ಹುಬ್ಬಳ್ಳಿಯಲ್ಲಿ ಬಹುತೇಕ ಸ್ತಬ್ಧ


Team Udayavani, May 25, 2020, 9:22 AM IST

ಹುಬ್ಬಳ್ಳಿಯಲ್ಲಿ ಬಹುತೇಕ ಸ್ತಬ್ಧ

ಹುಬ್ಬಳ್ಳಿ: ಕೋವಿಡ್ ವೈರಸ್‌ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರಕಾರ ಘೋಷಣೆ ಮಾಡಿದಂತೆ ಪ್ರತಿ ರವಿವಾರ ಲಾಕ್‌ ಡೌನ್‌ ಜಾರಿಯಲ್ಲಿದ್ದು, ಈ ಹಿನ್ನೆಲೆಯಲ್ಲಿ ರವಿವಾರ ಬಹುತೇಕ ವ್ಯಾಪಾರ-ವಹಿವಾಟು, ಸಂಚಾರ ಸ್ತಬ್ಧವಾಗಿತ್ತು.

ಶನಿವಾರ ಸಂಜೆ 7:00 ರಿಂದ ಸೋಮವಾರ ಬೆಳಿಗ್ಗೆ 7:00 ಗಂಟೆವರೆಗೆ ಲಾಕ್‌ಡೌನ್‌ ಜಾರಿಯಲ್ಲಿದ್ದು, ಯಾರೂ ಕೂಡಾ ಹೊರ ಬರದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಸೂಚನೆ ನೀಡಿತ್ತು. ಅದರಂತೆ ಶನಿವಾರ ಸಂಜೆ 7:00 ಗಂಟೆಯಿಂದ ನಗರದಲ್ಲಿ ಪೊಲೀಸರು ವ್ಯಾಪಕ ಕ್ರಮ ಕೈಗೊಳ್ಳುವ ಮೂಲಕ ಎಲ್ಲೆಡೆ ನಾಕಾಬಂದಿ ಹಾಕಿದ್ದರು. ಸಂಜೆ 7:00 ಗಂಟೆ ನಂತರ ಹೊರ ಬರುವ ವಾಹನಗಳಿಗೆ ದಂಡ ಹಾಕುವುದು ವಾಹನಗಳ ಸೀಜ್‌ ಮಾಡುವುದು ಸೇರಿದಂತೆ ಇನ್ನಿತರೆ ಕಠಿಣ ಕ್ರಮ ಜರುಗಿಸಿದ್ದರು. ಆದರೆ ರವಿವಾರ ಬೆಳಿಗ್ಗೆಯಿಂದ ನಗರದ ಎಲ್ಲ ರಸ್ತೆಗಳು ಜನ-ವಾಹನ ಸಂಚಾರವಿಲ್ಲದೇ ಬಿಕೋ ಎನ್ನುತ್ತಿರುವುದು ಕಂಡು ಬಂತು.

ಇನ್ನು ಹೊಸ ಬಸ್‌ ನಿಲ್ದಾಣದಲ್ಲಿ ಹೊರಗಡೆಯಿಂದ ಐದು ಬಸ್‌ ಹಾಗೂ ಒಂದು ಕುಟುಂಬದ ಸುಮಾರು 7 ಜನರು ಹೊಸ ಬಸ್‌ ನಿಲ್ದಾಣದಲ್ಲಿರುವುದು ಕಂಡು ಬಂತು. ಇನ್ನುಳಿದಂತೆ ನಗರದ ಮಾರುಕಟ್ಟೆ ಸೇರಿದಂತೆ ಎಲ್ಲವೂ ಸ್ತಬ್ದಗೊಂಡಿತ್ತು. ನಗರ ಪ್ರಮುಖ ಪ್ರದೇಶಗಳಾದ ಕಿತ್ತೂರು ಚನ್ನಮ್ಮ ವೃತ್ತ, ದಾಜಿಬಾನ ಪೇಟೆ, ಜನತಾ ಬಜಾರ್‌, ದುರ್ಗದ ಬಯಲು, ಹಳೇ ಹುಬ್ಬಳ್ಳಿ, ನೀಲಿಜಿನ್‌ ರಸ್ತೆ, ಗೋಕುಲ ರಸ್ತೆ, ವಿದ್ಯಾನಗರ, ಶಿರೂರ ಪಾರ್ಕ್‌, ಇಂಡಿ ಪಂಪ್‌ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಜನ ವಾಹನ, ಜನರ ಓಡಾಟಗಳೇ ಇರಲಿಲ್ಲ. ಅಲ್ಲೊಂದು ಇಲ್ಲೊಂದು ದ್ವಿಚಕ್ರ ವಾಹನ ಸವಾರರು ಕಂಡುಬಂದರು.

ಜನರಲ್ಲಿ ಗೊಂದಲ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ವ್ಯಾಪಾರು- ವಹಿವಾಟು ನಡೆಸಬೇಕು- ಬೇಡ ಎನ್ನುವ ಗೊಂದಲದಲ್ಲಿ ಹಲವು ಜನರು ಇರುವುದು ಕಂಡು ಬಂತು. ನಗರದ ಕೆಲ ಹೊಸ ಬಡಾವಣೆಗಳಲ್ಲಿ ಜನರು ಕೆಲ ಅಂಗಡಿಗಳನ್ನು ತೆರೆದು ಮಧ್ಯಾಹ್ನದ ನಂತರ ಬಂದ್‌ ಮಾಡಿದರೆ ಇನ್ನು ಕೆಲವರು ತೆಗೆಯದೇ ಹಾಗೇ ಬಿಟ್ಟಿರುವುದು ಕಂಡು ಬಂತು. ಇದಲ್ಲದೇ ಕೆಲ ಕಡೆ ತರಕಾರಿ ಮಾರಾಟ ಮಾಡುತ್ತಿರುವುದು ಕಂಡು ಬಂತು.

ಪರವಾನಗಿಯೊಂದಿಗೆ ವಿವಾಹ: ನಗರದಲ್ಲಿ ಜಿಲ್ಲಾಡಳಿತದ ಅನುಮತಿಯೊಂದಿಗೆ 50 ಜನರ ಮಿತಿಯೊಂದಿಗೆ ಕೆಲ ವಿವಾಹ ಸಮಾರಂಭಗಳು ಸರಳವಾಗಿ ಸೂಸುತ್ರವಾಗಿ ನಡೆದವು.

ಬ್ಯಾರಿಕೇಡ್‌ನಿಂದ ಬಂದ್‌: ಪ್ರಮುಖ ರಸ್ತೆಗಳು ತೆರೆದಿರುವುದು ಬಿಟ್ಟರೆ ಇನ್ನುಳಿದಂತೆ ಒಳ ರಸ್ತೆಗಳೆಲ್ಲವನ್ನು ಬ್ಯಾರಿಕೇಡ್‌ಗಳಿಂದ ಬಂದ್‌ ಮಾಡಲಾಗಿತ್ತು. ರಸ್ತೆಯಲ್ಲಿ ಅಡ್ಡವಾಗಿ ಬ್ಯಾರಿಕೇಡ್‌ ಇಡುವ ಮೂಲಕ ಪೊಲೀಸ್‌ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರು. ಇದಲ್ಲದೇ ನಗರ ಪ್ರವೇಶ ಮಾಡುವ ಎಲ್ಲ ಪ್ರಮುಖ ರಸ್ತೆಗಳನ್ನು ಬ್ಯಾರಿಕೇಡ್‌ ಇಡುವ ಮೂಲಕ ತಪಾಸಣೆ ಮಾಡಿ ಒಳಗಡೆ ಬಿಡುತ್ತಿರುವುದು ಕಂಡು ಬಂತು. ಇನ್ನು ಸರಕು ಸಾಗಣೆ ವಾಹನ ಸಂಚಾರ ಯಥಾ ಪ್ರಕಾರ ಕಂಡು ಬಂತು.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.