ಸಾರಿಗೆ ಸಿಬ್ಬಂದಿಗೆ ರೋಗ ನಿರೋಧಕ ಮಾತ್ರೆ
Team Udayavani, May 25, 2020, 8:33 AM IST
ಹುಬ್ಬಳ್ಳಿ: ಕೋವಿಡ್-19 ತುರ್ತು ಕರ್ತವ್ಯದಲ್ಲಿ ತೊಡಗಿರುವ ವಾಯವ್ಯ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ಸಿಬ್ಬಂದಿಯ ಆರೋಗ್ಯ ರಕ್ಷಣೆ ಹಾಗೂ ರೋಗನಿರೋಧಕ ಶಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಆಯುಷ್ ಇಲಾಖೆಯಿಂದ ನೀಡಿದ ‘ಆರ್ಸೆನಿಕ್ ಅಲ್ಬಂ-30’ ಹೋಮಿಯೋಪಥಿ ಮಾತ್ರೆ ವಿತರಿಸಲಾಯಿತು.
ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ಮಾತ್ರೆ ವಿತರಿಸಿದ ನಂತರ ಮಾತನಾಡಿ, ವಿಭಾಗದ 2000ಕ್ಕೂ ಹೆಚ್ಚಿನ ಸಿಬ್ಬಂದಿ ಮತ್ತು ಅವರ ಕುಟುಂಬದ ಸದಸ್ಯರಿಗೆ ಅಗತ್ಯವಿರುವಷ್ಟು ಹೋಮಿಯೋಪಥಿ ಮಾತ್ರೆಗಳನ್ನು ಜಿಲ್ಲಾ ಆಯುಷ್ ಇಲಾಖೆ ಉಚಿತವಾಗಿ ನೀಡಿದ್ದಾರೆ. ಆಯುಷ್ ಇಲಾಖೆ ಅಧಿಕಾರಿಗಳು ತಿಳಿಸಿದಂತೆ ಈ ಮಾತ್ರೆಗಳು ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ವೈದ್ಯರು ಸೂಚಿಸಿದಂತೆ ನಿರಂತರವಾಗಿ ಮೂರು ದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ 6 ಮಾತ್ರೆಗಳನ್ನು ತೆಗೆದುಕೊಳ್ಳಬೇಕು. ಒಂದು ತಿಂಗಳ ನಂತರ ಪುನಃ 6 ಮಾತ್ರೆಗಳಂತೆ ಮೂರು ದಿನ ತೆಗೆದುಕೊಳ್ಳಬೇಕು ಎಂದರು.
ಉತ್ತಮ ಆರೋಗ್ಯ ಹಾಗೂ ರೋಗನಿರೋಧಕ ಶಕ್ತಿ ಹೆಚ್ಚಿಸುವ ಮಾತ್ರೆಗಳ ಜತೆಗೆ ಉತ್ತಮ ಆರೋಗ್ಯಕರ ಜೀವನ ಶೈಲಿ ರೂಢಿಸಿಕೊಳ್ಳಬೇಕು. ಸಂಜೆ-ಬೆಳಗ್ಗೆ ವ್ಯಾಯಾಮ, ಯೋಗ, ಪ್ರಾಣಯಾಮ ಚಾಚೂ ತಪ್ಪದೆ ಮಾಡಬೇಕು. ಇನ್ನು ಕರ್ತವ್ಯದ ವೇಳೆಯಲ್ಲಿ ಮಾಸ್ಕ್, ಕೈಗವಸು ಸೇರಿದಂತೆ ಸುರಕ್ಷತಾ ಕ್ರಮ ಅನುಸರಿಸಬೇಕೆಂದು ಹೇಳಿದರು.
ವಿಭಾಗೀಯ ಸಾರಿಗೆ ಅಧಿಕಾರಿ ಅಶೋಕ ಪಾಟೀಲ, ವಿಭಾಗೀಯ ತಾಂತ್ರಿಕ ಶಿಲ್ಪಿ ಕಿರಣ ಬಸಾಪುರ, ಸಹಾಯಕ ಆಡಳಿತಾಧಿಕಾರಿ ನಾಗಮಣಿ, ಘಟಕ ವ್ಯವಸ್ಥಾಪಕಿ ರೋಹಿಣಿ ಬೇವಿನಕಟ್ಟಿ ಹಾಗೂ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ
Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು
LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ
Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ
Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ
MUST WATCH
ಹೊಸ ಸೇರ್ಪಡೆ
Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ
Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ
Thirthahalli: ಶಿಕ್ಷಕರ ಚುನಾವಣೆಯಲ್ಲಿ ಶಿಕ್ಷಕರೇ ಸ್ಪರ್ಧೆ ಮಾಡಬೇಕು: ಅರುಣ್ ಹೊಸಕೊಪ್ಪ
Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್ ವಂಚನೆ: ನಾರಾಯಣಸ್ವಾಮಿ
ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ