ಸುರೇಶ್ಗೌಡರಿಂದ ಪಾಠ ಕಲಿಯಬೇಕಿಲ್ಲ
Team Udayavani, May 26, 2020, 5:56 AM IST
ನಾಗಮಂಗಲ: ಕೋವಿಡ್-19ರ ನಿಯಂತ್ರಣದ ಬಗ್ಗೆ ಸರ್ಕಾರ ಸನ್ನಿವೇಶಕ್ಕೆ ತಕ್ಕಂತೆ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದು ಈ ವಿಚಾರದಲ್ಲಿ ಜಿಲ್ಲಾಡಳಿತ ಸಕಾರಾತ್ಮಕವಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ನಾವು ಯಾರಿಂದಲೂ ಪಾಠ ಕಲಿಯುವ ಅಗತ್ಯವಿಲ್ಲ ಎಂದು ಶಾಸಕ ಸುರೇಶ್ಗೌಡರ ಹೇಳಿಕೆಗೆ ಜಿಲ್ಲಾ ಸಚಿವ ನಾರಾಯಣಗೌಡ ತಿರುಗೇಟು ನೀಡಿದರು.
ತಾಲೂಕಿನ ಸಾತೇನಹಳ್ಳಿಯಲ್ಲಿ ಕಂಟೈನ್ಮೆಂಟ್ ಝೊನ್ ತೆರವುಗೊಳಿಸಿ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವನಾಗಿ ನನಗೂ ಜವಾಬ್ದಾರಿಯಿದೆ. ಜವಾಬ್ದಾರಿ ಇಲ್ಲದೆ ಮಾತನಾಡುವವರ ಬಗ್ಗೆ ನಾನು ಮಾತನಾಡಲ್ಲ. ಕೊರೊನಾ ನಿಯಂತ್ರಣ ವಿಚಾರದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂಬು ದು ನನ್ನ ಉದ್ದೇಶ. ಆದರೆ ಇದನ್ನು ಸಹಿಸಿಕೊಳ್ಳದವರು ನೀಡುವ ಹೇಳಿಕೆಗಳಿಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.
ಶಿಸ್ತು ಕ್ರಮ: ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದ ಕೊರೊನಾ ಸೋಂಕು ವರದಿಯ ಯಡವಟ್ಟು ಕುರಿತು ಪ್ರತಿಕ್ರಿಯಿಸಿ, ಈ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದೇನೆ. ಮಾಹಿತಿ ಪರಿಶೀಲಿಸಿ ತಪ್ಪಿತಸ್ಥರ ವಿರುದಟಛಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು. ಈ ವೇಳೆ ಉಪವಿಭಾಗಾಧಿಕಾರಿ ಶೈಲಜಾ, ಡಿವೈಎಸ್ಪಿ ವಿಶ್ವನಾಥ್, ತಹಶೀಲ್ದಾರ್ ಕುಂಞ ಅಹಮದ್, ಡಾ.ಧನಂಜಯ, ಸಿಪಿಐ ರಾಜೇಂದ್ರ, ತಾಪಂ ಇಒ ಅನಂತರಾಜು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ