ಜಿಲ್ಲಾದ್ಯಂತ ಸರಳವಾಗಿ ರಂಜಾನ್ ಆಚರಣೆ
Team Udayavani, May 26, 2020, 7:28 AM IST
ರಾಮನಗರ: ಜಿಲ್ಲಾದ್ಯಂತ ಸೋಮವಾರ ಮುಸ್ಲಿಮರು ಶ್ರದ್ಧೆ, ಭಕ್ತಿ, ಸಡಗರದಿಂದ ರಂಜಾನ್ ಹಬ್ಬವನ್ನು ತಮ್ಮ ಮನೆಗಳಲ್ಲೇ ಆಚರಿಸಿಕೊಂಡರು. ಕೊರೊನಾ ಸೋಂಕು ಕಾರಣ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿರಲಿಲ್ಲ. ಮನುಷ್ಯನ ಮನಸ್ಸಿನಲ್ಲಿ ಹುದುಗಿರುವ ದ್ವೇಷ ಭಾವನೆ ಕಡಿಮೆ ಮಾಡಿ, ಪ್ರೀತಿ ಹುಟ್ಟಿಸುವ ಪವಿತ್ರ ರಂಜಾನ್ ಹಬ್ಬವನ್ನು ಜಿಲ್ಲೆಯ 4 ತಾಲೂಕು ಕೇಂದ್ರ ಗಳು, ಗ್ರಾಮೀಣ ಭಾಗಗಳಲ್ಲಿ ಆಚರಿಸಿದರಾದರೂ, ಅದೆಲ್ಲ ಮನೆ ಮಟ್ಟಿಗೆ ಇತ್ತು.
ರೇಷ್ಮೆ ನಗರಿ ರಾಮನಗರದಲ್ಲಿ ನಗರದ ಮಿನಿ ವಿಧಾನಸೌಧದ ಎದುರಿನಲ್ಲಿರುವ ಈದ್ಗಾ ಮೈದಾನದಲ್ಲಿ ಪ್ರತಿ ವರ್ಷ ಸಾಮೂಹಿಕ ಪ್ರಾರ್ಥನೆ ಅವಕಾಶವಿರುತ್ತಿತ್ತು. ಆದರೆ ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತೆ ಕಾರಣ ಸಾಮೂಹಿಕ ಪ್ರಾರ್ಥನೆಗೆ ಜಿಲ್ಲಾಡಳಿತ ಅವ ಕಾಶ ಮಾಡಿರಲಿಲ್ಲ. ಈ ಬಗ್ಗೆ ಮಾಧ್ಯಮಗಳಲ್ಲಿ ಪ್ರಚಾರವಿತ್ತು. ಆದರೂ ಕೆಲವರು ಈದ್ಗಾ ಮೈದಾನದತ್ತ ಪ್ರಾರ್ಥನೆಗೆಂದು ಬಂದರು. ಅಲ್ಲಿದ್ದ ಪೊಲೀಸರು ಅವರ ನ್ನು ಹಿಂದಕ್ಕೆ ಕಳುಹಿಸಿದರು.
ನಗರದ ಪ್ರಮುಖ ರಸ್ತೆಗಳ ಮೂಲಕ ಈದ್ಗಾ ಮೈದಾನ ತಲುಪುವ ರಸ್ತೆಗಳಲ್ಲಿ ಪೊಲೀಸರು ಬ್ಯಾರಿ ಕೇಡ್ ಇರಿಸಿದ್ದ ಪೊಲೀಸರು ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ ಎಂಬುದರ ಬಗ್ಗೆ ತಿಳಿವಳಿಕೆ ನೀಡಿ ವಾಪಸು ಕಳುಹಿಸಿತ್ತದ್ದದ್ದು ಕಂಡು ಬಂತು. ರಸ್ತೆಯಲ್ಲಿ ಓಡಾಡುತ್ತಿದ್ದ ಮುಸಲ್ಮಾನರು ಪರಸ್ಪರ ಆಲಿಂಗಿಸಿ ಕೊಂಡು ಹಬ್ಬದ ಶುಭಾಶಯ ಕೋರಿದ್ದು ಕಂಡು ಬಂತು. ಎಲ್ಲ ಧರ್ಮಗಳಲ್ಲೂ ಉಪವಾಸಕ್ಕೆ ಪ್ರಾಮುಖ್ಯತೆ ಎಲ್ಲ ಧರ್ಮದಲ್ಲಿಯೂ ಉಪವಾಸಕ್ಕೆ ಪ್ರಾಮುಖ್ಯತೆಯಿದೆ. ದೇಹಾರೋಗ್ಯ ಉತ್ತಮ ಪಡಿಸಿಕೊಳ್ಳಲು ಹಾಗೂ ಸರಳ ಜೀವನಕ್ಕೆ ಉಪವಾಸ ಪ್ರೋತ್ಸಾಹ ನೀಡುತ್ತದೆ.
ಮಾನವನ ಅಂತಃ ಶುದಿಟಛಿಗೂ ಉಪವಾಸ ವ್ರತಗಳು ಉತ್ತಮ ಮಾರ್ಗ ಎಂಬುದು ಹಿಂದೂ, ಮುಸ್ಲಿಮ ಸೇರಿದಂತೆ ಎಲ್ಲ ಧರ್ಮ ಗುರುಗಳ ಉಪದೇಶ. ಪಾಪ ನಿವಾರಣೆಗೂ ಇದು ಸುಲಭ ಮಾರ್ಗ. ಹೀಗಾಗಿ ರಂಜಾನ್ ಮಾಸದಲ್ಲಿ ಬಹುತೇಕ ಮುಸ್ಲಿಮರು ಬಡವ ಬಲ್ಲಿದ ಎನ್ನದೆ ಉಪವಾಸ ಆಚರಿಸುತ್ತಾರೆ. ತಿಂಗಳ ಕಾಲ ಶ್ರದಾಟಛಿ ಭಕ್ತಿಯ ಉಪವಾಸ ನಡೆಸಿದ ನಂತರ ಮುಸಲ್ಮಾನರು ರಂಜಾನ್ ಹಬ್ಬದಂದು ಉಪವಾಸ ಅಂತ್ಯಗೊಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ