ವಾರಿಯರ್ಸ್ ಗೆ ಹೋಮಿಯೋಪಥಿ ಮಾತ್ರೆ
Team Udayavani, May 25, 2020, 3:55 PM IST
ಸಾಂದರ್ಭಿಕ ಚಿತ್ರ
ಶಹಾಬಾದ: ತಾಲೂಕಿನ ಕ್ವಾರಂಟೈನ್ ಕೇಂದ್ರದಲ್ಲಿ ಕೆಲಸ ಮಾಡುತ್ತಿರುವ ಕೋವಿಡ್ ವಾರಿಯರ್ಸ್ ಹಾಗೂ ವಲಸೆ ಕಾರ್ಮಿಕರಿಗೆ ವಿತರಿಸಲು ರೇಷ್ಮಾ ಮಹಿಳಾ ಅಭಿವೃದ್ಧಿ ಮತ್ತು ಶಿಕ್ಷಣ ಸಂಸ್ಥೆ, ಡಾ| ಮಲಕರೆಡ್ಡಿ ಹೋಮಿಯೋಪಥಿಕ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ವತಿಯಿಂದ ರೋಗನಿರೋಧಕ ಶಕ್ತಿ ಹೆಚ್ಚಿಸುವ ಹೋಮಿಯೋಪಥಿಕ್ ಮಾತ್ರೆಗಳನ್ನು ತಹಶೀಲ್ದಾರ್ ಸುರೇಶ ವರ್ಮಾ ಅವರಿಗೆ ಒಪ್ಪಿಸಲಾಯಿತು.
ಕೋವಿಡ್ ವೈರಸ್ ವಿರುದ್ಧ ಹೋರಾಟ ನಡೆಸುತ್ತಿರುವ ಆಶಾ, ಅಂಗನವಾಡಿ, ಪಂಚಾಯತಿ ಸಿಬ್ಬಂದಿ, ನಗರಸಭೆ, ಆರೋಗ್ಯ ಮತ್ತು ಕಂದಾಯ ಇಲಾಖೆ ಹಾಗೂ ಇತರ ಇಲಾಖೆ ಸಿಬ್ಬಂದಿಗೆ ಹಾಗೂ ಕ್ವಾರಂಟೈನ್ ಕೇಂದ್ರದಲ್ಲಿರುವವರಿಗೆ ಸುಮಾರು 15 ದಿನಗಳಿಗಳಾಗುವಷ್ಟು ಮಾತ್ರೆಗಳನ್ನು ನೀಡಲಾಯಿತು. ಅರ್ಸೆನಿಕ್ ಅಲ್ಬಮ್ 30 ಪೊಟೆನ್ಸಿ ಎನ್ನುವ ಈ ಮಾತ್ರೆ ವ್ಯಕ್ತಿಯಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಿ ಕೋವಿಡ್ ವೈರಸ್ ವಿರುದ್ಧ ಹೋರಾಟ ನಡೆಸುತ್ತದೆ. ಆದ್ದರಿಂದ ಈ ಮಾತ್ರೆಗಳನ್ನು ಕೋವಿಡ್ ವಾರಿಯರ್ಗೆ ಹಾಗೂ ಕ್ವಾರಂಟೈನ್ ಕೇಂದ್ರದಲ್ಲಿರುವವರಿಗೆ ನೀಡಿ ಎಂದು ವೈದ್ಯರು ತಿಳಿಸಿದರು.
ತಹಶೀಲ್ದಾರ್ ಸುರೇಶ ವರ್ಮಾ, ಕೋವಿಡ್ 19 ನೋಡಲ್ ಅಧಿಕಾರಿ ನೀಲಗಂಗಾ ಎಸ್. ಬಬಲಾದ, ಪೌರಾಯುಕ್ತ ವೆಂಕಟೇಶ, ನಗರಸಭೆ ಸದಸ್ಯೆ ಸಾಬೇರಾಬೇಗಂ, ರೇಷ್ಮಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆ ಅಧ್ಯಕ್ಷೆ ಡಾ| ರೇಷ್ಮಾ, ಡಾ| ಮಲಕರೆಡ್ಡಿ ಹೋಮಿಯೋಪೆಥಿಕ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ| ಪಿ. ಸಂಪತ್ರಾವ್, ಡಾ| ರಾಜೇಂದ್ರ ಪಾಟೀಲ, ಡಾ| ಅರವಿಂದ ಕಟ್ಟಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್ ಏಕಾಂಗಿ ಫೈಟ್
DK Sivakumar: ಪ್ರಜ್ವಲ್ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ
Prajwal Revanna: ಪ್ರಜ್ವಲ್ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್
Kamalapur: ಜಾತಿ ನಿಂದನೆ ಕೇಸ್ಗೆ ಹೆದರಿ ಯುವಕ ಆತ್ಮಹತ್ಯೆ
ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್
MUST WATCH
ಹೊಸ ಸೇರ್ಪಡೆ
Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು
Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ
Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ
Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ
Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ