ಕೋವಿಡ್ ಟೆಸ್ಟ್‌ ಕಡ್ಡಾಯ ಅಲ್ಲ ; ಆರೋಗ್ಯ ಸೇವೆಗಳಿಗೆ ಕೇಂದ್ರದಿಂದ ಹೊಸ ಮಾರ್ಗಸೂಚಿ ಬಿಡುಗಡೆ


Team Udayavani, May 28, 2020, 7:17 AM IST

ಕೋವಿಡ್ ಟೆಸ್ಟ್‌ ಕಡ್ಡಾಯ ಅಲ್ಲ ; ಆರೋಗ್ಯ ಸೇವೆಗಳಿಗೆ ಕೇಂದ್ರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಕೋವಿಡ್ ಕಂಟೈನ್‌ಮೆಂಟ್‌ ಪ್ರದೇಶಗಳಲ್ಲಿ ಹೆರಿಗೆ, ನವಜಾತ ಶಿಶು ಮತ್ತು ಮಕ್ಕಳ ಆರೋಗ್ಯಕ್ಕೆ ಸಂಬಂಧಿಸಿದ ಆರೋಗ್ಯ ಸೇವೆಗಳು ಸೇರಿದಂತೆ ಅತ್ಯವಶ್ಯಕ ಸೇವೆಗಳನ್ನು ನೀಡುವುದನ್ನು ಮುಂದುವರಿಸಬೇಕು.

ಇಂಥ ಸೇವೆ ಒದಗಿಸುವ ಮುನ್ನ ಕೋವಿಡ್ ಪರೀಕ್ಷೆ ನಡೆಸುವುದು ಕಡ್ಡಾಯವಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಸ್ಪಷ್ಟಪಡಿಸಿದೆ.

ಜತೆಗೆ, ತಾಯಿ ಮತ್ತು ಮಗುವನ್ನು ಒಂದೇ ಕಡೆ ಇರಿಸಿ ಆರೈಕೆ ಮಾಡಬೇಕು ಹಾಗೂ ಕೋವಿಡ್ ಸೋಂಕು ಇದ್ದರೂ , ಇಲ್ಲದಿದ್ದರೂ, ಹೆರಿಗೆಯಾದ ಒಂದು ಗಂಟೆಯೊಳಗೆ ಸ್ತನ್ಯ ಪಾನಕ್ಕೆ ಅವಕಾಶ ಕಲ್ಪಿಸಬೇಕು. ಆದರೆ, ಮಗುವಿಗೆ ಹಾಲುಣಿಸುವಾಗ ತಾಯಿಯು ಮುಖಕ್ಕೆ ಮಾಸ್ಕ್ ಧರಿಸಿಕೊಂಡು, ಕೈಗಳನ್ನು ಸ್ವಚ್ಛವಾಗಿಟ್ಟುಕೊಂಡಿರಬೇಕು ಎಂದೂ ಸೂಚಿಸಿದೆ.

ಈ ಕುರಿತು ಬುಧವಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿರುವ ಸಚಿವಾಲಯ, ಯಾವುದೇ ಕಾರಣಕ್ಕೂ ಅತ್ಯಗತ್ಯ ವೈದ್ಯಕೀಯ ಸೇವೆಗಳನ್ನು ನಿರಾಕರಿಸುವಂತಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ.

ನಮ್ಮ ದೇಶದಲ್ಲಿ ಪ್ರತಿ ವರ್ಷ 2.5 ಕೋಟಿಗೂ ಹೆಚ್ಚು ಗರ್ಭಧಾರಣೆ ಆಗುವ ಕಾರಣ, ಈ ಅವಧಿಯಲ್ಲಿ ವೈದ್ಯಕೀಯ ಸೇವೆ ಲಭ್ಯವಿರುವಂತೆ ನೋಡಿಕೊಳ್ಳುವುದು ಮುಖ್ಯವಾಗುತ್ತದೆ. ಸೇವೆಯನ್ನು ನಿರಾಕರಿಸುವುದರಿಂದ ಹೆರಿಗೆ ಸಮಯದಲ್ಲಿ ಮರಣ ಸಂಭವಿಸಿವುದು ಮತ್ತು ಶಿಶುಗಳ ಮರಣ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿರುತ್ತದೆ ಎಂದು ಸಚಿವಾಲಯ ಹೇಳಿದೆ.

ಜತೆಗೆ, ಲಾಭದ ಉದ್ದೇಶವಿಲ್ಲದ ಆಸ್ಪತ್ರೆಗಳು ಅಥವಾ ಖಾಸಗಿ ಆಸ್ಪತ್ರೆಗಳು ಕೋವಿಡೇತರ ಅಗತ್ಯ ಸೇವೆಗಳನ್ನು ಕಲ್ಪಿಸುವಂತೆ ನೋಡಿಕೊಳ್ಳಬೇಕು. ಆದರೆ, ಯಾವುದೇ ಸೇವೆ ನೀಡುವಾಗ ಸೇವೆ ನೀಡುವವರು ಮತ್ತು ಪಡೆಯುವವರು ಸೂಕ್ತ ಶುಚಿತ್ವ, ಶಾರೀರಿಕ ಅಂತರ ಕಾಪಾಡಿಕೊಳ್ಳಬೇಕು. ರೋಗಿಗಳ ಸಂಖ್ಯೆ ಅಧಿಕವಿದ್ದರೆ, ಹೆಚ್ಚುವರಿ ಕ್ಲಿನಿಕ್‌ ಗಳಲ್ಲಿ ಸೇವೆ ಕಲ್ಪಿಸಬೇಕು. ಚಿಕಿತ್ಸೆ ನೀಡುವ ಸ್ಥಳ ಮತ್ತು ಸಾಮಗ್ರಿಗಳನ್ನು ಪ್ರತಿ ಬಾರಿಯ ಬಳಕೆಯ ಮುನ್ನ ಮತ್ತು ನಂತರ ಸ್ವಚ್ಛಗೊಳಿಸಬೇಕು ಎಂದೂ ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ

170 ಮಂದಿ ಸಾವು: ಮಂಗಳವಾರ ಬೆಳಗ್ಗೆ 8ರಿಂದ ಬುಧವಾರ ಬೆಳಗ್ಗೆ 8ರವರೆಗಿನ ಅವಧಿಯಲ್ಲಿ ದೇಶಾದ್ಯಂತ 170 ಮಂದಿ ಕೋವಿಡ್ ಮಹಾಮಾರಿಗೆ ಬಲಿಯಾಗಿದ್ದು, 6,387 ಮಂದಿಗೆ ಹೊಸದಾಗಿ ಸೋಂಕು ತಗುಲಿದೆ. ಕೇಂದ್ರ ಆರೋಗ್ಯ ಸಚಿವಾಲಯ ಈ ಮಾಹಿತಿ ನೀಡಿದ್ದು, ಈವರೆಗೆ 64,425 ಮಂದಿ ಗುಣಮುಖರಾಗಿ ಮನೆಗೆ ಮರಳಿರುವುದಾಗಿಯೂ ತಿಳಿಸಿದೆ. ಈ ಮೂಲಕ ದೇಶದಲ್ಲಿ ಗುಣಮುಖ ಪ್ರಮಾಣ ಶೇ.42.45ಕ್ಕೇರಿದೆ. ಒಂದೇ ದಿನದ ಅವಧಿಯಲ್ಲಿ ಮೃತಪಟ್ಟ 170 ಮಂದಿಯ ಪೈಕಿನವರು ಮಹಾರಾಷ್ಟ್ರದವರು.

ಅಗತ್ಯ ಔಷಧಗಳ ಹೋಂ ಡೆಲಿವರಿ
ಕಂಟೈನ್‌ಮೆಂಟ್‌ ವಲಯಗಳಲ್ಲಿ ಕ್ಯಾಲ್ಸಿಯಂ, ಐರನ್‌ /ಫಾಲಿಕ್‌ ಆ್ಯಸಿಡ್‌ ಮತ್ತು ಝಿಂಕ್‌ ಮಾತ್ರೆ ಸೇರಿದಂತೆ ಅತ್ಯವಶ್ಯಕ ಔಷಧಗಳನ್ನು ಮನೆ ಬಾಗಿಲಿಗೆ ತಲುಪಿಸಲು ವ್ಯವಸ್ಥೆ ಮಾಡುವ ಮೂಲಕ ಬಾಣಂತಿಯರು ಮತ್ತು ನವಜಾತ ಶಿಶುಗಳ ಆರೋಗ್ಯ ಕಾಪಾಡಿಕೊಳ್ಳಲು ನೆರವಾಗಬೇಕು ಎಂದು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರಕಾರ ಸಲಹೆ ನೀಡಿದೆ.

ಬುಧವಾರ ಬಿಡುಗಡೆ ಮಾಡಲಾದ ಮಾರ್ಗಸೂಚಿಯಲ್ಲಿ ಈ ಅಂಶವನ್ನು ಪ್ರಸ್ತಾಪಿಸಲಾಗಿದೆ. ಜತೆಗೆ, ವಿಟಮಿನ್‌ ಎ ಪ್ರೊಫೈಲಾಕ್ಸಿಸ್‌ ಯೋಜನೆ, ಅತಿಸಾರ ನಿಯಂತ್ರಣ ಅಭಿಯಾನ, ರಾಷ್ಟ್ರೀಯ ಜಂತುಹುಳ ನಿವಾರಣೆ ದಿನ, ಅನಿಮಿಯಾ ಶಿಬಿರ ಮುಂತಾದ ಅಭಿಯಾನಗಳಿಗೆ ಪರ್ಯಾಯವಾಗಿ, ಇವುಗಳಿಗೆ ಸಂಬಂಧಿಸಿದ ಔಷಧಗಳನ್ನೂ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆ ಮಾಡಬೇಕು ಎಂದೂ ತಿಳಿಸಲಾಗಿದೆ.

ಲಾಕ್‌ಡೌನ್‌ ಬ್ರೇಕ್‌: ಸರಕಾರವು ರಾಷ್ಟ್ರವ್ಯಾಪಿ ಲಾಕ್‌ ಡೌನ್‌ ಘೋಷಿಸಿರುವುದರಿಂದ ಸಾಕಷ್ಟು ಅನುಕೂಲವಾಗಿದೆ. ಸೋಂಕಿನ ವ್ಯಾಪಿಸುವಿಕೆಯ ವೇಗಕ್ಕೆ ಅದು ಬ್ರೇಕ್‌ ಹಾಕಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ದೇಶಾದ್ಯಂತ ನಿರ್ಬಂಧ ಹೇರಿದ ಕಾರಣಕ್ಕಾಗಿ, ಭಾರೀ ಸಂಖ್ಯೆಯ ಸಾವು ಹಾಗೂ ಸೋಂಕು ಪ್ರಕರಣಗಳು ತಪ್ಪಿವೆ.

ಅಲ್ಲದೆ, ಈ ಅವಧಿಯಲ್ಲಿ, ಕೋವಿಡ್ ಕೇಂದ್ರಿತ ಆರೋಗ್ಯ ಮೂಲಸೌಕರ್ಯ ನಿರ್ಮಾಣ, ಆನ್‌ ಲೈನ್‌ ತರಬೇತಿ, ವೆಬಿನಾರ್‌ ಗಳ ಮೂಲಕ ಮಾನವ ಸಂಪನ್ಮೂಲದ ಸಾಮರ್ಥ್ಯ ವೃದ್ಧಿ, ಪರೀಕ್ಷಾ ಸಾಮರ್ಥ್ಯ ಹೆಚ್ಚಳ, ರೋಗಪತ್ತೆ ಕೇಂದ್ರಗಳ ಏರಿಕೆ, ಔಷಧಗಳ ಪ್ರಯೋಗ, ಲಸಿಕೆ ಸಂಶೋಧನೆ ಮತ್ತಿತರ ಕೆಲಸಗಳನ್ನೂ ಮಾಡಲು ಸಾಧ್ಯವಾಯಿತು ಎಂದು ಕೇಂದ್ರ ಸಾಂಖ್ಯಿಕ ಮತ್ತು ಯೋಜನೆ ಅನುಷ್ಠಾನ ಸಚಿವಾಲಯ ಬುಧವಾರ ಹೇಳಿಕೊಂಡಿದೆ.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.