠಿನ ಲಾಕ್‌ಡೌನ್‌ಗೆ ಸ್ಪಂದಿಸಿ ಸಿಟಿ ಬಸ್‌ ನಿಲ್ದಾಣ ನಿರ್ಜನವಾಗಿತ್ತು.

ಉಡುಪಿ: ಕೋವಿಡ್ ವಿರುದ್ಧ ರವಿವಾರದಂದು ಘೋಷಿಸಲಾಗಿದ್ದ ಸಂಪೂರ್ಣ ಲಾಕ್‌ಡೌನ್‌ಗೆ ನಾಗರಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು ಬಹುತೇಕ ಯಶಸ್ವಿಯಾಗಿದೆ. ಅಂಗಡಿ ಮುಗ್ಗಟ್ಟು ಗಳು ಸಂಪೂರ್ಣ ಬಂದ್‌ ಆಗಿತ್ತು. ವಾಹನಗಳು ರಸ್ತೆಗೆ ಇಳಿಯದೇ ಓಡಾಟ ನಿಲ್ಲಿಸಿದ್ದವು. ಕೆಎಸ್‌ಆರ್‌ಟಿಸಿ, ಭಾರತಿ ಖಾಸಗಿ ಸಂಸ್ಥೆಯ ಬಸ್‌ಗಳು ಓಡಾಟ ನಡೆಸಿರಲಿಲ್ಲ. ಹೊರ ಜಿಲ್ಲೆಗಳಿಗೂ ಸಾರಿಗೆ ಬಸ್‌ ಓಡಾಟವಿರಲಿಲ್ಲ. ಅಟೋರಿಕ್ಷಾ, ಖಾಸಗಿ ವಾಹನಗಳು ರಸ್ತೆಗಿಳಿದಿರಲಿಲ್ಲ. ದಿನಸಿ ಅಂಗಡಿಗಳು, ಮದ್ಯದಂಗಡಿ, ಸೆಲೂನ್‌ ಅಂಗಡಿಗಳು ತೆರೆದಿರಲಿಲ್ಲ. ತರಕಾರಿ, ಹಣ್ಣುಹಂಪಲು ಮಾರುಕಟ್ಟೆಗಳು ಇರಲಿಲ್ಲ. ಹಾಲು, ಪೇಪರ್‌, ಮೆಡಿಕಲ್‌ ಶಾಪ್‌ ಮತ್ತು ಪೆಟ್ರೋಲ್‌ ಬಂಕ್‌ಗಳು ತೆರೆದಿದ್ದವು. ಉಡುಪಿ ಜಿಲ್ಲಾಸ್ಪತ್ರೆ, ಕೆಎಂಸಿ ಆಸ್ಪತ್ರೆಗಳು ತೆರೆದಿತ್ತು. ತುರ್ತು ಚಿಕಿತ್ಸೆಗಾಗಿ ಮಾತ್ರ ಜನ ಆಗಮಿಸುತ್ತಿದ್ದರು.
ಕರ್ಪ್ಯೂ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಿದ್ದರು. ಅಲ್ಲಲ್ಲಿ ಚೆಕ್‌ಪೋಸ್ಟ್‌ಗಳನ್ನು ಹಾಕಿ ಅನಗತ್ಯ ವಾಹನಗಳ ಓಡಾಟಕ್ಕೆ ತಡೆ ನೀಡಿದ್ದರು. ಪೊಲೀಸರು ಗಸ್ತು ತಿರುಗುತ್ತ ಕರ್ಫ್ಯೂ ಬಗ್ಗೆ ಪರಿಶೀಲನೆ ನಡೆಸಿದರು.

ಉಡುಪಿ: 27 ಮದುವೆ
ಲಾಕ್‌ಡೌನ್‌ ನಡುವೆ ರವಿವಾರ ಅನುಮತಿಯೊಂದಿಗೆ ಜಿಲ್ಲೆಯಾದ್ಯಂತ ಒಟ್ಟು 27 ಮದುವೆ ನಡೆದಿದ್ದು, ಉಡುಪಿಯಲ್ಲಿ 4, ಕಾಪುವಿನಲ್ಲಿ 3, ಬ್ರಹ್ಮಾವರದಲ್ಲಿ 4, ಕುಂದಾಪುರದಲ್ಲಿ 4, ಬೈಂದೂರು ಹಾಗೂ ಕಾರ್ಕಳದಲ್ಲಿ ತಲಾ 6 ಮದುವೆ ಸೇರಿದಂತೆ ಒಟ್ಟು 27 ಮದುವೆ ನಡೆದಿದೆ.

ಜಿಲ್ಲೆಯ ವಿವಿಧ ಕಡೆಯಲ್ಲಿ ಅನುಮತಿಯೊಂದಿಗೆ ಮದುವೆ ಸಮಾರಂಭ ನಡೆದಿದೆ. ಸಾರ್ವಜನಿಕರಿಂದ ಇದುವರೆಗೆ ಸಮಾರಂಭದಲ್ಲಿ ಸರಕಾರ ವಿಧಿಸಿದ ಷರತ್ತು ಹಾಗೂ ನಿಯಮ ಉಲ್ಲಂಘನೆ‌ ಕುರಿತು ದೂರು ಬಂದಿಲ್ಲ.
-ಸದಾಶಿವ ಪ್ರಭು, ಅಪರ ಜಿಲ್ಲಾಧಿಕಾರಿ, ಉಡುಪಿ

ಟಾಪ್ ನ್ಯೂಸ್

1-modi

Ayodhya;ಮೋದಿ ಭರ್ಜರಿ ರೋಡ್‌ ಶೋ: ಜನರ ಹೃದಯ ರಾಮನಷ್ಟೇ ವಿಶಾಲ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

1-modi

Ayodhya;ಮೋದಿ ಭರ್ಜರಿ ರೋಡ್‌ ಶೋ: ಜನರ ಹೃದಯ ರಾಮನಷ್ಟೇ ವಿಶಾಲ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.