ಬೀದರ್ ನಲ್ಲಿ ಕೋವಿಡ್ ಸೋಂಕಿಗೆ 3ನೇ ಬಲಿ ; ಶತಕ ಬಾರಿದ ಸೋಂಕಿತರ ಸಂಖ್ಯೆ
ಒಂದೇ ದಿನ 13 ಪ್ರಕರಣ ಪತ್ತೆ ; ಜಿಲ್ಲೆಗೆ ಕಂಟವಾಗ್ತಿದೆ ಮಹಾ ನಂಟು
Team Udayavani, May 27, 2020, 6:12 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೀದರ್ : ಗಡಿ ಜಿಲ್ಲೆ ಬೀದರ್ ನಲ್ಲಿ ತಲ್ಲಣ ಮೂಡಿಸುತ್ತಿರುವ ರಕ್ಕಸ ಕೋವಿಡ್ ಸೋಂಕಿಗೆ ಮೂರನೇ ಬಲಿ ಆಗಿದೆ.
ಇನ್ನೊಂದೆಡೆ ಮಹಾರಾಷ್ಟ್ರ ಕಂಟಕದಿಂದಾಗಿ ಕೋವಿಡ್ ಸೋಂಕಿತರ ಸಂಖ್ಯೆಯೂ ನೂರರ ಗಡಿ ದಾಟಿದೆ.
ಬುಧವಾರ ಅತಿ ಹೆಚ್ಚು 13 ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಪಾಸಿಟಿವ್ ಸಂಖ್ಯೆ 107ಕ್ಕೆ ಏರಿಕೆಯಾಗಿದೆ.
ತೀವ್ರ ಉಸಿರಾಟದ ತೊಂದರೆಯಿಂದ ಕಳೆದ ಮೇ 19ರಂದು ಬ್ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಬೀದರನ ವಿದ್ಯಾನಗರ ಬಡಾವಣೆಯ 49 ವರ್ಷದ ವ್ಯಕ್ತಿ ಬುಧವಾರ ಮೃತಪಟ್ಟಿದ್ದಾರೆ. ಪಿ- 1712 ಸಂಖ್ಯೆಯ ಈ ರೋಗಿ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರು. ಬೀದರನ ಓಲ್ಡ್ ಸಿಟಿಯ 82 ವರ್ಷದ (ಪಿ-590) ಮತ್ತು ಚಿಟಗುಪ್ಪಾದ 50 ವರ್ಷದ (ಪಿ-1041) ರೋಗಿಗಳು ಈ ಹಿಂದೆ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಈಗ ಮೂರನೇ ಸಾವು ಸಂಭವಿಸಿದಂತಾಗಿದೆ.
ಇನ್ನೂ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ತಬ್ಲೀಘಿ ಬಳಿಕ ಈಗ ಮಹಾರಾಷ್ಟ್ರ ಕಂಟಕ ಬೀದರಗೆ ಬೆಂಬಿಡದೇ ಕಾಡುತ್ತಿದೆ. ಮಹಾ ನಂಟಿನಿಂದಾಗಿ ಗ್ರಾಮೀಣ ಭಾಗದಲ್ಲಿ ದಿನಕ್ಕೊಂದು ಊರುಗಳಿಗೆ ವೈರಾಣು ವ್ಯಾಪಿಸುತ್ತಿರುವುದು ರೋಗ ನಿಯಂತ್ರಣಕ್ಕೆ ಹೋರಾಡುತ್ತಿರುವ ಜಿಲ್ಲಾಡಳಿತಕ್ಕೆ ತಲೆ ನೋವು ಆಗಿದ್ದರೆ, ಜನರಲ್ಲಿ ಆತಂಕ ಹೆಚ್ಚುವಂತೆ ಮಾಡಿದೆ.
ಜಿಲ್ಲೆಯಲ್ಲಿ ಹೊಸದಾಗಿ ಪತ್ತೆಯಾಗಿರುವ 13 ಜನ ಸೋಂಕಿತರಲ್ಲಿ ಇಬ್ಬರು ಗರ್ಭೀಣಿ ಮಹಿಳೆಯರು, ಒಬ್ಬ ಬಾಲಕ ಸೇರಿದ್ದಾನೆ. ಹುಮನಾಬಾದ ಪಟ್ಟಣದ ಒಂದು, ಇನ್ನುಳಿದ 12 ಸೋಂಕಿತರು ಬಸವಕಲ್ಯಾಣ ತಾಲೂಕಿನ ಕೋಹಿನೂರ್, ಶಿರೂರ ಮತ್ತು ಗದ್ಲೇಗಾಂವ್ (ಕೆ) ಗ್ರಾಮದವರಾಗಿದ್ದಾರೆ. ಎಲ್ಲರೂ ಮಹಾರಾಷ್ಟ್ರದ ಸಂಪರ್ಕ ಹೊಂದಿದ್ದಾರೆ. ಕೋಹಿನೂರ್ ಗ್ರಾಮದಲ್ಲಿ ಮಂಗಳವಾರ ಒಂದೇ ದಿನ 10 ಪ್ರಕರಣಗಳು ವರದಿಯಾಗಿದ್ದವು. ಹೊಸ ಸೋಂಕಿತರ ಗ್ರಾಮಗಳನ್ನು ಸಿಲ್ಡೌನ್ ಮಾಡಲಾಗಿದೆ.
31 ವರ್ಷದ ಪಿ- 2309, 25 ವರ್ಷದ ಪಿ- 2310, 12 ವರ್ಷದ ಪಿ- 2311, 31 ವರ್ಷದ ಪಿ- 2312, 28 ವರ್ಷದ ಪಿ-2313, 35 ವರ್ಷದ ಪಿ-2314, 43 ವರ್ಷದ ಪಿ-2315, 34 ವರ್ಷದ ಪಿ-2316, 28 ವರ್ಷದ ಪಿ-2317, 25 ವರ್ಷದ ಪಿ-2318, 21 ವರ್ಷದ ಪಿ- 2319, 20 ವರ್ಷದ ಪಿ- 2320 ಮತ್ತು 68 ವರ್ಷದ ಪಿ-2406 ರೋಗಿಯಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ.
ಇನ್ನೂ ಬ್ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತ 3 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ 108 ಪಾಸಿಟಿವ್ ಪ್ರಕರಣಗಳು ವರದಿಯಾದಂತಾಗಿದೆ. ಅದರಲ್ಲಿ ಮೂವರು ಮೃತಪಟ್ಟಿದ್ದರೆ, 24 ಮಂದಿ ಡಿಸ್ಚಾರ್ಜ್ ಆಗಿದ್ದು, 81 ಸಕ್ರಿಯ ಪ್ರಕರಣಗಳು ಇವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ
Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್ ರೇವಣ್ಣನಂಥವರಾ?; ಜಿಗ್ನೇಶ್
Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
MUST WATCH
ಹೊಸ ಸೇರ್ಪಡೆ
Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ
Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ
AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು
H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ