11 ಪಾಸಿಟಿವ್‌ -ಹೆಡ್‌ ಕಾನ್ಸ್‌ ಟೇಬಲ್‌ ಸೇರಿ 15 ಮಂದಿ ಡಿಸ್ಚಾರ್ಜ್‌


Team Udayavani, May 27, 2020, 10:36 AM IST

27-May-05

ದಾವಣಗೆರೆ: ಕೋವಿಡ್ ಸೋಂಕಿನಿಂದ ಗುಣಮುಖರಾದ ಹೆಡ್‌ ಕಾನ್ಸ್‌ಟೇಬಲ್‌ರನ್ನು ಐಜಿಪಿ ಎಸ್‌. ರವಿ ಅಭಿನಂದಿಸಿದ ಸಂದರ್ಭ

ದಾವಣಗೆರೆ: ಕೆಲವು ದಿನಗಳಿಂದ ಕೋವಿಡ್ ವೈರಸ್‌ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ ಕಾಣುತ್ತಿದ್ದ ದಾವಣಗೆರೆ ಜಿಲ್ಲೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಮಂಗಳವಾರ ಹೊಸದಾಗಿ 11 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ಆರೋಗ್ಯ ಇಲಾಖೆ ಬೆಳಿಗ್ಗೆ ಬಿಡುಗಡೆ ಮಾಡಿದ ಬುಲೆಟಿನ್‌ನಲ್ಲಿ ಜಿಲ್ಲೆಯಲ್ಲಿ 11 ಮಂದಿಗೆ ಸೋಂಕು ದೃಢಪಟ್ಟಿದ್ದರಿಂದ ಮತ್ತೆ ಒಂದಿಷ್ಟು ಆತಂಕಕ್ಕೊಳಗಾಗಿದ್ದ ನಗರದ ನಾಗರಿಕರಿಗೆ ಸಂಜೆ 15 ಮಂದಿ ಕೋವಿಡ್ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು ನೆಮ್ಮದಿ ತಂದಿದೆ. ಪಿ-2218(47 ವರ್ಷದ ಮಹಿಳೆ), ಪಿ-2257(28 ವರ್ಷದ ಮಹಿಳೆ), ಪಿ-2274 (55 ವರ್ಷದ ಮಹಿಳೆ), ಪಿ-2275 (38 ವರ್ಷದ ಪುರುಷ), ಪಿ-2276 (9 ವರ್ಷದ ಬಾಲಕ), ಪಿ-2277 (36 ವರ್ಷದ ಮಹಿಳೆ), ಪಿ-2278 (14 ವರ್ಷದ ಬಾಲಕ), ಪಿ-2279 (63 ವರ್ಷದ ಮಹಿಳೆ), ಪಿ-2280 (39 ವರ್ಷದ ಪುರುಷ), ಪಿ-2281 (9 ವರ್ಷದ ಬಾಲಕ) ಹಾಗೂ ಪಿ-2282 (26 ವರ್ಷದ ಮಹಿಳೆ)ಇವರಿಗೆ ಸೋಂಕು ವ್ಯಾಪಿಸಿದೆ.

ಇವರಲ್ಲಿ ಒಬ್ಬರಿಗೆ ಗುಜರಾತ್‌ನಿಂದ ಹಿಂತಿರುಗಿದ ಪ್ರಯಾಣದ ಹಿನ್ನೆಲೆ ಹೊಂದಿದ್ದರೆ, ನಾಲ್ವರಿಗೆ ಪಿ-1378ರ ಸಂಪರ್ಕದಿಂದ ಸೋಂಕು ತಗುಲಿದೆ. ಮತ್ತಿಬ್ಬರಿಗೆ ಪಿ-993ರ ಸಂಪರ್ಕ, ಓರ್ವ ಮಹಿಳೆಗೆ ಪಿ-933 ಹಾಗೂ 63 ವರ್ಷದ ಮಹಿಳೆಗೆ ಪಿ-627ರ ಸಂಪರ್ಕದಿಂದ ಸೋಂಕು ಹರಡಿದೆ. ಇವರೆಲ್ಲಾ ಈಗಾಗಲೇ ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಸೋಂಕು ಪತ್ತೆ ಸಂಬಂಧ ಪರೀಕ್ಷೆಗೆ ಕಂಟೇನ್ಮೆಂಟ್‌ ಝೋನ್‌ ಗಳಲ್ಲಿ ಆರೋಗ್ಯ ಇಲಾಖೆ ತಂಡಗಳು ಸಮೀಕ್ಷೆ ನಡೆಸಿ ನಿನ್ನೆ ಒಟ್ಟು 248 ಮಂದಿ ಸ್ವಾಬ್‌ ಸಂಗ್ರಹಿಸಿದ್ದು, ಸೋಂಕು ಪತ್ತೆಗೆ ಇದುವರೆಗೂ 7212 ಮಂದಿ ಸ್ವಾಬ್‌ ಸಂಗ್ರಹಿಸಿದಂತಾಗಿದೆ. ಈ ಮಧ್ಯೆ ಲ್ಯಾಬ್‌ ನಿಂದ 610 ಮಂದಿಯ ಪರೀಕ್ಷಾ ವರದಿ ನೆಗೆಟಿವ್‌ ಬಂದಿದ್ದು. ಈ ತನಕ 5897 ಮಂದಿಯ ನೆಗೆಟಿವ್‌ ರಿಪೋರ್ಟ್‌ ಬಂದಿದೆ. 136 ಮಂದಿ ಕೊರೊನಾ ಸೋಂಕಿತರಲ್ಲಿ ಈಗ ಒಟ್ಟು 65 ಮಂದಿ ಡಿಸಾcರ್ಜ್‌ ಆಗಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಸದ್ಯ ಸಕ್ರಿಯ ಕೋವಿಡ್‌ ಬಾಧಿತರ ಸಂಖ್ಯೆ 67ಕ್ಕೆ ಇಳಿದಿದೆ.

15 ಮಂದಿ ಡಿಸಾcರ್ಜ್‌: ಕೊರೊನಾ ಸೋಂಕಿನಿಂದ ಗುಣಮುಖರಾದ ಸಂಚಾರಿ ಠಾಣೆಯ ಹೆಡ್‌ ಕಾನ್ಸ್‌ಟೇಬಲ್‌ ಸೇರಿ 15 ಜನರನ್ನು ಸಂಜೆ ಡಿಸಾcರ್ಜ್‌ ಮಾಡಲಾಯಿತು. ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸಂಜೆ ಪೂರ್ವ ವಲಯ ಪೊಲೀಸ್‌ ಮಹಾನಿರೀಕ್ಷಕ ಎಸ್‌. ರವಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ, ಎಎಸ್‌ಪಿ ರಾಜೀವ್‌, ಅಪರ ಜಿಲ್ಲಾಧಿಕಾರಿ ಪೂಜಾರ್‌ ವೀರಬಸಪ್ಪ, ವೈದ್ಯರು, ವೈದ್ಯಕೀಯ ಸಿಬ್ಬಂದಿ ಪುಷ್ಪವೃಷ್ಟಿಗೈದು, ಚಪ್ಪಾಳೆ ತಟ್ಟುವ ಮೂಲಕ ಗುಣಮುಖರಾದವರನ್ನು ಬೀಳ್ಕೊಟ್ಟರು.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.