ಒತ್ತಡದಲ್ಲಿವೆ ಚಿಲಿ ಆಸ್ಪತ್ರೆಗಳು : 70 ಸಾವಿರ ಮಂದಿ ಸೋಂಕು ಪೀಡಿತರು
Team Udayavani, May 26, 2020, 5:19 PM IST
ಸ್ಯಾಂಟಿಯಾಗೋ: ಕೋವಿಡ್ ಸೋಂಕು ಚಿಲಿಯ ಆರೋಗ್ಯ ವ್ಯವಸ್ಥೆಯನ್ನು ತೀವ್ರ ಒತ್ತಡಕ್ಕೆ ತಳ್ಳಿದೆ. ಗರಿಷ್ಠ ಮಿತಿಗೆ ತೀರ ಸಮೀಪದಲ್ಲಿದೆ ಎಂದು ಅಲ್ಲಿನ ಅಧ್ಯಕ್ಷ ಸೆಬಾಸ್ಟಿಯನ್ ಪಿನೆರಾ ಅವರೇ ಹೇಳಿಕೊಂಡಿದ್ದಾರೆ.
ಚಿಲಿಯಲ್ಲಿ ಈವರೆಗೆ ಸುಮಾರು 70 ಸಾವಿರ ಮಂದಿ ಸೋಂಕು ಪೀಡಿತರಾಗಿದ್ದು, 700 ಜನರು ಪ್ರಾಣತ್ಯಾಗ ಮಾಡಿದ್ದಾರೆ. ಚಿಲಿಯ ರಾಜಧಾನಿ ಸ್ಯಾಂಟಿಯಾಗೋ ಇನ್ನೂ ಕಠಿನ ಲಾಕ್ಡೌನ್ ನಿಯಮ ಅನುಸರಿಸುತ್ತಿದ್ದು, ಸೋಂಕಿನ ಕೇಂದ್ರ ಸ್ಥಾನವಾಗಿಯೂ ಗುರುತಿಸಿಕೊಂಡಿದೆ.
ಇತ್ತೀಚೆಗೆ ಅಲ್ಲಿ ಆಹಾರದ ಕೊರತೆ ಉಂಟಾಗಿ ಪೊಲೀಸರು ಹಾಗೂ ಪ್ರತಿಭಟನಕಾರರ ನಡುವೆ ಸಂಘರ್ಷವೂ ಏರ್ಪಟ್ಟಿತ್ತು.
ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ರವಿವಾರ ಬಯಲು ಆಸ್ಪತ್ರೆಯನ್ನು ಉದ್ಘಾಟಿಸಿದ ಅವರು, ಐಸಿಯುಗಳು, ಹಾಸಿಗೆಗಳು ಹಾಗೂ ವೆಂಟಿಲೇಟರ್ಗಳಿಗೂ ಬೇಡಿಕೆ ತೀವ್ರವಾಗಿದೆ ಎಂದು ತಿಳಿಸಿದ್ದಾರೆ. ಈ ವಾರಾಂತ್ಯ, ಚಿಲಿಯಲ್ಲಿ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಜನರಿಗಾಗಿ ಆರ್ಥಿಕ ಪ್ಯಾಕೇಜ್ ಘೋಷಿಸುವ ನಿರೀಕ್ಷೆಯೂ ಇದೆ. ಸುಮಾರು 18 ಲಕ್ಷ ಜನರಿಗೆ ಇದರಿಂದ ನೆರವು ಸಿಗಲಿದೆ. ಇನ್ನೂ 30 ಲಕ್ಷ ಜನರಿಗೆ ಜೂ. 10ರಂದು ಆರ್ಥಿಕ ಪ್ಯಾಕೇಜ್ ನೀಡುವುದಾಗಿ ಅಧ್ಯಕ್ಷರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ
RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ
Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು
Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ
Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ
RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ
Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು
Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ
Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು