ವಿದ್ಯಾರ್ಥಿಗಳ ಬೇಡಿಕೆ ಈಡೇರಿಕೆಗೆ ಆಗ್ರಹ
ಶುಲ್ಕ ರಹಿತ ಶಿಕ್ಷಣ ನೀಡಿ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಿ
Team Udayavani, May 27, 2020, 11:36 AM IST
ಕಲಬುರಗಿ: ಡಿಸಿ ಕಚೇರಿ ಎದುರು ಎಐಡಿಎಸ್ಒ ಸಂಘಟನೆಯಿಂದ ಸರ್ಕಾರಿ ಹಾಗೂ ಖಾಸಗಿ ಶಾಲೆ-ಕಾಲೇಜು, ವಿವಿಗಳ ಶೈಕ್ಷಣಿಕ ಶುಲ್ಕ ಪರೀಕ್ಷಾ ಶುಲ್ಕ ಮನ್ನಾ ಮಾಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಹಣಮಂತ ಎಸ್.ಎಚ್., ಈರಣ್ಣಾ ಈಸಬಾ ಹಾಗೂ ಇತರರಿದ್ದರು.
ಶಹಾಬಾದ: ವಿದ್ಯಾರ್ಥಿಗಳ ವಿವಿಧ ಬೇಡಿಕೆ ಈಡೇರಿಸಬೇಕೆಂದು ಆಗ್ರಹಿಸಿ ಮಂಗಳವಾರ ಎಐಡಿಎಸ್ಒ ಸಮಿತಿಯಿಂದ ಮೇ 26 ಅಖೀಲ ಕರ್ನಾಟಕ ಆಗ್ರಹ ದಿನದ ಅಂಗವಾಗಿ ಉಪ ತಹಶೀಲ್ದಾರ್ಗೆ ಮನವಿ ಸಲ್ಲಿಸಲಾಯಿತು.
ಕೋವಿಡ್ ಸಂಕಷ್ಟದ ಸಮಯದಲ್ಲಿ ಬಡ-ಮಧ್ಯಮ ವರ್ಗದ ವಿದ್ಯಾರ್ಥಿಗಳ ಶಾಲೆ- ಕಾಲೇಜುಗಳ ಶುಲ್ಕ, ಸಾರಿಗೆ ವ್ಯವಸ್ಥೆ, ಹಾಸ್ಟೆಲ್ಗಳ ಮೂಲ ಸೌಕರ್ಯಗಳಿಗೆ ಸಂಬಂಧಿಸಿದಂತೆ ಅನೇಕ ಶೈಕ್ಷಣಿಕ ಸಮಸ್ಯೆಗಳು ಎದುರಾಗುತ್ತಿವೆ. ಆದ್ದರಿಂದ ಎಲ್ಲ ಸರ್ಕಾರಿ ಹಾಗೂ ಅನುದಾನಿತ ಶಾಲಾ-ಕಾಲೇಜುಗಳ ಶುಲ್ಕವನ್ನು ಸರ್ಕಾರವೇ ಭರಿಸಬೇಕು ಎಂದು ಮನವಿಯಲ್ಲಿ ಕೋರಲಾಗಿದೆ. ಎಐಡಿಎಸ್ಒ ಅಧ್ಯಕ್ಷ ತುಳಜರಾಮ ಎನ್.ಕೆ, ಉಪಾಧ್ಯಕ್ಷ ರಮೇಶ ದೇವಕರ್, ಕಾರ್ಯದರ್ಶಿ ರಘು ಜಿ.ಮಾನೆ, ಸಹ ಕಾರ್ಯದರ್ಶಿ ತೆಜಸ್ ಆರ್.ಐ, ಕಿರಣ ಜಿ.ಮಾನೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ