ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ನಡೆಸುವುದು ಬೇಡ: ಸಚಿವರಿಗೆ ಎಸ್ ಜಿ ಸಿದ್ದರಾಮಯ್ಯ ಪತ್ರ
Team Udayavani, May 25, 2020, 4:30 PM IST
ಬೆಂಗಳೂರು: ರಾಜ್ಯದಲ್ಲಿ ಸದ್ಯ ಕೋವಿಡ್-19 ಸೋಂಕಿನ ಪ್ರಮಾಣ ಹೆಚ್ಚುತ್ತಿದೆ. ಇಂಥಹ ಪರಿಸ್ಥಿತಿಯಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆ ನಡೆಸುವುದು ಸುರಕ್ಷಿತವಲ್ಲ ಎಂದು ಶಿಕ್ಷಣ ತಜ್ಞ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್ ಜಿ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.
ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಪತ್ರ ಬರೆದಿರುವ ಅವರು, ಕೆಲ ದಿನಗಳ ಹಿಂದೆ ರಾಜ್ಯದಲ್ಲಿ ಕೋವಿಡ್-19 ಸೋಂಕು ನಿಯಂತ್ರಣದಲ್ಲಿತ್ತು. ಮುಂಬೈನಿಂದ, ವಿದೇಶಗಳಿಂದ ಜನರು ವಾಪಾಸ್ಸು ಬಂದಿರಲಿಲ್ಲ. ಆಗ ಪರಿಸ್ಥಿತಿ ಹತೋಟಿಯಲ್ಲಿತ್ತು. ಹಾಗಾಗಿ ಸೂಕ್ತ ಪೂರ್ವಸಿದ್ದತೆಯೊಂದಿಗೆ ಪರೀಕ್ಷೆ ನಡೆಸಬಹುದು ಎಂದು ನಾವು ಸಲಹೆ ನೀಡಿದ್ದೆವು. ಆದರೆ ಈಗಿನ ಪರಿಸ್ಥಿತಿಯಲ್ಲಿ ಯಾವ ಕಾರಣಕ್ಕೂ ಪರೀಕ್ಷೆ ನಡೆಸುವುದು ಬೇಡ ಎಂದಿದ್ದಾರೆ.
ಮಕ್ಕಳ ಜೀವನದ ದೃಷ್ಟಿಯಿಂದ ಅವರ ಜೀವದ ಜೊತೆ ಈ ಆಪತ್ತಿಗೆ ಆಹ್ವಾನ ನೀಡುವುದು ಅಮಾನವೀಯ ನಡೆಯಾಗುತ್ತದೆ. ಆದ್ದರಿಂದ ಸದ್ಯ ಪರೀಕ್ಷೆ ನಡೆಸುವುದು ಸರಿಯಲ್ಲ ಎಂದು ಅವರು ಒತ್ತಾಯಿಸಿದ್ದಾರೆ.
ಕೋವಿಡ್-19 ಕಾರಣದಿಂದ ಮುಂದೂಡಲಾಗಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಜೂನ್ 25ರಿಂದ ನಡೆಸಲು ಸರಕಾರ ನಿರ್ಧರಿಸಿದೆ. ಬಾಕಿ ಉಳಿದಿರುವ ಪಿಯುಸಿಯ ಒಂದು ಪರೀಕ್ಷೆ ಜೂನ್ 18ರಂದು ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ