ದೆಹಲಿಯ ತುಘಲಕ್ ಬಾದ್ ಕೊಳಗೇರಿಯಲ್ಲಿ ಭಾರೀ ಅಗ್ನಿ ದುರಂತ: 1,200 ಗುಡಿಸಲುಗಳಿಗೆ ಬೆಂಕಿ
Team Udayavani, May 26, 2020, 8:00 AM IST
ನವದೆಹಲಿ: ಇಲ್ಲಿನ ತುಘಲಕ್ ಬಾದ್ ಕೊಳಗೇರಿಯಲ್ಲಿ ಮಂಗಳವಾರ ಬೆಳಗ್ಗೆ 1 ಗಂಟೆ ಸುಮಾರಿಗೆ ಭಾರೀ ಪ್ರಮಾಣದ ಅಗ್ನಿ ಅನಾಹುತ ಸಂಭವಿಸಿದೆ.
ತುಘಲಕ್ ಬಾದ್ ಸ್ಲಂ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಸುಮಾರು 1 ಗಂಟೆಗೆ ಕರೆ ಬಂದವು. ಕೂಡಲೇ ಎಲ್ಲಾ ಪೊಲೀಸ್ ಸಿಬ್ಬಂದಿಗಳು, ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದರು. ಅದಾಗಲೇ 1000-1200 ಗುಡಿಸಲುಗಳಿಗೆ ಬೆಂಕಿ ಹೊತ್ತಿಕೊಂಡಿದ್ದವು ಎಂದು ಉಪಪೊಲೀಸ್ ಆಯುಕ್ತ ರಾಜೇಂದ್ರ ಪ್ರಸಾದ್ ಮೀನಾ ತಿಳೀಸಿದ್ದಾರೆ.
ಬೆಂಕಿ ದುರಂತ ಸಂಭವಿಸಿದ ತಕ್ಷಣ ಗುಡಿಸಲುಗಳಲ್ಲಿ ಮಲಗಿದ್ದವರು ಹೊರಕ್ಕೆ ಓಡಿ ಬಂದಿದ್ದಾರೆ. ಇಲ್ಲದಿದ್ದರೆ ಭಾರೀ ಅನಾಹುತ ಸಂಭವಿಸುವ ಸಾಧ್ಯತೆಗಳಿದ್ದವು. ಆದರೆ ಈ ಅವಘಡಕ್ಕೆ ಕಾರಣಗಳೇನು ಎಂಬುದು ತಿಳಿದುಬಂದಿಲ್ಲ.
ಸ್ಥಳದಲ್ಲಿ 30 ಅಗ್ನಿಶಾಮಕ ವಾಹನಗಳಿದ್ದು ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರೆಸಿವೆ. ಬೆಂಕಿಯಿಂದ ಯಾವುದೇ ಸಾವು-ನೋವಿನ ವರದಿಯಾಗಿಲ್ಲ. ಮಾತ್ರವಲ್ಲದೆ ಅವಘಡದಲ್ಲಿ ಹಾನಿಗೊಳಗಾದ ಆಸ್ತಿಯ ಮೌಲ್ಗಯವನ್ನು ಅಂದಾಜಿಸಲಾಗಿಲ್ಲಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು
Crime: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ
Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ
Temple; ಎಪ್ರಿಲ್ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?
Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್ ಅಲ್ಲ: ಹೈಕೋರ್ಟ್