ಶಿವಮೊಗ್ಗ: ಕೆಎಸ್ಆರ್ಟಿಸಿ ಬಸ್ ಸೇವೆ ಪುನರಾರಂಭ
Team Udayavani, May 27, 2020, 10:21 AM IST
ಶಿವಮೊಗ್ಗ: ರಾಜ್ಯ ರಸ್ತೆ ಸಾರಿಗೆ ನಿಗಮ ಮೇ 19ರಿಂದ ಬಸ್ ಸೇವೆ ಪುನರಾರಂಭಿಸಿದ್ದು, ಜನದಟ್ಟಣೆಗೆ ಅನುಗುಣವಾಗಿ ಕಾರ್ಯಾಚರಣೆ ಮಾಡಲು ಉದ್ದೇಶಿಸಿದೆ. ಪ್ರಯಾಣಿಕರ ಹಿತದೃಷ್ಟಿಯಿಂದ ಬಸ್ ಪ್ರಯಾಣದ ದರಗಳಲ್ಲಿ ಯಾವುದೇ ಹೆಚ್ಚಳವಿರುವುದಿಲ್ಲ. ಬೆಳಗ್ಗೆ 7 ರಿಂದ ಬಸ್ ಸೇವೆ ಆರಂಭಿಸಿ ಸಂಜೆ 7ರೊಳಗೆ ನಿಗದಿತ ಸ್ಥಳ ತಲುಪುವಂತೆ ಸಮಯವನ್ನು
ನಿಯೋಜಿಸಲಾಗಿದೆ. ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣದ ಅವಧಿ 7 ಗಂಟೆ ಆಗಿದ್ದು, ಬೆ. 7 ರಿಂದ 12ರವರೆಗೆ ನಿರ್ಗಮಿಸುತ್ತವೆ. ಮೈಸೂರಿಗೆ ಪ್ರಯಾಣದ ಅವಧಿ 6 ಗಂಟೆ ಆಗಿದ್ದು, ಬೆಳಗ್ಗೆ 7 ರಿಂದ ಮ. 1 ರವರೆಗೆ ನಿರ್ಗಮಿಸುತ್ತವೆ. ಅರಸೀಕರೆ, ಚಿಕ್ಕಮಗಳೂರು, ಚಿತ್ರದುರ್ಗ, ಶಿಕಾರಿಪುರ ಮತ್ತು ಸೊರಬ ಕಡೆಗೆ 2.15 ಗಂಟೆ ಪ್ರಯಾಣದ ಅವಧಿಯಾಗಿದ್ದು, ಸಂಜೆ 4.30ರವರೆಗೆ ನಿರ್ಗಮಿಸುತ್ತವೆ. ಹರಿಹರ, ಸಾಗರ, ತೀರ್ಥಹಳ್ಳಿ ಮತ್ತು ಹೊಸನಗರಗಳಿಗೆ ಪ್ರಯಾಣದ ಅವಧಿ 1.30 ಗಂಟೆ
ಆಗಿದ್ದು, ಸಂಜೆ 5.30ರ ವರೆಗೆ ನಿರ್ಗಮಿಸುತ್ತವೆ.
ಹುಬ್ಬಳ್ಳಿಗೆ ಪ್ರಯಾಣದ ಅವಧಿ 4.30 ಗಂಟೆ ಆಗಿದ್ದು, ಸಂಜೆ 2.30ರವರೆಗೆ ನಿರ್ಗಮಿಸುತ್ತವೆ. ಕಂಟೇನ್ಮೆಂಟ್ ಝೋನ್ಗಳಿಗೆ ಯಾವುದೇ ಬಸ್ಗಳಿರುವುದಿಲ್ಲ. ಮುಖಕ್ಕೆ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ. ಒಂದು ಬಸ್ನಲ್ಲಿ ಗರಿಷ್ಠ 30 ಜನ ಪ್ರಯಾಣಕರಿಗೆ ಮಾತ್ರ ಅವಕಾಶ. ಬಸ್ ನಿಲ್ದಾಣದಲ್ಲಿ ಕಡ್ಡಾಯವಾಗಿ ಪ್ರಯಾಣಿಕರು ಥರ್ಮಲ್
ಸ್ಕ್ರೀನಿಂಗ್ಗೆ ಒಳಪಡಬೇಕು. ವೆಬ್ಸೈಟ್ ಮುಖಾಂತರ ಮುಂಗಡ ಆಸನಗಳನ್ನು ಕಾಯ್ದಿರಿಸಬಹುದಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?