ವೈದ್ಯರಿಗೆ ಹೋಟೆಲ್ ಕ್ವಾರಂಟೈನ್ ಮಾಡಿ
Team Udayavani, May 28, 2020, 7:11 AM IST
ಹಾಸನ: ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಮತ್ತು ದಾದಿಯರು ಕರ್ತವ್ಯ ಮುಗಿಸಿದ ನಂತರ ಮನೆಗಳಿಗೆ ತೆರಳುವ ಮೊದಲು ಹೋಟೆಲ್ನಲ್ಲಿ ಕ್ವಾರಂಟೈನ್ ವ್ಯವಸ್ಥೆ ಮಾಡಬೇಕು ಎಂದು ಹಿಮ್ಸ್ ನಿರ್ದೇಶಕ ಡಾ.ಬಿ.ಸಿ.ರವಿಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಆರ್.ಕೃಷ್ಣಮೂರ್ತಿ ಅವರು ಮನವಿ ಮಾಡಿದರು. ಜಿಪಂ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.
ಮೊದಲು ವೈದ್ಯ ಸಿಬ್ಬಂದಿಗೆ ಹೋಟೆಲ್ ಕ್ವಾರಂಟೈನ್ ವ್ಯವಸ್ಥೆ ಇತ್ತು. ಆದರೆ ಈಗ ಕರ್ತವ್ಯ ಮುಗಿಸಿದ ನಂತರ ಹೋಂ ಕ್ವಾರಂ ಟೈನ್ ಸಾಕು ಎಂದು ಸರ್ಕಾರ ಆದೇಶಿಸಿದೆ. ಇದರಿಂದ ವೈದ್ಯ ಸಿಬ್ಬಂದಿ ಕುಟುಂಬಗಳಲ್ಲಿ ಆತಂಕ ಮೂಡಿದೆ ಎಂದರು. ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಮಾಧು ಸ್ವಾಮಿ ಅವರು, ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗು ವುದು ಎಂದರು.
ಜೆಡಿಎಸ್ ಶಾಸಕರ ಗೈರು: ಜಿಪಂ ಸಭಾಂ ಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಗೆ ಜೆಡಿಎಸ್ನ ಎಲ್ಲ ಆರು ಮಂದಿ ಶಾಸಕರು ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಗೈರಾಗಿದ್ದರು. ಬಿಜೆಪಿ ಶಾಸಕ ಪ್ರೀತಂ ಜೆ.ಗೌಡ ಅವರು ಮಾತ್ರ ಸಭೆಯಲ್ಲಿ ಹಾಜರಿದ್ದರು. ಎಚ್.ಡಿ.ರೇವಣ್ಣ ಅವರು ಹಾಸನದ ಪ್ರವಾಸಿ ಮಂದಿರದಲ್ಲಿದ್ದು ಸುದ್ದಿಗೋಷ್ಠಿ ನಡೆಸಿದರೂ ಸಚಿವರು ಪಾಲ್ಗೊಂಡಿದ್ದ ಅಧಿಕಾರಿಗಳ ಸಭೆಗೆ ಹೋಗಲಿಲ್ಲ. ಶಾಸಕ ಪ್ರೀತಂ ಜೆ.ಗೌಡ, ಜಿಲ್ಲಾಧಿಕಾರಿ ಆರ್.ಗಿರೀಶ್, ಎಸ್ಪಿ ಆರ್. ಶ್ರೀನಿವಾಸ್ ಗೌಡ, ಜಿಪಂ ಸಿಇಒ ಬಿ.ಎ ಪರಮೇಶ್, ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಉಪ ವಿಭಾಗಾಧಿಕಾರಿ ಡಾ.ನವೀನ್ಭಟ್, ಡಿಎಚ್ಒ ಡಾ.ಸತೀಶ್ಕುಮಾರ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ