ವಿದೇಶದಿಂದ ಬಂದ 681 ಮಂದಿಗೆ ಕ್ವಾರಂಟೈನ್‌


Team Udayavani, May 25, 2020, 7:44 AM IST

videsha-281

ದೇವನಹಳ್ಳಿ: ಕೋವಿಡ್‌ 19 ಲಾಕ್‌ಡೌನ್‌ ಪರಿ ಸ್ಥಿತಿಯಲ್ಲಿ ವಿವಿಧ ದೇಶಗಳಿಂದ ಒಟ್ಟು 681 ಪ್ರಯಾಣಿಕರು ತಾಲೂಕಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭಾನು ವಾರ ಬಂದಿಳಿದಿದ್ದಾರೆ. ಸಿಂಗಾಪೂರ್‌ನಿಂದ 180   ಮಂದಿ, ಮೆಲ್ಬೋರ್ನ್ ನಿಂದ 207, ದುಬೈ 180, ಟೊರೆಂಟೋದಿಂದ 146 ಪ್ರಯಾಣಿಕರು ಬಂದಿದ್ದಾರೆ. ಸಿಂಗಾಪೂರ್‌ನಿಂದ 14ನೇ ಏರ್‌ ಇಂಡಿಯಾ ವಿಮಾನದಲ್ಲಿ 180 ಅನಿವಾಸಿ ಭಾರತೀಯರು ಆಗಮಿಸಿದ್ದು ಅದರಲ್ಲಿ 03 ಮಕ್ಕಳು, 101  ಪುರುಷರು, 71 ಮಹಿಳೆ ಯರು ಇದ್ದಾರೆ.

15ನೇ ಏರ್‌ ಇಂಡಿಯಾ ವಿಮಾನದಲ್ಲಿ ಆಸ್ಟ್ರೇಲಿ ಯಾದ ಮೆಲ್ಬೋರ್ನ್ ನಿಂದ 207 ಪ್ರಯಾಣಿಕರು ಆಗಮಿ ಸಿದ್ದು ಅದರಲ್ಲಿ ಒಂದು ಮಗು, 99 ಪುರುಷ, 107 ಮಹಿಳೆ ಯರು ಇದ್ದಾರೆ. 16ನೇ  ಏರ್‌ ಇಂಡಿಯಾ ವಿಮಾನದಲ್ಲಿ ಟೊರೆಂ ಟೋದಿಂದ 146 ಪ್ರಯಾಣಿಕರು ಬಂದಿದ್ದು ಅದ ರಲ್ಲಿ 11 ಮಕ್ಕಳು ಸೇರಿ 84 ಪುರುಷರು, 62 ಮಹಿಳೆಯರು ಇದ್ದಾರೆ. 17ನೇ ಏರ್‌ ಇಂಡಿಯಾ ವಿಮಾನದಲ್ಲಿ ದುಬೈನಿಂದ 180 ಪ್ರಯಾಣಿಕರು  ಆಗಮಿ ಸಿದ್ದು ಅದರಲ್ಲಿ 3 ಮಕ್ಕಳು ಸೇರಿ 101 ಪುರುಷ, 76 ಮಹಿಳೆ ಯರು ಇದ್ದಾರೆ.

ದುಬೈನಿಂದ ಬಂದ ಏರ್‌ ಇಂಡಿಯಾ ವಿಮಾನ ಕೆಂಪೇ ಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಂಗ ಳೂರು ವಿಮಾನ ನಿಲ್ದಾಣಕ್ಕೆ  ಪ್ರಯಾಣಿಸಿತು. ತಜ್ಞ ವೈದ್ಯರು ಹಾಗೂ ಸಿಬ್ಬಂದಿ ವರ್ಗ 681 ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು ಯಾವುದೇ ಪ್ರಯಾಣಿಕರಲ್ಲಿ ಕೋವಿಡ್‌ 19 ವೈರಸ್‌ನ ಸೋಂಕಿನ ಲಕ್ಷಣ ಕಂಡು ಬಂದಿಲ್ಲ. ಎಲ್ಲಾ ಪ್ರಯಾಣಿಕರನ್ನು 14 ದಿನ  ಕ್ವಾರಂಟೈನ್‌ಗಾಗಿ ಹೋಟೆಲ್‌ಗ‌ಳಿಗೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ ತಿಳಿಸಿದರು. ಈ ವೇಳೆ ಅಪರ ಜಿಲ್ಲಾಧಿ ಕಾರಿ ಡಾ.ಜಗದೀಶ್‌ ಕೆ. ನಾಯಕ್‌, ತಹಶೀಲ್ದಾರ್‌ ಅಜಿತ್‌ ಕುಮಾರ್‌, ಪುರಸಭಾ ಮುಖ್ಯಾಧಿಕಾರಿ  ಎ.ಎಚ್‌.ನಾಗರಾಜ್‌, ಅಧಿಕಾರಿಗಳು ಇದ್ದರು.

ಕೋವಿಡ್‌ 19 ಕರ್ಫ್ಯೂಗೆ ಸ್ತಬ್ಧ: ರಾಜ್ಯ ಸರ್ಕಾರ ಕೋವಿಡ್‌ 19 ತಡೆಗಟ್ಟುವ ನಿಟ್ಟಿ ನಲ್ಲಿ ರಾಜ್ಯಾದ್ಯಂತ ಕೋವಿಡ್‌ 19 ಕರ್ಫ್ಯೂ ಜಾರಿಗೊಳಿ ಸಿದ್ದು ಭಾನುವಾರ ತಾಲೂಕು ಸ್ತಬ್ಧವಾಗಿತ್ತು. ಎಂದಿನಂತೆ ಹಾಲು, ತರಕಾರಿ, ಮೆಡಿಕಲ್‌ ಸ್ಟೋರ್, ದಿನಸಿ  ಅಂಗಡಿ, ಆಸ್ಪತ್ರೆ ತೆರೆದಿ ದ್ದವು. ಹೋಟೆಲ್‌ಗ‌ಳಲ್ಲಿ ಪಾರ್ಸಲ್‌ ಗಳಿಗೆ ಅವಕಾಶ ಕಲ್ಪಿಸ ಲಾಗಿತ್ತು. ಜಿಲ್ಲಾಡಳಿತ ಬೆಳಗ್ಗೆ 07 ಗಂಟೆಯಿಂದ ಮಧ್ಯಾಹ್ನ 11 ಗಂಟೆವರೆಗೆ ಮಾಂಸದ ಮಾರಾಟಕ್ಕೆ ಅವ ಕಾಶ ನೀಡಿತ್ತು.

ಬೆಳಗ್ಗೆ ಕೆಲ ವಾಹನಗಳು  ಸಂಚರಿಸುತ್ತಿದ್ದವು. ನಂತರ 11 ಗಂಟೆ ವೇಳೆ ವಾಹನ ಸಂಚಾರ ಸ್ಥಗಿತವಾಗಿತ್ತು. ಪೊಲೀಸರು ಪ್ರಮುಖ ರಸ್ತೆಗಳಿಗೆ ಬ್ಯಾರಿಕೇಡ್‌ ಹಾಕಿ ಬಂದ್‌ ಮಾಡಿದ್ದರು. ತಾಲೂಕಿನ ರಸ್ತೆಗಳು ಜನರಿಲ್ಲದೆ ಬಿಕೋ ಎನ್ನುತ್ತಿತ್ತು. ಬಿಎಂಟಿಸಿ, ಕೆಎಸ್‌ಆರ್‌ಟಿಸಿ  ಬಸ್‌ ಸ್ಥಗಿತವಾ ಗಿತ್ತು. ಪೋಲಿಸರು ವಾಹನದ ಮೂಲಕ ಬರುವ ಜನರಿಗೆ ಮಾಸ್ಕ್ ಧರಿಸಿ, ಪದೇ ಪದೆ ಓಡಾಡಬೇಡಿ ಎಂಬ ಸಂದೇಶ ಸಾರಿದರು.

ಟಾಪ್ ನ್ಯೂಸ್

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.