ಆತಂಕದ ನಡುವೆಯೂ ಮೆಡಿಕಲ್‌ ಶಾಪ್‌, ಪೆಟ್ರೋಲ್‌ ಬಂಕ್‌, ಎಟಿಎಂ ಸಿಬಂದಿ ಸೇವೆ


Team Udayavani, May 26, 2020, 5:30 AM IST

ಆತಂಕದ ನಡುವೆಯೂ ಮೆಡಿಕಲ್‌ ಶಾಪ್‌, ಪೆಟ್ರೋಲ್‌ ಬಂಕ್‌, ಎಟಿಎಂ ಸಿಬಂದಿ ಸೇವೆ

ಸಾಂದರ್ಭಿಕ ಚಿತ್ರ.

ವಿಶೇಷ ವರದಿ- ಮಂಗಳೂರು: ಮೆಡಿಕಲ್‌ ಶಾಪ್‌, ಪೆಟ್ರೋಲ್‌ ಬಂಕ್‌ ಮತ್ತು ಎಟಿಎಂಗಳ ಭದ್ರತಾ ಸಿಬಂದಿ ಪ್ರತಿದಿನ, ಪ್ರತಿ ಕ್ಷಣವೆಂಬಂತೆ ನಿರಂತರ ಸಾರ್ವಜನಿಕ ಸಂಪರ್ಕದಲ್ಲಿದ್ದು, ಆತಂಕದ ನಡುವೆಯೂ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಬಹುತೇಕ ಕಡೆಗಳಲ್ಲಿ ಸಿಬಂದಿಯು ಗರಿಷ್ಠ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಮಾದರಿ ಯೆನಿಸಿಕೊಂಡಿದ್ದರೆ ಕೆಲವೆಡೆ ಮಾತ್ರ ಇನ್ನೂ ಈ ಬಗ್ಗೆ ನಿರ್ಲಕ್ಷ್ಯ ಮುಂದುವರಿದಿರುವುದು ಗಂಭೀರ ವಿಚಾರ.

ಆರೋಗ್ಯ ಇಲಾಖೆ ಸೇರಿದಂತೆ ಆಡಳಿತದ ವಿವಿಧ ವಿಭಾಗಗಳ ಅಧಿಕಾರಿ, ಸಿಬಂದಿ, ಪೊಲೀಸ್‌ ಸಹಿತ ಕೋವಿಡ್-19 ವಾರಿಯರ್ ಗಳಾಗಿ ದುಡಿಯುತ್ತಿರುವವರಂತೆಯೇ ಮೆಡಿಕಲ್‌ ಶಾಪ್‌, ಪೆಟ್ರೋಲ್‌ಪಂಪ್‌ ಮತ್ತು ಎಟಿಎಂ ಕೇಂದ್ರಗಳ ಸಿಬಂದಿ ತಮ್ಮನ್ನು ಕೂಡ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಪೆಟ್ರೋಲ್‌ ಬಂಕ್‌ಗಳಲ್ಲಿ ಜಾಗೃತಿ
ಎಲ್ಲ ಲಾಕ್‌ಡೌನ್‌ಗಳ ಸಂದರ್ಭದಲ್ಲಿಯೂ ಪೆಟ್ರೋಲ್‌ ಬಂಕ್‌ಗಳಿಗೆ ವಿನಾಯಿತಿ ಇತ್ತು. ಹಾಗಾಗಿ ಪೆಟ್ರೋಲ್‌ ಹಾಕುವ ಸಿಬಂದಿ (ಕಸ್ಟಮರ್‌ ಅಟೆಂಡರ್‌) ಎಲ್ಲ ದಿನಗಳಲ್ಲಿಯೂ ದುಡಿದಿದ್ದಾರೆ. ಈಗಲೂ ರಾತ್ರಿ ಹಗಲು ಅವರ ಸೇವೆ ಮುಂದುವರಿದಿದೆ.

ಹಲವು ಶಿಫ್ಟ್ ಗಳಲ್ಲಿ ಸಿಬಂದಿ ದುಡಿಯುತ್ತಾರಾದರೂ ಪ್ರತೀ ಕ್ಷಣವೂ ಎಚ್ಚರಿಕೆಯಿಂದ ಇರುವ ಅನಿವಾರ್ಯತೆ ಅವರದ್ದು. ಅವಿಭಜಿತ ದ.ಕ. ಜಿಲ್ಲೆಯಲ್ಲಿ 6,000 ಮಂದಿ ಪೆಟ್ರೋಲ್‌ ಬಂಕ್‌ ಸಿಬಂದಿ ತಮ್ಮ ಸೇವೆ ಸಲ್ಲಿಸುತ್ತಿದ್ದಾರೆ.

ಮಾಸ್ಕ್ ಇಲ್ಲದಿದ್ದರೆ ವಾಪಸ್‌
“ಮಾಸ್ಕ್ ಧರಿಸದೇ ಬರುವ ಗ್ರಾಹಕರ ವಾಹನಗಳಿಗೆ ಪೆಟ್ರೋಲ್‌ ಹಾಕಲು ನಿರಾಕರಿಸುತ್ತೇವೆ. ಉಳಿದಂತೆ ಯಾವ ರಾಜ್ಯಗಳ ಗ್ರಾಹಕರನ್ನು ಕೂಡ ವಾಪಸ್ಸು ಕಳುಹಿಸುವುದಿಲ್ಲ. ಸಾಧ್ಯವಾದಷ್ಟು ಡಿಜಿಟಲ್‌ ಪೇಮೆಂಟ್‌ಗೆ ಸೂಚಿಸುತ್ತೇವೆ. ನಮಗೆ ಅಗತ್ಯ ಗ್ಲೌಸ್‌, ಮಾಸ್ಕ್ ಗಳನ್ನು ಒದಗಿಸಲಾಗಿದೆ.ನಮ್ಮ ಎಚ್ಚರಿಕೆಯಲ್ಲಿ ನಾವಿದ್ದೇವೆ’ ಎನ್ನುತ್ತಾರೆ ಮಂಗಳೂರು ಭಾಗದ ಪೆಟ್ರೋಲ್‌ ಪಂಪ್‌ನ ಓರ್ವ ಸಿಬಂದಿ.

ಸುರಕ್ಷಾ ಕ್ರಮ ಪಾಲಿಸಿ
ಹೆಚ್ಚಿನ ಪೆಟ್ರೋಲ್‌ ಬಂಕ್‌ಗಳ ಸಿಬಂದಿ ಗರಿಷ್ಠ ಸುರಕ್ಷತಾ ಕ್ರಮಗಳನ್ನು ಪಾಲಿಸುತ್ತಿದ್ದಾರೆ. ಕೆಲವೆಡೆ ಸಿಬಂದಿ ಮಾಸ್ಕ್ ನ್ನುಸಮರ್ಪಕವಾಗಿ ಧರಿಸದಿರುವುದು ಕೂಡ ಗಮನಕ್ಕೆ ಬಂದಿದೆ. ಇಂತವರಲ್ಲಿಯೂ ಹೆಚ್ಚು ಜಾಗೃತಿ ಮೂಡಿಸಬೇಕಾಗಿದೆ ಎನ್ನುತ್ತಾರೆ ಗ್ರಾಹಕರು.

ಎಟಿಎಂ ಸಿಬಂದಿಗೂ ಆತಂಕ
ಎಟಿಎಂಗಳ ಭದ್ರತಾ ಸಿಬಂದಿ ಕೂಡ ಆತಂಕದ ನಡುವೆ ಸೇವೆ ಸಲ್ಲಿಸುತ್ತಿದ್ದಾರೆ. ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಹಾಗೂ ನಗರಗಳಲ್ಲಿ ಇರುವ ಎಟಿಎಂಗಳಿಗೆ ಕೆಲವೊಮ್ಮೆ ಬೇರೆ ರಾಜ್ಯಗಳ ವಾಹನಗಳ ಚಾಲಕರು ಕೂಡ ಬರುತ್ತಾರೆ. ಇದು ಎಟಿಎಂ ಭದ್ರತಾ ಸಿಬಂದಿಯ ಆತಂಕಕ್ಕೆ ಕಾರಣ. ಕೆಲವು ಎಟಿಎಂಗಳಲ್ಲಿ ಗ್ರಾಹಕರ ಬಳಕೆಗಾಗಿ ಸ್ಯಾನಿಟೈಸರ್‌ಗಳನ್ನು ಇಡಲಾಗಿದೆ. ಇನ್ನು ಕೆಲವೆಡೆ ಸ್ಯಾನಿಟೈಸರ್‌ಗಳಿಲ್ಲ. ಕೆಲವೆಡೆ ಎಟಿಎಂ ಭದ್ರತಾ ಸಿಬಂದಿ ಕೂಡ ಮಾಸ್ಕ್ ಧರಿಸದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಅವರು ಕೂಡ ಹೆಚ್ಚು ಜಾಗರೂಕತೆ ವಹಿಸಬೇಕು ಎನ್ನುತ್ತಾರೆ ಸಾರ್ವಜನಿಕರು. ಫಾರ್ಮಸಿಸ್ಟ್‌ಗಳು ಸೇರಿದಂತೆ ಮೆಡಿಕಲ್‌ಗ‌ಳಿಗೆ ಸಂಬಂಧಿಸಿದ ಕೆಲಸಗಳಲ್ಲಿಯೂ ನೂರಾರು ಮಂದಿ ತೊಡಗಿಸಿಕೊಂಡಿದ್ದು ಅವರು ಕೂಡ ನಿರಂತರವಾಗಿ ತಮ್ಮ ಕರ್ತವ್ಯ ಮುಂದುವರೆಸಿದ್ದಾರೆ. ಇವರ ಸೇವೆಗೂ ಸಾರ್ವಜನಿಕರಿಂದ ಶ್ಲಾಘನೆ ವ್ಯಕ್ತವಾಗಿದೆ.

ಸುರಕ್ಷತಾ ಕ್ರಮ ಪಾಲನೆ
ಪೆಟ್ರೋಲ್‌ ಬಂಕ್‌ಗಳಲ್ಲಿ ದುಡಿಯುವವರಿಗೆ ಗ್ಲೌಸ್‌, ಮಾಸ್ಕ್ ಸೇರಿದಂತೆ ಎಲ್ಲ ಸುರಕ್ಷಾ ಪರಿಕರಗಳನ್ನು ಒದಗಿಸಿ ಮಾಹಿತಿ ನೀಡಲಾಗಿದೆ. ಅಗತ್ಯ ಸುರಕ್ಷತಾ ಕ್ರಮಗಳಿಂದಾಗಿ ಇದುವರೆಗೆ ಪೆಟ್ರೋಲ್‌ ಬಂಕ್‌ ಸಿಬಂದಿಗೆ ಕೋವಿಡ್-19 ಸೋಂಕು ಉಂಟಾಗಿಲ್ಲ. ಪೆಟ್ರೋಲ್‌ ಡೀಸೆಲ್‌ ಮಾರಾಟ ತೀವ್ರ ಕುಸಿತ ಕಂಡಿದ್ದರೂ ಸಿಬಂದಿ ಸಂಬಳ ಬಾಕಿ ಇಟ್ಟಿಲ್ಲ. ಸಿಬಂದಿಗೆ ಪೆಟ್ರೋಲಿಯಂ ಕಂಪೆನಿಗಳು ಕೋವಿಡ್‌ ಇನ್ಶೂರೆನ್ಸ್‌ ಎಂಬ ವಿಮೆ ಮಾಡಿದ್ದು ಒಂದು ವೇಳೆ ಕೋವಿಡ್-19 ದಿಂದ ಮೃತಪಟ್ಟರೆ 5 ಲ.ರೂ. ಪರಿಹಾರ ದೊರೆಯುತ್ತದೆ. ಪ್ರಸ್ತುತ ಡಿಜಿಟಲ್‌ ಪೇಮೆಂಟ್‌ ಪ್ರಮಾಣ ಹೆಚ್ಚಾಗಿದೆ.
 -ಪಿ.ವಾಮನ್‌ ಪೈ, ಅಧ್ಯಕ್ಷ, ಉಡುಪಿ ಮತ್ತು ದ.ಕ. ಜಿಲ್ಲಾ ಪೆಟ್ರೋಲಿಯಂ ಡೀಲರ್ ಅಸೋಸಿಯೇಶನ್‌.

ಟಾಪ್ ನ್ಯೂಸ್

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಖೋಟಾ ನೋಟು ವಿನಿಮಯ ದಂಧೆ ಪ್ರಕರಣ ; ಆರೋಪಿಗಳಿಂದ 506 ಖೋಟಾ ನೋಟುಗಳ ವಶ

Bantwal ಖೋಟಾ ನೋಟು ವಿನಿಮಯ ದಂಧೆ ಪ್ರಕರಣ ; ಆರೋಪಿಗಳಿಂದ 506 ಖೋಟಾ ನೋಟುಗಳ ವಶ

Uppinangady ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿ ಸಾವು

Uppinangady ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿ ಸಾವು

lರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

ರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

Bantwal ಎರಡೂಕಾಲು ಎಕ್ರೆ ವಿಸ್ತೀರ್ಣ; ಅಭಿವೃದ್ಧಿ ಆಗದೇ ಜೀರ್ಣ

Bantwal ಎರಡೂಕಾಲು ಎಕ್ರೆ ವಿಸ್ತೀರ್ಣ; ಅಭಿವೃದ್ಧಿ ಆಗದೇ ಜೀರ್ಣ

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

ec-aa

Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.