ಬದಲಾಗದ ಜನರ ವರ್ತನೆ ಅಪಾಯವಿನ್ನೂ ದೂರವಾಗಿಲ್ಲ


Team Udayavani, May 26, 2020, 1:42 PM IST

ಬದಲಾಗದ ಜನರ ವರ್ತನೆ ಅಪಾಯವಿನ್ನೂ ದೂರವಾಗಿಲ್ಲ

ಲಾಕ್‌ಡೌನ್‌ ಸಡಿಲಿಕೆಯು ಭಾರತದಂಥ ಬೃಹತ್‌ ಜನಸಂಖ್ಯೆಯುಳ್ಳ ರಾಷ್ಟ್ರಕ್ಕೆ ಎಷ್ಟು ಅನಿವಾರ್ಯವೋ ಅಷ್ಟೇ ಅಪಾಯಕಾರಿಯೂ ಹೌದು ಎನ್ನುವುದೇ ದುರಂತ. ಆದರೆ, ಆರ್ಥಿಕತೆಯ ಯಂತ್ರ ಚಲನಶೀಲವಾಗಿರುವುದು ಅಗತ್ಯ ಎಂದಾಕ್ಷಣ ಜನರೆಲ್ಲ ರಸ್ತೆಗಿಳಿದು ಹೇಗೆ ಬೇಕಾದರೂ ವರ್ತಿಸಬಹುದು ಎಂದರ್ಥವಲ್ಲ.

ಭಾರತವೀಗ ಕೋವಿಡ್ ದಿಂದ ಅತಿಹೆಚ್ಚು ಪೀಡಿತವಾಗಿರುವ ಟಾಪ್‌ಟೆನ್‌ ರಾಷ್ಟ್ರಗಳಲ್ಲಿ ಒಂದಾಗಿದೆ. ಲಾಕ್‌ಡೌನ್‌ ನಿರ್ಬಂಧಗಳು ಸಡಿಲಿಕೆಯಾಗಿ, ಆರ್ಥಿಕ ಚಟುವಟಿಕೆಗಳು ಮತ್ತೆ ಹಳಿ ಏರುತ್ತಿರುವಂತೆಯೇ ನಿತ್ಯ ಪ್ರಕರಣಗಳ ಸಂಖ್ಯೆಯಲ್ಲೂ ವಿಪರೀತ ಏರಿಕೆ ಕಾಣುತ್ತಿದೆ. ಕಳೆದ ಶುಕ್ರವಾರದಿಂದ ದೇಶದಲ್ಲಿ ನಿತ್ಯ 6 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಸೋಂಕು ಪ್ರಸರಣ ಪ್ರಮಾಣ ಭಾರತದಲ್ಲಿ  ಕಡಿಮೆಯಾಗುತ್ತಲೇ ಇಲ್ಲ. ಆದರೆ, ಇದಿನ್ನೂ ಆರಂಭಿಕ ಹಂತವಷ್ಟೇ, ಜುಲೈ ತಿಂಗಳ ವೇಳೆಗೆ ಸೋಂಕಿತರ ಸಂಖ್ಯೆ ಮಿತಿ ಮೀರಲಿದೆ ಎಂಬ ವೈಜ್ಞಾನಿಕ ವಲಯದ ಎಚ್ಚರಿಕೆಯು ನಿಜಕ್ಕೂ ಆತಂಕಕಾರಿಯಾದದ್ದು.

ಆದಾಗ್ಯೂ, ಭಾರತವೆಂದಷ್ಟೇ ಅಲ್ಲ, ಲಾಕ್‌ಡೌನ್‌ ನಿರ್ಬಂಧಗಳಲ್ಲಿ ಸಡಿಲಿಕೆ ತಂದ ತಕ್ಷಣವೇ ಅನೇಕ ದೇಶಗಳಲ್ಲಿ ಸೋಂಕಿತರ ಪ್ರಕರಣಗಳು ಏರಿಕೆಯಾಗಿರುವುದನ್ನು-ಆಗುತ್ತಿರುವುದನ್ನು ನೋಡಬಹುದು. ಉದಾಹರಣೆಗೆ, ದಕ್ಷಿಣ ಕೊರಿಯಾದಲ್ಲಿ ಬಾರ್‌ ಹಾಗೂ ಕ್ಲಬ್‌ಗಳ ಮೇಲಿನ ನಿರ್ಬಂಧಗಳನ್ನು ತಗ್ಗಿಸುತ್ತಿದ್ದಂತೆಯೇ ಆ ದೇಶದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ. ಇನ್ನು ಚೀನದ ವುಹಾನ್‌ನಲ್ಲೂ ಲಾಕ್‌ಡೌನ್‌ ಸಡಿಲಿಕೆಯಾದ ಮೇಲೆ ಮತ್ತೆ ಸೋಂಕು ಕಾಣಿಸಿಕೊಂಡಿದೆ.

ಲಾಕ್‌ಡೌನ್‌ ಸಡಿಲಿಕೆಯು ಭಾರತದಂಥ ಬೃಹತ್‌ ಜನಸಂಖ್ಯೆಯುಳ್ಳ ರಾಷ್ಟ್ರಕ್ಕೆ ಎಷ್ಟು ಅನಿವಾರ್ಯವೋ ಅಷ್ಟೇ ಅಪಾಯಕಾರಿಯೂ ಹೌದು ಎನ್ನುವುದೇ ದುರಂತ. ಆದರೆ, ಆರ್ಥಿಕತೆಯ ಯಂತ್ರ ಚಲನಶೀಲವಾಗಿರುವುದು ಅಗತ್ಯ ಎಂದಾಕ್ಷಣ ಜನರೆಲ್ಲ ರಸ್ತೆಗಿಳಿದು ಹೇಗೆ ಬೇಕಾದರೂ ವರ್ತಿಸಬಹುದು ಎಂದರ್ಥವಲ್ಲ. ಮನುಷ್ಯನ ಮನಸ್ಸು ಹೇಗಿರುತ್ತದೆ ಎಂದರೆ, ಎಲ್ಲರೂ ಏನು ಮಾಡುತ್ತಾರೋ ಅದೇ ಸರಿಯಾದ ಮಾರ್ಗ ಎಂದೇ ಭಾವಿಸುತ್ತದೆ. ರಸ್ತೆಗಳು ಖಾಲಿ ಇದ್ದಾಗ, ಹೊರಗೆ ಅಡಿಯಿಡಲು ಹೆದರುವ ವ್ಯಕ್ತಿ, ರಸ್ತೆಗಳು ತುಂಬಿದಾಗ, ತಾನೂ ಅದರಲ್ಲಿ ನಿರ್ಭಯವಾಗಿ ತೂರಿಕೊಳ್ಳುತ್ತಾನೆ. ಕೊರೊನಾಕ್ಕೆ ಲಸಿಕೆ ಸಿಗುತ್ತದೋ ಇಲ್ಲವೋ ಎನ್ನುವುದೇ ಅನುಮಾನವಾಗಿರುವಾಗ, ಎಲ್ಲವೂ ಸರಿಹೋಯಿತು ಎಂಬಂತೆ ಜನರು ವರ್ತಿಸುತ್ತಿರುವುದು ಸರಿಯಲ್ಲ. ಕೊರೊನಾದ ಜತೆಗೇ ಬದುಕಬಹುದಾದ ಅನಿವಾರ್ಯತೆ ನಮಗೆ ಎದುರಾಗಬಹುದು ಎಂದರೆ, ಕೊರೊನಾದ ಅಪಾಯ ಕಡಿಮೆ ಇರುತ್ತದೆ ಎಂದರ್ಥವಲ್ಲ. ಸುರಕ್ಷತಾ ಕ್ರಮಗಳನ್ನು ಪಾಲಿಸುತ್ತಲೇ ಬದುಕಬೇಕಾದ, ಹೊಸ ಜೀವನಶೈಲಿಯನ್ನು ಚಾಚೂ ತಪ್ಪಿಸದೇ ಅನುಸರಿಸಬೇಕಾದ ಅಗತ್ಯವಿರುತ್ತದೆ ಎಂದರ್ಥ. ನೆನಪಿರಲಿ, ಅಪಾಯ ಇನ್ನೂ ದೂರವಾಗಿಯೇ ಇಲ್ಲ.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.