ಕೋವಿಡ್ ಹೋರಾಟದ ಸೈನಿಕರಿಗೆ ಸನ್ಮಾನ

ಸೌಹಾರ್ದತೆಯ ಪಾಠ ಕಲಿಸಿದ ಮಹಾಮಾರಿ  ಕೂಡಿ ಬಾಳುವ ಸಂದೇಶ ಮರೆಯದಿರಿ: ಸ್ವಾಮೀಜಿ

Team Udayavani, May 25, 2020, 6:12 PM IST

25-May-18

ಮುದ್ದೇಬಿಹಾಳ: ಕುಂಟೋಜಿ ಹಿರೇಮಠದಲ್ಲಿ ಆಶಾ ಕಾರ್ಯಕರ್ತೆಯರನ್ನು ಚನ್ನವೀರ ಸ್ವಾಮೀಜಿ ಹಾಗೂ ಇಟಗಿ ಗುರುಶಾಂತಲಿಂಗ ಶಿವಾಚಾರ್ಯರು ಸನ್ಮಾನಿಸಿದರು.

ಮುದ್ದೇಬಿಹಾಳ: ಕೋವಿಡ್ ಸಮಾಜದಲ್ಲಿನ ಎಲ್ಲರಿಗೂ ಸೌಹಾರ್ದತೆಯ ಪಾಠ ಕಲಿಸಿದೆ. ಕೂಡಿಬಾಳುವ ಸಂದೇಶ ನೀಡಿದೆ. ಕೋವಿಡ್ ವಾರಿಯರ್‌ಗಳು ಜೀವದ ಹಂಗು ತೊರೆದು ಮಾಡಿರುವ ಕೆಲಸ ಸದಾ ಸ್ಮರಣೀಯ ಎಂದು ಕುಂಟೋಜಿ ಸಂಸ್ಥಾನ ಹಿರೇಮಠದ ಚನ್ನವೀರ ಸ್ವಾಮೀಜಿ ಹೇಳಿದ್ದಾರೆ.

ಕುಂಟೋಜಿಯ ಶ್ರೀಮಠದಲ್ಲಿ ರವಿವಾರ ಸಂಜೆ ಶ್ರೀಮಠದಿಂದ ಹಮ್ಮಿಕೊಂಡಿದ್ದ ಕೋವಿಡ್ ವಾರಿಯರ್‌ ಗಳಿಗೆ ಸನ್ಮಾನಿಸಿ ಗೌರವಿಸುವ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು. ಸೋಮವಾರ ರಂಜಾನ್‌ ಹಬ್ಬವಿದೆ. ಕೋವಿಡ್ ಕರಾಳತೆ ಹಬ್ಬದ ಕಳೆ ಕಡಿಮೆ ಮಾಡಿದ್ದು, ಗ್ರಾಮೀಣ ಭಾಗದಲ್ಲಿ ಹಿಂದೂ ಮುಸ್ಲಿಂರು ಸಹೋದರರಂತೆ ಬಾಂಧವ್ಯದಿಂದ ಹಬ್ಬ ಆಚರಿಸುವ ಸಂಪ್ರದಾಯ ಕೈಬಿಡುವುದಿಲ್ಲ. ಇಂಥ ಸಂದರ್ಭ ಕೋವಿಡ್ ವಾರಿಯರ್‌ಗಳಾಗಿ ಕೆಲಸ ಮಾಡಿರುವ ಆಶಾ ಕಾರ್ಯಕರ್ತೆಯರನ್ನು, ಕೋವಿಡ್ ಸಂಕಷ್ಟದಲ್ಲಿ ಬಡವರ ನೆರವಿಗೆ ಧಾವಿಸುತ್ತಿರುವ ಜನಪ್ರತಿನಿಧಿಗಳನ್ನು, ಸಂಘ ಸಂಸ್ಥೆಗಳ ಅಧ್ಯಕ್ಷರನ್ನು ಗೌರವಿಸುವುದು ನಮ್ಮ ಮಠಕ್ಕೆ ಹೆಮ್ಮೆಯ ಸಂಗತಿ. ಇದು ಸಮಾಜಕ್ಕೆ ಮಾದರಿ ಕಾರ್ಯ ಎಂದರು.

ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಸಿದ್ದು ಹೆಬ್ಟಾಳ ಮಾತನಾಡಿ, ಕೊರೊನಾ ಸಮಾಜಕ್ಕೆ ಸಾಕಷ್ಟು ಪಾಠ ಕಲಿಸಿದೆ. ಈ ಸಾಂಕ್ರಾಮಿಕ ರೋಗ ನಿಯಂತ್ರಣದಲ್ಲಿ ಆಶಾ ಕಾರ್ಯಕರ್ತೆಯರ ಜತೆಗೆ ಹಲವರ ಪಾತ್ರ ಮಹತ್ವದ್ದಾಗಿದೆ. ಅನೇಕ ದಾನಿಗಳು ಬಡವರ ಸಂಕಷ್ಟಕ್ಕೆ ನೆರವಾಗಿರುವುದು ಸತ್ಸಂಪ್ರದಾಯ ಎನ್ನಿಸಿಕೊಂಡಿದೆ ಎಂದರು.

ಇದೇ ವೇಳೆ ಸ್ಥಳೀಯ ಆಶಾ ಕಾರ್ಯಕರ್ತೆಯರಾದ ಶಾರದಾ ಹಿರೇಮಠ, ಯಲ್ಲವ್ವ ಹೊಸಮನಿ, ಯಲ್ಲವ್ವ ತಳವಾರ, ರೇಣುಕಾ ತಾಮ್ರಳ್ಳಿ, ಜಿಪಂ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಕರ್ನಾಟಕ ಸೌಹಾರ್ದ ಬ್ಯಾಂಕ್‌ ಅಧ್ಯಕ್ಷ ಸತೀಶ ಓಸ್ವಾಲ್‌, ಸಿದ್ದರಾಮ ಮತ್ತು ಭಾಗ್ಯಜ್ಯೋತಿ ಅವರನ್ನು ಶ್ರೀಮಠದ ವತಿಯಿಂದ ಚನ್ನವೀರ ಸ್ವಾಮೀಜಿ, ಇಟಗಿ ಭೂ ಕೈಲಾಸ ಮೇಲಗದ್ದುಗೆ ಮಠದ ಗುರುಶಾಂತಲಿಂಗ ಶಿವಾಚಾರ್ಯರು ಸನ್ಮಾನಿಸಿ ಶುಭ ಕೋರಿದರು.

ಪ್ರವಚನಕಾರರಾದ ಸಂಗಯ್ಯಶಾಸ್ತ್ರಿಗಳು ಆಲೂರ, ಷಡಕ್ಷರಿಶಾಸ್ತ್ರಿಗಳು ಯರಗಲ್‌, ಗಣ್ಯರಾದ ಎಸ್‌. ಎಂ.ಪಾಟೀಲ, ಕೆ.ಜಿ.ಬಿರಾದಾರ, ನಯಿಮಪಾಷಾ ಇನಾಮದಾರ, ಉಸ್ಮಾನ ಇನಾಮದಾರ, ಸೋಮಣ್ಣ ಹೊಸಮನಿ, ಮಹಾಂತೇಶ ಬೂದಿಹಾಳಮಠ, ಬಸಯ್ಯ ನಂದಿಕೇಶ್ವರಮಠ, ಮಲ್ಲು ಪಲ್ಲೇದ, ಸಂಗು ಒಣರೊಟ್ಟಿ, ಪ್ರಕಾಶ ಹೂಗಾರ, ಸಂಗು ಹೂಗಾರ, ಲಿಂಗರಾಜ ಉಣ್ಣೀಭಾವಿ, ಸಂಗಮೇಶ ಗುತ್ತೇದಾರ, ಸೋಮು ಗಸ್ತಿಗಾರ, ಪ್ರಾಂಶುಪಾಲ ಡಾ| ಎನ್‌.ಬಿ.ಹೊಸಮನಿ, ಮಲ್ಲಿಕಾರ್ಜುನ ಬಾಗೇವಾಡಿ, ಶಿವಬಸ್ಸು ಸಜ್ಜನ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.